Homeದಲಿತ್ ಫೈಲ್ಸ್ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

- Advertisement -
- Advertisement -

2020 ರಲ್ಲಿ ಎಂಟು ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಕ್ಕಾಗಿ ಮಥುರಾದ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯವು ಮಂಗಳವಾರ 50 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ.

ಇದನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಕರೆದಿರುವ ಕೋರ್ಟ್‌, ಶವಪರೀಕ್ಷೆಯ ವರದಿಯು ಬಲಿಪಶುವಿನ ಖಾಸಗಿ ಭಾಗಗಳಲ್ಲಿ ಅನೇಕ ತೀಕ್ಷ್ಣವಾದ ಗಾಯಗಳಾಗಿದ್ದು, ಆಕೆಯ ಗರ್ಭಕೋಶಕ್ಕೆ ತೀವ್ರ ಹಾನಿಯಾಗಿದೆ. ಆಕೆಯ ಮೂತ್ರಪಿಂಡಗಳು ಮತ್ತು ಯಕೃತ್ತಿನಲ್ಲಿ ಆಂತರಿಕ ರಕ್ತಸ್ರಾವವಾಗಿದ್ದು, ಇದು ಆಕೆಯ ಸಾವಿಗೆ ಕಾರಣವಾಯಿತು ಎಂದು ಬಹಿರಂಗಪಡಿಸಿದೆ.

ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಸುಭಾಷ್ ಚತುರ್ವೇದಿ, “ಶವಪರೀಕ್ಷೆ ನಡೆಸಿದ ವೈದ್ಯ ಸೋನು ಚತುರ್ವೇದಿ, ಗುದನಾಳ ಮತ್ತು ಕುತ್ತಿಗೆಯ ಮೇಲೆ ಗಾಯಗಳು, ಆಕೆಯ ಭುಜದ ಮೇಲೆ ಆಳವಾದ ಕಡಿತದ ಗುರುತುಗಳು ಮತ್ತು ಆಕೆಯ ದೇಹದ ಹಲವಾರು ಭಾಗಗಳಲ್ಲಿ ಗೀರುಗಳನ್ನು ಸಹ ಕಂಡುಕೊಂಡರು. ತೀವ್ರ ರಕ್ತದ ನಷ್ಟದಿಂದಾಗಿ ಆಕೆ ಸಾವನ್ನಪ್ಪಿರಬಹುದು. ಏಕೆಂದರೆ, ಅಪರಾಧಿ ಆಕೆಯ ಮೇಲೆ ಹಲ್ಲೆ ಮಾಡಿದ ನಂತರ, ಕತ್ತು ಹಿಸುಕಿ ಕೊಂದು ರಾತ್ರಿ ಕಾಡಿನಲ್ಲಿ ಸಾಯಲು ಬಿಟ್ಟಿದ್ದ” ಎಂದು ವಿವರಿಸಿದ್ದಾರೆ.

ನವೆಂಬರ್ 26, 2020 ರಂದು, ಮಥುರಾ ಜಿಲ್ಲೆಯ ತನ್ನ ಹಳ್ಳಿಯ ಮಹಿಳೆಯೊಂದಿಗೆ ಉರುವಲು ಸಂಗ್ರಹಿಸುತ್ತಿದ್ದಾಗ ಎರಡನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಲಾಯಿತು. ಆ ಸಂಜೆ ಆಕೆ ಮನೆಗೆ ಹಿಂತಿರುಗದಿದ್ದಾಗ ಬಾಲಕಿಯ ತಂದೆ ನಾಪತ್ತೆ ದೂರು ದಾಖಲಿಸಿದರು. ನಂತರ ಪೊಲೀಸರು ವೃಂದಾವನದ ಅರಣ್ಯ ಪ್ರದೇಶದಲ್ಲಿ ಆಕೆಯ ಶವವನ್ನು ಪತ್ತೆಹಚ್ಚಿದ್ದರು. ಅಲ್ಲಿ, ಆಕೆಯದ್ದೇ ಬಟ್ಟೆಗಳಿಂದಲೇ ಕತ್ತು ಹಿಸುಕಿ ಕೊಲ್ಲಲಾಗಿತ್ತು.

ಬಾಲಕಿಯ ಗ್ರಾಮಸ್ಥನೇ ಆದ ಆರೋಪಿಯನ್ನು ಎರಡು ದಿನಗಳ ನಂತರ ನವೆಂಬರ್ 28 ರಂದು ಬಂಧಿಸಲಾಯಿತು.

ಐಪಿಸಿ ಸೆಕ್ಷನ್ 363 (ಅಪಹರಣ), 376 (ಅತ್ಯಾಚಾರ), 377 (ಪ್ರಕೃತಿಯ ಆದೇಶದ ವಿರುದ್ಧ ಸಂಭೋಗ), 302 (ಕೊಲೆ) ಮತ್ತು 201 (ಸಾಕ್ಷ್ಯ ನಾಶ) ಜೊತೆಗೆ ಪೋಕ್ಸೊ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಜನವರಿ 25, 2021 ರಂದು ಆರೋಪಪಟ್ಟಿ ಸಲ್ಲಿಸಲಾಯಿತು, ಮುಂದಿನ ತಿಂಗಳು ವಿಚಾರಣೆ ಪ್ರಾರಂಭವಾಯಿತು.

ವಿಚಾರಣೆಯ ಸಮಯದಲ್ಲಿ, ಪೊಲೀಸರು ಒಂಬತ್ತು ವ್ಯಕ್ತಿಗಳ ಸಾಕ್ಷ್ಯಗಳು, ವೈಜ್ಞಾನಿಕ ಪುರಾವೆಗಳು ಮತ್ತು ಶವಪರೀಕ್ಷೆಯ ಸಂಶೋಧನೆಗಳನ್ನು ಪ್ರಸ್ತುತಪಡಿಸಿದರು. ತನಿಖಾಧಿಕಾರಿಗಳು ಬಲಿಪಶುವಿನ ಉಗುರುಗಳಲ್ಲಿ ಅಪರಾಧಿಯ ಚರ್ಮದ ಅಂಗಾಂಶಗಳನ್ನು ಕಂಡುಕೊಂಡರು. ಗ್ರಾಮದ ಮಹಿಳೆಯೊಬ್ಬರು ಆ ವ್ಯಕ್ತಿ ಹುಡುಗಿಯರೊಂದಿಗೆ ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಸಾಕ್ಷ್ಯ ನೀಡಿದರು.

ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬ್ರಿಜೇಶ್ ಕುಮಾರ್ ಅವರು ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರು. ಇದು ಅವನ ಮೊದಲ ಅಪರಾಧ ಎಂದು ಚತುರ್ವೇದಿ ಹೇಳಿದರು. ಕೃತ್ಯದ ಅನಾಗರಿಕತೆಯನ್ನು ಪರಿಗಣಿಸಿ, ನ್ಯಾಯಾಲಯವು ಅವನನ್ನು ತಪ್ಪಿತಸ್ಥನೆಂದು ಪರಿಗಣಿಸಿ “ಅಪರಾಧಿಯನ್ನು ಸಾಯುವವರೆಗೂ ನೇತುಹಾಕಬೇಕು” ಎಂದು ತೀರ್ಪು ನೀಡಿತು. ಅಪರಾಧಿಗೆ 3,20,000 ರೂ. ದಂಡವನ್ನೂ ವಿಧಿಸಿದೆ.

ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...