Homeಮುಖಪುಟಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

ಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

- Advertisement -
- Advertisement -

ಲಖನೌ: ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಇಂದು ಮತದಾನ ನಡೆಯಲಿರುವ ಮಧ್ಯ ಯುಪಿ ಮತ್ತು ಅವಧ್ ‌ಪ್ರಾಂತ್ಯದಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಪ್ರಭಾವ ಹೊಂದಿವೆ. ರಾಮ ಮಂದಿರ ನಿರ್ಮಾಣದ ಆಂದೋಲನದ ಕೇಂದ್ರಬಿಂದುವಾಗಿದ್ದ ಅಯೋಧ್ಯೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಪವನ್ ಪಾಂಡೆ ವಿರುದ್ಧ ಬಿಜೆಪಿ ಶಾಸಕ ವಿಪಿ ಗುಪ್ತಾ ಸ್ಪರ್ಧಿಸಲಿದ್ದಾರೆ.

ದೇವಾಲಯ ಅಭಿವೃದ್ಧಿ ಹೆಸರಲ್ಲಿ ಅಯೋಧ್ಯೆ ಸಣ್ಣ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಅಯೋಧ್ಯೆಯ ಚರ್ಚಾ ವಿಷಯವಾಗಿದೆ. ಯೋಗಿ ಆದಿತ್ಯನಾಥ್ ಅವರೂ ವ್ಯಾಪಾರಿಗಳ ಕೂಗು ಆಲಿಸುವುದಾಗಿ ಹೇಳಿದ್ದಾರೆ. ಎಸ್‌ಪಿ ಹಾಗೂ ಪ್ರತಿಪಕ್ಷಗಳು ಇದೇ ವಿಷಯವನ್ನು ಮುನ್ನೆಲೆಗೆ ತಂದಿದ್ದು, ರಾಮಮಂದಿರ ಸಂಗತಿಗೆ ಹಿನ್ನೆಡೆಯಾಗಿದೆ. (ಈ ಕುರಿತ ವಿಶೇಷ ವರದಿ ಇಲ್ಲಿ ಓದಿರಿ)

ಇದನ್ನೂ ಓದಿರಿ: ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಪ್ರಯಾಗ್‌ರಾಜ್ (ಅಲಹಾಬಾದ್‌) ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಹಿಂದೂಗಳ ಪವಿತ್ರ ಸ್ಥಳವೆಂದೇ ಕರೆಯುವ ‘ಸಂಗಮ್‌‌’ ಇಲ್ಲಿದೆ. ಹಲವಾರು ಕೋಚಿಂಗ್ ಸೆಂಟರ್‌ಗಳಿಂದಾಗಿ ಎಲ್ಲಾ ಸಮುದಾಯಗಳ ವಿದ್ಯಾರ್ಥಿ ಸಮುದಾಯ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿಯಲ್ಲಿಯೂ ಇಂದು ಮತದಾನ ನಡೆಯುತ್ತಿದೆ.

2017ರ ಚುನಾವಣೆಯಲ್ಲಿ ಇಲ್ಲಿನ 61 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆದ್ದಿರುವುದರಿಂದ ಈ ಹಂತವು ಬಿಜೆಪಿಗೆ ನಿರ್ಣಾಯಕವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಬಿಜೆಪಿಗೆ ದೊಡ್ಡ ಸವಾಲಾಗಿದೆ.

ಈ ಭಾಗದಲ್ಲಿ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ವಿರುದ್ಧ ಕ್ರಮ ವಹಿಸಿರುವುದಾಗಿ ಬಿಜೆಪಿ ಚುನಾವಣಾ ಪ್ರಚಾರ ಮಾಡಿದ್ದರೆ, ಪ್ರತಿಪಕ್ಷಗಳು ಬಿಡಾಡಿ ದನಗಳ ವಿಷಯದಲ್ಲಿ ಬಿಜೆಪಿಯ ವಿರುದ್ಧ ಕಹಳೆ ಊದಿವೆ. ನಿರುದ್ಯೋಗ ಮತ್ತು ಗ್ರಾಮೀಣ ಜನರ ಸಂಕಟಗಳ ಕುರಿತು ಪ್ರತಿಪಕ್ಷಗಳು ಮಾತನಾಡಿವೆ.

ಇದನ್ನೂ ಓದಿರಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಇಂದು ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗ್‌ರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ ಮತ್ತು ಗೊಂಡಾ ಸೇರಿವೆ.

ಕೌಶಂಬಿ ಜಿಲ್ಲೆಯ ಸಿರತ್ತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ 5ನೇ ಹಂತದ ಕಣದಲ್ಲಿ ಹಲವು ಪ್ರಮುಖರು ಕಣದಲ್ಲಿದ್ದಾರೆ. ಕೇಶವ್ ಪ್ರಸಾದ್ ಅವರು ಅಪ್ನಾ ದಳ (ಕಾಮರವಾಡಿ) ಅಭ್ಯರ್ಥಿ ಪಲ್ಲವಿ ಪಟೇಲ್ ಅವರನ್ನು ಎದುರಿಸುತ್ತಿದ್ದಾರೆ. ಅಲಹಾಬಾದ್ ಪಶ್ಚಿಮದಿಂದ ಸಿದ್ಧಾರ್ಥ್ ನಾಥ್ ಸಿಂಗ್, ಪಟ್ಟಿಯಿಂದ (ಪ್ರತಾಪಗಢದಿಂದ) ರಾಜೇಂದ್ರ ಸಿಂಗ್ ಅಲಿಯಾಸ್ ಮೋತಿ ಸಿಂಗ್, ಅಲಹಾಬಾದ್ ದಕ್ಷಿಣದಿಂದ ನಂದ ಗೋಪಾಲ್ ಗುಪ್ತ ನಾಡಿ ಮತ್ತು ಮಂಕಾಪುರದಿಂದ (ಗೊಂಡಾ) ರಮಾಪತಿ ಶಾಸ್ತ್ರಿ ಸ್ಪರ್ಧೆಯಲ್ಲಿರುವ ಸಚಿವರಾಗಿದ್ದಾರೆ.

1993ರಿಂದ ಕುಂದಾದಿಂದ ಶಾಸಕರಾಗಿರುವ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರು ಮತ್ತೊಮ್ಮೆ ತಮ್ಮ ಪಕ್ಷ ಜನಸತ್ತಾ ದಳದಿಂದ ಕಣದಲ್ಲಿದ್ದಾರೆ. ಅವರ ಹಳೆಯ ಸಹಾಯಕ ಗುಲ್ಶನ್ ಯಾದವ್ ಅವರು ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ.

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ತಾಯಿ ಮತ್ತು ಅಪ್ನಾ ದಳ (ಕೆ) ನಾಯಕ ಕೃಷ್ಣಾ ಪಟೇಲ್ ಕೂಡ ಪ್ರತಾಪಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಪ್ನಾ ದಳ (ಕೆ), ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಆರಾಧನಾ ಮಿಶ್ರ ಮೋನಾ ಅವರು ಪ್ರತಾಪ್‌ಗಢದ ರಾಮ್‌ಪುರ ಖಾಸ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಫೆಬ್ರವರಿ 23ರಂದು ರಾಜ್ಯದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿತ್ತು. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿರಿ: ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...