Homeಮುಖಪುಟಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

ಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

- Advertisement -
- Advertisement -

ಲಖನೌ: ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಇಂದು ಮತದಾನ ನಡೆಯಲಿರುವ ಮಧ್ಯ ಯುಪಿ ಮತ್ತು ಅವಧ್ ‌ಪ್ರಾಂತ್ಯದಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಪ್ರಭಾವ ಹೊಂದಿವೆ. ರಾಮ ಮಂದಿರ ನಿರ್ಮಾಣದ ಆಂದೋಲನದ ಕೇಂದ್ರಬಿಂದುವಾಗಿದ್ದ ಅಯೋಧ್ಯೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಪವನ್ ಪಾಂಡೆ ವಿರುದ್ಧ ಬಿಜೆಪಿ ಶಾಸಕ ವಿಪಿ ಗುಪ್ತಾ ಸ್ಪರ್ಧಿಸಲಿದ್ದಾರೆ.

ದೇವಾಲಯ ಅಭಿವೃದ್ಧಿ ಹೆಸರಲ್ಲಿ ಅಯೋಧ್ಯೆ ಸಣ್ಣ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಅಯೋಧ್ಯೆಯ ಚರ್ಚಾ ವಿಷಯವಾಗಿದೆ. ಯೋಗಿ ಆದಿತ್ಯನಾಥ್ ಅವರೂ ವ್ಯಾಪಾರಿಗಳ ಕೂಗು ಆಲಿಸುವುದಾಗಿ ಹೇಳಿದ್ದಾರೆ. ಎಸ್‌ಪಿ ಹಾಗೂ ಪ್ರತಿಪಕ್ಷಗಳು ಇದೇ ವಿಷಯವನ್ನು ಮುನ್ನೆಲೆಗೆ ತಂದಿದ್ದು, ರಾಮಮಂದಿರ ಸಂಗತಿಗೆ ಹಿನ್ನೆಡೆಯಾಗಿದೆ. (ಈ ಕುರಿತ ವಿಶೇಷ ವರದಿ ಇಲ್ಲಿ ಓದಿರಿ)

ಇದನ್ನೂ ಓದಿರಿ: ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಪ್ರಯಾಗ್‌ರಾಜ್ (ಅಲಹಾಬಾದ್‌) ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಹಿಂದೂಗಳ ಪವಿತ್ರ ಸ್ಥಳವೆಂದೇ ಕರೆಯುವ ‘ಸಂಗಮ್‌‌’ ಇಲ್ಲಿದೆ. ಹಲವಾರು ಕೋಚಿಂಗ್ ಸೆಂಟರ್‌ಗಳಿಂದಾಗಿ ಎಲ್ಲಾ ಸಮುದಾಯಗಳ ವಿದ್ಯಾರ್ಥಿ ಸಮುದಾಯ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿಯಲ್ಲಿಯೂ ಇಂದು ಮತದಾನ ನಡೆಯುತ್ತಿದೆ.

2017ರ ಚುನಾವಣೆಯಲ್ಲಿ ಇಲ್ಲಿನ 61 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆದ್ದಿರುವುದರಿಂದ ಈ ಹಂತವು ಬಿಜೆಪಿಗೆ ನಿರ್ಣಾಯಕವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಬಿಜೆಪಿಗೆ ದೊಡ್ಡ ಸವಾಲಾಗಿದೆ.

ಈ ಭಾಗದಲ್ಲಿ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ವಿರುದ್ಧ ಕ್ರಮ ವಹಿಸಿರುವುದಾಗಿ ಬಿಜೆಪಿ ಚುನಾವಣಾ ಪ್ರಚಾರ ಮಾಡಿದ್ದರೆ, ಪ್ರತಿಪಕ್ಷಗಳು ಬಿಡಾಡಿ ದನಗಳ ವಿಷಯದಲ್ಲಿ ಬಿಜೆಪಿಯ ವಿರುದ್ಧ ಕಹಳೆ ಊದಿವೆ. ನಿರುದ್ಯೋಗ ಮತ್ತು ಗ್ರಾಮೀಣ ಜನರ ಸಂಕಟಗಳ ಕುರಿತು ಪ್ರತಿಪಕ್ಷಗಳು ಮಾತನಾಡಿವೆ.

ಇದನ್ನೂ ಓದಿರಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಇಂದು ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗ್‌ರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ ಮತ್ತು ಗೊಂಡಾ ಸೇರಿವೆ.

ಕೌಶಂಬಿ ಜಿಲ್ಲೆಯ ಸಿರತ್ತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ 5ನೇ ಹಂತದ ಕಣದಲ್ಲಿ ಹಲವು ಪ್ರಮುಖರು ಕಣದಲ್ಲಿದ್ದಾರೆ. ಕೇಶವ್ ಪ್ರಸಾದ್ ಅವರು ಅಪ್ನಾ ದಳ (ಕಾಮರವಾಡಿ) ಅಭ್ಯರ್ಥಿ ಪಲ್ಲವಿ ಪಟೇಲ್ ಅವರನ್ನು ಎದುರಿಸುತ್ತಿದ್ದಾರೆ. ಅಲಹಾಬಾದ್ ಪಶ್ಚಿಮದಿಂದ ಸಿದ್ಧಾರ್ಥ್ ನಾಥ್ ಸಿಂಗ್, ಪಟ್ಟಿಯಿಂದ (ಪ್ರತಾಪಗಢದಿಂದ) ರಾಜೇಂದ್ರ ಸಿಂಗ್ ಅಲಿಯಾಸ್ ಮೋತಿ ಸಿಂಗ್, ಅಲಹಾಬಾದ್ ದಕ್ಷಿಣದಿಂದ ನಂದ ಗೋಪಾಲ್ ಗುಪ್ತ ನಾಡಿ ಮತ್ತು ಮಂಕಾಪುರದಿಂದ (ಗೊಂಡಾ) ರಮಾಪತಿ ಶಾಸ್ತ್ರಿ ಸ್ಪರ್ಧೆಯಲ್ಲಿರುವ ಸಚಿವರಾಗಿದ್ದಾರೆ.

1993ರಿಂದ ಕುಂದಾದಿಂದ ಶಾಸಕರಾಗಿರುವ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರು ಮತ್ತೊಮ್ಮೆ ತಮ್ಮ ಪಕ್ಷ ಜನಸತ್ತಾ ದಳದಿಂದ ಕಣದಲ್ಲಿದ್ದಾರೆ. ಅವರ ಹಳೆಯ ಸಹಾಯಕ ಗುಲ್ಶನ್ ಯಾದವ್ ಅವರು ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ.

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ತಾಯಿ ಮತ್ತು ಅಪ್ನಾ ದಳ (ಕೆ) ನಾಯಕ ಕೃಷ್ಣಾ ಪಟೇಲ್ ಕೂಡ ಪ್ರತಾಪಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಪ್ನಾ ದಳ (ಕೆ), ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಆರಾಧನಾ ಮಿಶ್ರ ಮೋನಾ ಅವರು ಪ್ರತಾಪ್‌ಗಢದ ರಾಮ್‌ಪುರ ಖಾಸ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಫೆಬ್ರವರಿ 23ರಂದು ರಾಜ್ಯದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿತ್ತು. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿರಿ: ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...