Homeಮುಖಪುಟಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

ಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

- Advertisement -
- Advertisement -

ಲಖನೌ: ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಇಂದು ಮತದಾನ ನಡೆಯಲಿರುವ ಮಧ್ಯ ಯುಪಿ ಮತ್ತು ಅವಧ್ ‌ಪ್ರಾಂತ್ಯದಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಪ್ರಭಾವ ಹೊಂದಿವೆ. ರಾಮ ಮಂದಿರ ನಿರ್ಮಾಣದ ಆಂದೋಲನದ ಕೇಂದ್ರಬಿಂದುವಾಗಿದ್ದ ಅಯೋಧ್ಯೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಪವನ್ ಪಾಂಡೆ ವಿರುದ್ಧ ಬಿಜೆಪಿ ಶಾಸಕ ವಿಪಿ ಗುಪ್ತಾ ಸ್ಪರ್ಧಿಸಲಿದ್ದಾರೆ.

ದೇವಾಲಯ ಅಭಿವೃದ್ಧಿ ಹೆಸರಲ್ಲಿ ಅಯೋಧ್ಯೆ ಸಣ್ಣ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಅಯೋಧ್ಯೆಯ ಚರ್ಚಾ ವಿಷಯವಾಗಿದೆ. ಯೋಗಿ ಆದಿತ್ಯನಾಥ್ ಅವರೂ ವ್ಯಾಪಾರಿಗಳ ಕೂಗು ಆಲಿಸುವುದಾಗಿ ಹೇಳಿದ್ದಾರೆ. ಎಸ್‌ಪಿ ಹಾಗೂ ಪ್ರತಿಪಕ್ಷಗಳು ಇದೇ ವಿಷಯವನ್ನು ಮುನ್ನೆಲೆಗೆ ತಂದಿದ್ದು, ರಾಮಮಂದಿರ ಸಂಗತಿಗೆ ಹಿನ್ನೆಡೆಯಾಗಿದೆ. (ಈ ಕುರಿತ ವಿಶೇಷ ವರದಿ ಇಲ್ಲಿ ಓದಿರಿ)

ಇದನ್ನೂ ಓದಿರಿ: ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಪ್ರಯಾಗ್‌ರಾಜ್ (ಅಲಹಾಬಾದ್‌) ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಹಿಂದೂಗಳ ಪವಿತ್ರ ಸ್ಥಳವೆಂದೇ ಕರೆಯುವ ‘ಸಂಗಮ್‌‌’ ಇಲ್ಲಿದೆ. ಹಲವಾರು ಕೋಚಿಂಗ್ ಸೆಂಟರ್‌ಗಳಿಂದಾಗಿ ಎಲ್ಲಾ ಸಮುದಾಯಗಳ ವಿದ್ಯಾರ್ಥಿ ಸಮುದಾಯ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿಯಲ್ಲಿಯೂ ಇಂದು ಮತದಾನ ನಡೆಯುತ್ತಿದೆ.

2017ರ ಚುನಾವಣೆಯಲ್ಲಿ ಇಲ್ಲಿನ 61 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆದ್ದಿರುವುದರಿಂದ ಈ ಹಂತವು ಬಿಜೆಪಿಗೆ ನಿರ್ಣಾಯಕವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಬಿಜೆಪಿಗೆ ದೊಡ್ಡ ಸವಾಲಾಗಿದೆ.

ಈ ಭಾಗದಲ್ಲಿ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ವಿರುದ್ಧ ಕ್ರಮ ವಹಿಸಿರುವುದಾಗಿ ಬಿಜೆಪಿ ಚುನಾವಣಾ ಪ್ರಚಾರ ಮಾಡಿದ್ದರೆ, ಪ್ರತಿಪಕ್ಷಗಳು ಬಿಡಾಡಿ ದನಗಳ ವಿಷಯದಲ್ಲಿ ಬಿಜೆಪಿಯ ವಿರುದ್ಧ ಕಹಳೆ ಊದಿವೆ. ನಿರುದ್ಯೋಗ ಮತ್ತು ಗ್ರಾಮೀಣ ಜನರ ಸಂಕಟಗಳ ಕುರಿತು ಪ್ರತಿಪಕ್ಷಗಳು ಮಾತನಾಡಿವೆ.

ಇದನ್ನೂ ಓದಿರಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಇಂದು ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗ್‌ರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ ಮತ್ತು ಗೊಂಡಾ ಸೇರಿವೆ.

ಕೌಶಂಬಿ ಜಿಲ್ಲೆಯ ಸಿರತ್ತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ 5ನೇ ಹಂತದ ಕಣದಲ್ಲಿ ಹಲವು ಪ್ರಮುಖರು ಕಣದಲ್ಲಿದ್ದಾರೆ. ಕೇಶವ್ ಪ್ರಸಾದ್ ಅವರು ಅಪ್ನಾ ದಳ (ಕಾಮರವಾಡಿ) ಅಭ್ಯರ್ಥಿ ಪಲ್ಲವಿ ಪಟೇಲ್ ಅವರನ್ನು ಎದುರಿಸುತ್ತಿದ್ದಾರೆ. ಅಲಹಾಬಾದ್ ಪಶ್ಚಿಮದಿಂದ ಸಿದ್ಧಾರ್ಥ್ ನಾಥ್ ಸಿಂಗ್, ಪಟ್ಟಿಯಿಂದ (ಪ್ರತಾಪಗಢದಿಂದ) ರಾಜೇಂದ್ರ ಸಿಂಗ್ ಅಲಿಯಾಸ್ ಮೋತಿ ಸಿಂಗ್, ಅಲಹಾಬಾದ್ ದಕ್ಷಿಣದಿಂದ ನಂದ ಗೋಪಾಲ್ ಗುಪ್ತ ನಾಡಿ ಮತ್ತು ಮಂಕಾಪುರದಿಂದ (ಗೊಂಡಾ) ರಮಾಪತಿ ಶಾಸ್ತ್ರಿ ಸ್ಪರ್ಧೆಯಲ್ಲಿರುವ ಸಚಿವರಾಗಿದ್ದಾರೆ.

1993ರಿಂದ ಕುಂದಾದಿಂದ ಶಾಸಕರಾಗಿರುವ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರು ಮತ್ತೊಮ್ಮೆ ತಮ್ಮ ಪಕ್ಷ ಜನಸತ್ತಾ ದಳದಿಂದ ಕಣದಲ್ಲಿದ್ದಾರೆ. ಅವರ ಹಳೆಯ ಸಹಾಯಕ ಗುಲ್ಶನ್ ಯಾದವ್ ಅವರು ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ.

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ತಾಯಿ ಮತ್ತು ಅಪ್ನಾ ದಳ (ಕೆ) ನಾಯಕ ಕೃಷ್ಣಾ ಪಟೇಲ್ ಕೂಡ ಪ್ರತಾಪಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಪ್ನಾ ದಳ (ಕೆ), ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಆರಾಧನಾ ಮಿಶ್ರ ಮೋನಾ ಅವರು ಪ್ರತಾಪ್‌ಗಢದ ರಾಮ್‌ಪುರ ಖಾಸ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಫೆಬ್ರವರಿ 23ರಂದು ರಾಜ್ಯದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿತ್ತು. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿರಿ: ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...