Homeಮುಖಪುಟಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ...

ಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ ಅತ್ಯಾಚಾರ ಆರೋಪ

- Advertisement -
- Advertisement -

13 ವರ್ಷದ ಅತ್ಯಾಚಾರ ಸಂತ್ರಸ್ತೆ ಬಾಲಕಿಯು ದೂರು ನೀಡಲು ಠಾಣೆಗೆ ಹೋದಾಗ ಪೊಲೀಸ್ ಠಾಣೆಯಲ್ಲಿಯೇ ಮತ್ತೆ ಪೊಲೀಸ್‌ ಅಧಿಕಾರಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಆಘಾತಕಾರಿ ಘಟನೆಯು ಉತ್ತರ ಪ್ರದೇಶದ ಲಲಿತ್‌ಪುರ್‌ನಲ್ಲಿ ವರದಿಯಾಗಿದೆ.

ನಾಲ್ಕು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ಬಾಲಕಿಯು ತನ್ನ ಸಂಬಂಧಿಕರೊಂದಿಗೆ ದೂರು ನೀಡಲು ಲಲಿತ್‌ಪುರ್ ಪೊಲೀಸ್ ಠಾಣೆಗೆ ಹೋಗಿದ್ದರು. ಆಗ ಅಲ್ಲಿನ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಎಂಬಾತ ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯ ದೂರಿನ ಆಧಾರದಲ್ಲಿ ಆರೋಪಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ, ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಸದ್ಯ ಪರಾರಿಯಾಗಿದ್ದು, ಆತನ ಪತ್ತೆಗೆ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ, ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಹೇಳಿಕೆ ಆಧರಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಘಟನೆಯ ವಿವರ

ಬಾಲಕಿಯ ತಂದೆ ನೀಡಿದ ದೂರಿನಲ್ಲಿ, ಏಪ್ರಿಲ್ 22 ರಂದು ಸಂತ್ರಸ್ತ ಬಾಲಕಿಯನ್ನು ನಾಲ್ವರು ಅಪಹರಿಸಿ ಭೋಪಾಲ್‌ಗೆ ಕರೆದೊಯ್ದಿದ್ದರು. ಅಲ್ಲಿ ಅಮಾನವೀಯವಾಗಿ ಅತ್ಯಾಚಾರವೆಸಗಿ ವಾಪಸ್ ಲಲಿತ್‌ಪುರ್‌ಗೆ ತಂದು ಬಿಟ್ಟಿದ್ದರು. ಸಂತ್ರಸ್ತೆಯು ಪೊಲೀಸ್ ಠಾಣೆಗೆ ತೆರಳಿದಾಗ ಪೊಲೀಸರು ದೂರು ದಾಖಲಿಸಿಕೊಂಡು ಅವರ ಚಿಕ್ಕಮ್ಮನಿಗೆ ಬಾಲಕಿಯನ್ನು ತಲುಪಿಸಿದ್ದರು. ಅದರ ಮಾರನೇ ದಿನ ಹೇಳಿಕೆ ಪಡೆದುಕೊಳ್ಳಲು ಮತ್ತೆ ಪೊಲೀಸ್ ಠಾಣೆಗೆ ಬರುವಂತೆ ಹೇಳಿದ್ದರು. ಆ ದಿನ ಆರೋಪಿ ಸ್ಟೇಷನ್ ಹೌಸ್ ಆಫೀಸರ್ ಪೊಲೀಸ್ ಠಾಣೆಯಲ್ಲಿಯೇ ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಎದುರೇ ಅತ್ಯಾಚಾರಗೈದಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆರೋಪಿಗಳ ಪಟ್ಟಿಯಲ್ಲಿ ಆಕೆಯ ಚಿಕ್ಕಮ್ಮನ ಹೆಸರನ್ನೂ ಸೇರಿಸಲಾಗಿದೆ.

ಇದನ್ನೂ ಒದಿ: ಅತ್ಯಾಚಾರ ತಡೆಗಟ್ಟಲು ಸಾಧ್ಯ! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಆರೋಪಿಗಳ ಮೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಡುತ್ತಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ನಿಖಿಲ್ ಪಾಠಕ್ ಹೇಳಿದ್ದಾರೆ.

ಅತ್ಯಾಚಾರವೆಂಬ ಮನುಷ್ಯವಿರೋಧಿ, ಅಮಾನವೀಯ ಘಟನೆಗಳು ಉತ್ತರ ಪ್ರದೇಶದಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿವೆ. ಉನ್ನಾವೋ, ಹತ್ರಾಸ್‌ನಂತಹ ಭೀಕರ ಘಟನೆಗಳು ನಡೆದ ನಂತರವೂ ಸರ್ಕಾರ ಈ ವಿಷಯದಲ್ಲಿ ಗಂಭೀರವಾಗಿಲ್ಲ ಎಂಬುದುನ್ನು ಈ ಪ್ರಕರಣಗಳು ಸಾಬೀತುಪಡಿಸುತ್ತಿವೆ. ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಅತ್ಯಾಚಾರದ ಆರೋಪ ಕೇಳಿ ಬಂದಿರುವುದು ದೇಶವೇ ತಲೆತಗ್ಗಿಸಬೇಕಾದ ಸಂಗತಿಯಾಗಿದೆ. ಈ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕಾದ ಮತ್ತು ದನಿ ಎತ್ತಬೇಕಾದ ಜರೂರು ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...