Homeಮುಖಪುಟಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ...

ಉತ್ತರ ಪ್ರದೇಶ: ಅತ್ಯಾಚಾರದ ದೂರು ನೀಡಲು ಹೋದ 13 ವರ್ಷದ ಬಾಲಕಿ ಮೇಲೆ ಮತ್ತೆ ಪೊಲೀಸ್‌ನಿಂದಲೇ ಅತ್ಯಾಚಾರ ಆರೋಪ

- Advertisement -
- Advertisement -

13 ವರ್ಷದ ಅತ್ಯಾಚಾರ ಸಂತ್ರಸ್ತೆ ಬಾಲಕಿಯು ದೂರು ನೀಡಲು ಠಾಣೆಗೆ ಹೋದಾಗ ಪೊಲೀಸ್ ಠಾಣೆಯಲ್ಲಿಯೇ ಮತ್ತೆ ಪೊಲೀಸ್‌ ಅಧಿಕಾರಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಆಘಾತಕಾರಿ ಘಟನೆಯು ಉತ್ತರ ಪ್ರದೇಶದ ಲಲಿತ್‌ಪುರ್‌ನಲ್ಲಿ ವರದಿಯಾಗಿದೆ.

ನಾಲ್ಕು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದೇನೆ ಎಂದು ಬಾಲಕಿಯು ತನ್ನ ಸಂಬಂಧಿಕರೊಂದಿಗೆ ದೂರು ನೀಡಲು ಲಲಿತ್‌ಪುರ್ ಪೊಲೀಸ್ ಠಾಣೆಗೆ ಹೋಗಿದ್ದರು. ಆಗ ಅಲ್ಲಿನ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಎಂಬಾತ ಮತ್ತೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯ ದೂರಿನ ಆಧಾರದಲ್ಲಿ ಆರೋಪಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ, ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.

ಆರೋಪಿ ಸ್ಟೇಷನ್ ಹೌಸ್ ಆಫೀಸರ್ ತಿಲಕ್‌ಧಾರಿ ಸರೋಜ್ ಸದ್ಯ ಪರಾರಿಯಾಗಿದ್ದು, ಆತನ ಪತ್ತೆಗೆ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ, ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳ ಹೇಳಿಕೆ ಆಧರಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಘಟನೆಯ ವಿವರ

ಬಾಲಕಿಯ ತಂದೆ ನೀಡಿದ ದೂರಿನಲ್ಲಿ, ಏಪ್ರಿಲ್ 22 ರಂದು ಸಂತ್ರಸ್ತ ಬಾಲಕಿಯನ್ನು ನಾಲ್ವರು ಅಪಹರಿಸಿ ಭೋಪಾಲ್‌ಗೆ ಕರೆದೊಯ್ದಿದ್ದರು. ಅಲ್ಲಿ ಅಮಾನವೀಯವಾಗಿ ಅತ್ಯಾಚಾರವೆಸಗಿ ವಾಪಸ್ ಲಲಿತ್‌ಪುರ್‌ಗೆ ತಂದು ಬಿಟ್ಟಿದ್ದರು. ಸಂತ್ರಸ್ತೆಯು ಪೊಲೀಸ್ ಠಾಣೆಗೆ ತೆರಳಿದಾಗ ಪೊಲೀಸರು ದೂರು ದಾಖಲಿಸಿಕೊಂಡು ಅವರ ಚಿಕ್ಕಮ್ಮನಿಗೆ ಬಾಲಕಿಯನ್ನು ತಲುಪಿಸಿದ್ದರು. ಅದರ ಮಾರನೇ ದಿನ ಹೇಳಿಕೆ ಪಡೆದುಕೊಳ್ಳಲು ಮತ್ತೆ ಪೊಲೀಸ್ ಠಾಣೆಗೆ ಬರುವಂತೆ ಹೇಳಿದ್ದರು. ಆ ದಿನ ಆರೋಪಿ ಸ್ಟೇಷನ್ ಹೌಸ್ ಆಫೀಸರ್ ಪೊಲೀಸ್ ಠಾಣೆಯಲ್ಲಿಯೇ ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಎದುರೇ ಅತ್ಯಾಚಾರಗೈದಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆರೋಪಿಗಳ ಪಟ್ಟಿಯಲ್ಲಿ ಆಕೆಯ ಚಿಕ್ಕಮ್ಮನ ಹೆಸರನ್ನೂ ಸೇರಿಸಲಾಗಿದೆ.

ಇದನ್ನೂ ಒದಿ: ಅತ್ಯಾಚಾರ ತಡೆಗಟ್ಟಲು ಸಾಧ್ಯ! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಆರೋಪಿಗಳ ಮೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಡುತ್ತಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ನಿಖಿಲ್ ಪಾಠಕ್ ಹೇಳಿದ್ದಾರೆ.

ಅತ್ಯಾಚಾರವೆಂಬ ಮನುಷ್ಯವಿರೋಧಿ, ಅಮಾನವೀಯ ಘಟನೆಗಳು ಉತ್ತರ ಪ್ರದೇಶದಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿವೆ. ಉನ್ನಾವೋ, ಹತ್ರಾಸ್‌ನಂತಹ ಭೀಕರ ಘಟನೆಗಳು ನಡೆದ ನಂತರವೂ ಸರ್ಕಾರ ಈ ವಿಷಯದಲ್ಲಿ ಗಂಭೀರವಾಗಿಲ್ಲ ಎಂಬುದುನ್ನು ಈ ಪ್ರಕರಣಗಳು ಸಾಬೀತುಪಡಿಸುತ್ತಿವೆ. ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಗಳ ವಿರುದ್ಧವೇ ಅತ್ಯಾಚಾರದ ಆರೋಪ ಕೇಳಿ ಬಂದಿರುವುದು ದೇಶವೇ ತಲೆತಗ್ಗಿಸಬೇಕಾದ ಸಂಗತಿಯಾಗಿದೆ. ಈ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕಾದ ಮತ್ತು ದನಿ ಎತ್ತಬೇಕಾದ ಜರೂರು ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...