Homeಮುಖಪುಟಯುಪಿ: ಮತಾಂತರ ಆರೋಪದಲ್ಲಿ ಮುಸ್ಲಿಂ ವಿದ್ವಾಂಸ ಮೌಲಾನಾ ಕಲೀಂ ಸಿದ್ದಿಕಿ ಬಂಧನ

ಯುಪಿ: ಮತಾಂತರ ಆರೋಪದಲ್ಲಿ ಮುಸ್ಲಿಂ ವಿದ್ವಾಂಸ ಮೌಲಾನಾ ಕಲೀಂ ಸಿದ್ದಿಕಿ ಬಂಧನ

ಖ್ಯಾತ ಇಸ್ಲಾಮಿಕ್ ವಿದ್ವಾಂಸನನ್ನು ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಮುಂಚಿತವಾಗಿ ಬಂಧಿಸಲಾಗಿದೆ ಎಂದು ಎಎಪಿ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

ಉತ್ತರ ಪ್ರದೇಶ ಭಯೋತ್ಪಾದನಾ ವಿರೋಧಿ ದಳ(ಎಟಿಎಸ್‌)ವು ಸೆಪ್ಟೆಂಬರ್ 21 ರ ಮಂಗಳವಾರದಂದು, ಇಸ್ಲಾಮಿಕ್ ವಿದ್ವಾಂಸ ಮೌಲಾನಾ ಕಲೀಂ ಸಿದ್ದಿಕಿ ಅವರನ್ನು ಮೀರತ್‌ನಿಂದ ಧಾರ್ಮಿಕ ಮತಾಂತರ ಆರೋಪದ ಮೇಲೆ ಬಂಧಿಸಲಾಗಿದೆ. ಮೌಲಾನಾ ಅವರು ಗ್ಲೋಬಲ್‌ ಪೀಸ್‌ ಸೆಂಟರ್‌‌ ಮತ್ತು ಜಮೀಯತ್-ಎ-ವಲಿಯುಲ್ಲಾ ಇದರ ಅಧ್ಯಕ್ಷರೂ ಆಗಿದ್ದಾರೆ.

“ಭಾರತದ ಅತಿದೊಡ್ಡ ಧಾರ್ಮಿಕ ಮತಾಂತರ ಗುಂಪಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಟಿಎಸ್, ಮುಜಫರ್‌ನಗರದ ನಿವಾಸಿ ಮೌಲಾನಾ ಕಲೀಂ ಸಿದ್ದಿಕಿ ಅವರನ್ನು ಬಂಧಿಸಿದೆ. ಅವರು ಜಮಿಯಾ ಇಮಾಮ್ ವಲಿಯುಲ್ಲಾ ಟ್ರಸ್ಟ್‌ ನಡೆಸುತ್ತಿದ್ದರು. ಈ ಟ್ರಸ್ಟ್‌ ವಿದೇಶಗಳಿಂದ ಧನಸಹಾಯ ಪಡೆದು ಹಲವಾರು ಮದರಸಾಗಳಿಗೆ ಧನಸಹಾಯ ನೀಡುತ್ತಿತ್ತು” ಎಂದು ಪೊಲೀಸರು ಹೇಳಿದ್ದಾರೆಂದು ANI ವರದಿ ಮಾಡಿದೆ.

ಮೌಲಾನಾ ಅವರು ಮಂಗಳವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮುಜಾಫರ್ ನಗರಕ್ಕೆ ಹಿಂದಿರುಗುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸ್ನೇಹಿತೆಯ ಭೇಟಿ – ಮುಸ್ಲಿಂ ಯುವಕನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು

“ಮೌಲಾನಾ ಕಲೀಂ ಸಿದ್ದಿಕಿ ಅವರ ಟ್ರಸ್ಟ್ ಬಹರೇನ್‌ನಿಂದ ರೂ 1.5 (ಕೋಟಿ) ಸೇರಿದಂತೆ ಒಟ್ಟು 3 ಕೋಟಿ ವಿದೇಶಿ ಧನಸಹಾಯ ಪಡೆದಿದೆ. ಈ ಪ್ರಕರಣದ ತನಿಖೆಗಾಗಿ ಎಟಿಎಸ್‌ನ ಆರು ತಂಡಗಳನ್ನು ರಚಿಸಲಾಗಿದೆ” ಎಂದು ಉತ್ತರ ಪ್ರದೇಶ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಉತ್ತರ ಪ್ರದೇಶದ ಎಟಿಎಸ್ ಇನ್ಸ್‌ಪೆಕ್ಟರ್ ಜನರಲ್ ಜಿಕೆ ಗೋಸ್ವಾಮಿ ಅವರು, ಈ ಗುಂಪು ಭಾರತದಲ್ಲಿ ಸುಮಾರು 1000 ಜನರನ್ನು ಮತಾಂತರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಬಂಧನವನ್ನು ರಾಜಕೀಯ ನಡೆ ಎಂದು ಕರೆದಿದ್ದಾರೆ.

“ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ಕಲೀಂ ಸಿದ್ದಿಕಿ ಸಾಹಬ್ ಅವರನ್ನು ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಮುಂಚಿತವಾಗಿ ಬಂಧಿಸಲಾಗಿದೆ. ಮುಸ್ಲಿಮರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಈ ವಿಷಯಗಳಲ್ಲಿ ಜಾತ್ಯತೀತ ಪಕ್ಷಗಳ ಮೌನವು ಬಿಜೆಪಿಗೆ ಹೆಚ್ಚಿನ ಬಲವನ್ನು ನೀಡುತ್ತದೆ. ಬಿಜೆಪಿ ಗೆಲ್ಲಲು ಇನ್ನು ಎಷ್ಟು ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು – ಮುಸ್ಲಿಂ ಪತ್ರಕರ್ತನಿಗೆ ಥಳಿಸಿದ ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...