Homeಮುಖಪುಟಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹೈದರಾಬಾದ್‌‌ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್‌ ಇಂಡಿಯಾ ಮಜ್ಲಿಸೇ ಇತ್ತಿಹಾದುಲ್ ಮುಸ್ಲಿಮೀನ್‌(ಎಐಎಂಐಎಂ) ಸ್ಪರ್ಧಿಸುತ್ತಿದ್ದು, ಪಕ್ಷದಿಂದ ಕಣಕ್ಕಿಳಿಸಲು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು ಪ್ರಾರಂಭಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಕನಿಷ್ಠ 100 ಸ್ಥಾನಗಳಿಗೆ ಸ್ಪರ್ಧಿಸಲು ಪಕ್ಷ ನಿರ್ಧರಿಸಿದೆ ಎಂದು ಅಸದುದ್ದೀನ್ ಒವೈಸಿ ಅವರು ಭಾನುವಾರ ಹೇಳಿದ್ದಾರೆ. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ, ಪ್ರಮುಖ ಒಬಿಸಿ ಮುಖಂಡ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಸಣ್ಣ ಪಕ್ಷಗಳ ಒಕ್ಕೂಟವಾದ ‘ಭಗಿದಾರಿ ಸಂಕಲ್ಪ ಮೋರ್ಚಾ’ದೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಂಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ಅಸಾದುದ್ದೀನ್ ಓವೈಸಿಯವರ AIMIM ಪಕ್ಷ ಐದು ಸ್ಥಾನ ಗೆದ್ದಿದ್ದು ಹೇಗೆ?

ರಾಜ್‌ಭರ್‌‌ ಅವರ ‘ಭಗಿದಾರಿ ಸಂಕಲ್ಪ ಮೋರ್ಚಾ’ದೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಂಡಿದೆ ಎಂದು ಸ್ವತಃ ಒವೈಸಿ ಹೇಳಿದ್ದು, “ಮುಂಬರುವ ಯುಪಿ ಚುನಾವಣೆಯಲ್ಲಿ ನಾವು 100 ಸ್ಥಾನಗಳಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಪಕ್ಷವು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ” ಎಂದು ಅವರು ತಿಳಿಸಿದ್ದಾರೆ.

“ನಾವು ಓಂ ಪ್ರಕಾಶ್ ರಾಜ್‌ಭರ್‌‌ ಅವರ ‘ಭಗಿದಾರಿ ಸಂಕಲ್ಪ ಮೋರ್ಚಾ’ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಚುನಾವಣೆ ಅಥವಾ ಮೈತ್ರಿಗಳಿಗೆ ಸಂಬಂಧಿಸಿದಂತೆ ನಾವು ಬೇರೆ ಯಾವುದೆ ಪಕ್ಷಗಳ ಜೊತೆಗೆ ಮಾತುಕತೆ ನಡೆಸಿಲ್ಲ” ಎಂದು ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

“ಪೂರ್ವಾಂಚಲ್ ಜಿಲ್ಲೆಯ ಬಹ್ರೇಚ್‌ನಲ್ಲಿ ಉತ್ತರ ಪ್ರದೇಶ ಚುನಾವಣಾ ಕ್ಯಾಂಪ್‌ ಕಚೇರಿ ಸಿದ್ದವಾಗಿದೆ. ಶೀಘ್ರದಲ್ಲೇ ಕಚೇರಿ ಉದ್ಘಾಟನೆಯಾಗಲಿದೆ” ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್‌ ಅಲಿ ಹೇಳಿದ್ದಾರೆ.

ಇದನ್ನೂ ಓದಿ: ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ಎಐಎಂಐಎಂ ಜೊತೆಗೆ, ‘ಭಗಿದಾರಿ ಸಂಕಲ್ಪ ಮೋರ್ಚಾ’ ಮೈತ್ರಿಯಲ್ಲಿ ಕೃಷ್ಣ ಪಟೇಲ್ ಅವರ ಅಪ್ನಾ ದಳ, ಜನ ಅಧಿಕಾರ ಪಕ್ಷ ಮತ್ತು ಚಂದ್ರಶೇಖರ್ ರಾವಣ್‌‌ ಅವರ ‘ಆಜಾದ್ ಸಮಾಜ ಪಕ್ಷ’ದಂತಹ ಎಂಟು ಪಕ್ಷಗಳಿವೆ.

ಕಳೆದ ವರ್ಷದ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಎಐಐಎಂಐಎಂ 20 ಸ್ಥಾನಗಳಲ್ಲಿ ಸ್ಪರ್ಧಿಸಿ ಐದು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇವೆಲ್ಲವೂ ಪಶ್ಚಿಮ ಬಂಗಾಳದ ಗಡಿಯನ್ನು ಹಂಚಿಕೊಂಡಿರುವ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿದೆ.

ಆದರೆ ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಶೂನ್ಯ ಸಾಧನೆ ಮಾಡಿತ್ತು. ಅಲ್ಲಿ ಕ್ರಮವಾಗಿ ಏಳು ಮತ್ತು ಮೂರು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪಕ್ಷವು ಕಣಕ್ಕಿಳಿಸಿತ್ತು.

2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಎರಡು ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...