Homeಮುಖಪುಟಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ

ಉತ್ತಮ ಕೆಲಸ ಮಾಡುತ್ತಿರುವಾಗ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಯಾಕೆ ಕಿತ್ತು ಹಾಕಬೇಕು ಎಂದು ಬಿಜೆಪಿ ಪ್ರಶ್ನಿಸಿದೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಉಳಿಯಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನ್ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಪ್ರಕಟಿಸಿದ್ದಾರೆ. ಬಿಜೆಪಿಯ ರಾಜಸ್ಥಾನ ಮತ್ತು ಕರ್ನಾಟಕ ಘಟಕಗಳ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್, ರಾಜಸ್ಥಾನದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಸಂಸದೀಯ ಮಂಡಳಿಯು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಜೈಪುರ ಭೇಟಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್‌‌‌ ಸಿಂಗ್, “ಈಗಾಗಲೇ ಉತ್ತಮ ಕೆಲಸ ಮಾಡುತ್ತಿರುವಾಗ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಯಾಕೆ ಕಿತ್ತು ಹಾಕಬೇಕು” ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿಭಾಯಿಸಿದ ಬಗ್ಗೆ ಆದಿತ್ಯನಾಥ್ ವಿರುದ್ಧ ಪಕ್ಷದಲ್ಲಿನ ಆಕ್ಷೇಪಗಳು ಹೆಚ್ಚಾಗುತ್ತಿದ್ದಂತೆ ಈ ಹೇಳಿಕೆಗಳು ಹೊರ ಬಂದಿವೆ.

ಈ ಹಿಂದೆ ಪಕ್ಷದ ಹಿರಿಯ ಮುಖಂಡ, ಉತ್ತರ ಪ್ರದೇಶ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಮುಂದಿನ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿಯನ್ನು ಬಿಜೆಪಿಯ ಕೇಂದ್ರ ನಾಯಕತ್ವವು ಅಂತಿಮಗೊಳಿಸುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ಇತ್ತೀಚೆಗೆ ಇದೇ ರೀತಿಯ ಹೇಳಿಕೆ ನೀಡಿದ್ದು, ಮುಂಬರುವ ಚುನಾವಣೆಗಳು ಯಾರ ಅಡಿಯಲ್ಲಿ ನಡೆಯಲಿವೆ ಎಂದು ಪಕ್ಷದ ರಾಷ್ಟ್ರೀಯ ನಾಯಕತ್ವ ನಿರ್ಧರಿಸುತ್ತದೆ ಎಂದು ಹೇಳಿದ್ದರು.

ರಾಜಸ್ಥಾನದ ರಾಜ್ಯ ಬಿಜೆಪಿ ಸಮಿತಿ ಮತ್ತು ಮಾಜಿ ಸಿಎಂ ವಸುಂಧರಾ ರಾಜೆ ಗುಂಪಿನ ನಡುವೆ ನಡೆಯುತ್ತಿರುವ ಜಗಳದ ನಡುವೆಯೆ ರಾಜಸ್ಥಾನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಮಾತನಾಡಿದ ಅರುಣ್‌‌ ಸಿಂಗ್, “2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಸಂಸದೀಯ ಮಂಡಳಿ ನಿರ್ಧರಿಸುತ್ತದೆ” ಎಂದು ಹೇಳಿದ್ದಾರೆ.

ರಾಜ್ಯ ಸಮಿತಿಯ ಕಾರ್ಯಚಟುವಟಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ವಸುಂಧರ ರಾಜೇ ಅವರ ಬೆಂಬಲಿಗರಿಗೆ ಅವರು ಎಚ್ಚರಿಕೆ ನೀಡಿದ್ದಾರೆ. “ಪಕ್ಷದ ಬಗ್ಗೆ ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಲಾಭವಾಗುತ್ತದೆಯೇ ಅಥವಾ ನಷ್ಟವನ್ನುಂಟುಮಾಡುತ್ತದೆಯೇ ಎಂದು ಹೇಳಿಕೆಗಳನ್ನು ನೀಡುವವರು ಮೊದಲು ತಮ್ಮ ಅಭಿಪ್ರಾಯವು ಮೌಲ್ಯಮಾಪನ ಮಾಡಬೇಕು” ಎಂದು ಅರಣ್‌ ಸಿಂಗ್‌ ಹೇಳಿದ್ದಾರೆ.

ನಾಯಕರ ಹೇಳಿಕೆಗಳು ಪಕ್ಷವನ್ನು ಯಾವುದೇ ರೀತಿಯಲ್ಲಿ ತೊಂದರೆಗೊಳಗಾಗುವಂತೆ ಮಾಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...