Homeಮುಖಪುಟಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ: ಅಮಿತ್‌ ಶಾ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿನ ದಿಗ್ವಿಜಯವು 2024ರ ಲೋಕಸಭಾ ಚುನಾವಣೆಗೆ ದಾರಿಯಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡು ಅವರು ಮಾತನಾಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ತಳಮಟ್ಟದ ಚುನಾವಣಾ ತಂತ್ರಗಾರಿಕೆಯನ್ನು ರೂಪಿಸುವ ನಿಟ್ಟಿನಲ್ಲಿ ಅಮಿತ್‌ ಶಾ ಮಾತನಾಡಿದ್ದು, “ಕಾರ್ಯಕರ್ತರು ಪ್ರತಿ ಕುಟುಂಬದ ಕನಿಷ್ಠ ಮೂರು ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಏಕೆಂದರೆ ಉತ್ತರ ಪ್ರದೇಶದ ಗೆಲುವು ಮುಂಬರುವ ಲೋಕಸಭೆಗೆ ತೆರೆದ ಬಾಗಿಲಾಗಲಿದೆ” ಎಂದು ಕರೆ ನೀಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿದ ಅವರು, ಬೂತ್ ಮಟ್ಟದ ಪ್ರಚಾರಗಳನ್ನು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಕೇಳಿಕೊಂಡರು. “ಇದಕ್ಕಾಗಿ ಬೂತ್ ಸಮಿತಿಗಳನ್ನು ಸ್ಥಾಪಿಸಬೇಕು” ಎಂದು ಸೂಚಿಸಿದರು.

ಇದನ್ನೂ ಓದಿರಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

“ಬಿಜೆಪಿಗೆ ಮತ ಹಾಕಲು ತಲಾ 60 ಜನರ ಮೇಲೆ ಪ್ರತಿಯೊಬ್ಬ ವ್ಯಕ್ತಿಯೂ ಪ್ರಭಾವ ಬೀರಬೇಕು. ಒಂದು ವಲಯದಿಂದ ಕನಿಷ್ಠ 20 ಮತಗಳನ್ನು ಗಳಿಸುವ ಗುರಿಯನ್ನು ಇಟ್ಟುಕೊಳ್ಳಬೇಕು. ಪಕ್ಷದ ಪ್ರತಿ ಕಾರ್ಯಕರ್ತ ಪ್ರತಿ ಕುಟುಂಬಗಳಿಂದ ತಲಾ ಮೂರು ಮತಗಳನ್ನು ಗಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಇದು ಸಾಮಾನ್ಯ ಚುನಾವಣೆಯಲ್ಲ. ಇದು ದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ರಾಷ್ಟ್ರದ ಘನತೆಯನ್ನು ಎತ್ತಿ ಹಿಡಿಯುವ ಚುನಾವಣೆಯಾಗಿದೆ. ರೈತರಿಗೆ ಉಚಿತ ಗ್ಯಾಸ್ ಸಿಲಿಂಡರ್‌ ಯೋಜನೆ, ಪ್ರಧಾನಿಯವರ ಕಾರ್ಯಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಸಬೇಕು” ಎಂದಿರುವ ಅವರು, ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ದೇಶದಾದ್ಯಂತ ರೈತರು ನಡೆಸುತ್ತಿರುವ ಹೋರಾಟದ ಕುರಿತು ಅವರು ಪ್ರಸ್ತಾಪಿಸಲಿಲ್ಲ.

“ಕಾಂಗ್ರೆಸ್ ಕಾರ್ಯಕರ್ತರು ಇಷ್ಟು ವರ್ಷಗಳಿಂದ ಭ್ರಷ್ಟಾಚಾರ, ಅವ್ಯವಸ್ಥೆ ಮತ್ತು ವಿಭಜಕ ರಾಜಕೀಯದಲ್ಲಿ ಮಾತ್ರ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ” ಎಂದಿದ್ದಾರೆ.

“ಯೋಗಿ ಆದಿತ್ಯನಾಥ್ ಅವರ ಸರ್ಕಾರ ಗೂಂಡಾರಾಜ್ ಹಾಗೂ ಮಾಫಿಯಾವನ್ನು ನಿಯಂತ್ರಿಸಿದೆ. ನಾವು ಮುಂದಿನ ಐದು ವರ್ಷಗಳಲ್ಲಿ ಉತ್ತಮ ಉತ್ತರ ಪ್ರದೇಶವನ್ನು ರೂಪಿಸಬೇಕಾಗಿದೆ. ಯುಪಿ ಗೆಲುವು 2024ಕ್ಕೆ ಬಾಗಿಲು ತೆರೆಯುತ್ತದೆ” ಎಂದು ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಗೂಂಡಾ ರಾಜ್ ಬಗ್ಗೆ ಜನರಿಗೆ ತಿಳಿಸಲು ಮನೆಮನೆಗೆ ಕಾರ್ಯಕರ್ತರು ಭೇಟಿ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 28 ವರ್ಷಗಳಿಂದಾದ ಪ್ರಯೋಗಗಳ ಫಲ- ಒಂದು ವರ್ಷದ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...