Homeಮುಖಪುಟಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ: ಅಮಿತ್‌ ಶಾ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿನ ದಿಗ್ವಿಜಯವು 2024ರ ಲೋಕಸಭಾ ಚುನಾವಣೆಗೆ ದಾರಿಯಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡು ಅವರು ಮಾತನಾಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ತಳಮಟ್ಟದ ಚುನಾವಣಾ ತಂತ್ರಗಾರಿಕೆಯನ್ನು ರೂಪಿಸುವ ನಿಟ್ಟಿನಲ್ಲಿ ಅಮಿತ್‌ ಶಾ ಮಾತನಾಡಿದ್ದು, “ಕಾರ್ಯಕರ್ತರು ಪ್ರತಿ ಕುಟುಂಬದ ಕನಿಷ್ಠ ಮೂರು ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಏಕೆಂದರೆ ಉತ್ತರ ಪ್ರದೇಶದ ಗೆಲುವು ಮುಂಬರುವ ಲೋಕಸಭೆಗೆ ತೆರೆದ ಬಾಗಿಲಾಗಲಿದೆ” ಎಂದು ಕರೆ ನೀಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿದ ಅವರು, ಬೂತ್ ಮಟ್ಟದ ಪ್ರಚಾರಗಳನ್ನು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಕೇಳಿಕೊಂಡರು. “ಇದಕ್ಕಾಗಿ ಬೂತ್ ಸಮಿತಿಗಳನ್ನು ಸ್ಥಾಪಿಸಬೇಕು” ಎಂದು ಸೂಚಿಸಿದರು.

ಇದನ್ನೂ ಓದಿರಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

“ಬಿಜೆಪಿಗೆ ಮತ ಹಾಕಲು ತಲಾ 60 ಜನರ ಮೇಲೆ ಪ್ರತಿಯೊಬ್ಬ ವ್ಯಕ್ತಿಯೂ ಪ್ರಭಾವ ಬೀರಬೇಕು. ಒಂದು ವಲಯದಿಂದ ಕನಿಷ್ಠ 20 ಮತಗಳನ್ನು ಗಳಿಸುವ ಗುರಿಯನ್ನು ಇಟ್ಟುಕೊಳ್ಳಬೇಕು. ಪಕ್ಷದ ಪ್ರತಿ ಕಾರ್ಯಕರ್ತ ಪ್ರತಿ ಕುಟುಂಬಗಳಿಂದ ತಲಾ ಮೂರು ಮತಗಳನ್ನು ಗಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಇದು ಸಾಮಾನ್ಯ ಚುನಾವಣೆಯಲ್ಲ. ಇದು ದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ರಾಷ್ಟ್ರದ ಘನತೆಯನ್ನು ಎತ್ತಿ ಹಿಡಿಯುವ ಚುನಾವಣೆಯಾಗಿದೆ. ರೈತರಿಗೆ ಉಚಿತ ಗ್ಯಾಸ್ ಸಿಲಿಂಡರ್‌ ಯೋಜನೆ, ಪ್ರಧಾನಿಯವರ ಕಾರ್ಯಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಸಬೇಕು” ಎಂದಿರುವ ಅವರು, ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ದೇಶದಾದ್ಯಂತ ರೈತರು ನಡೆಸುತ್ತಿರುವ ಹೋರಾಟದ ಕುರಿತು ಅವರು ಪ್ರಸ್ತಾಪಿಸಲಿಲ್ಲ.

“ಕಾಂಗ್ರೆಸ್ ಕಾರ್ಯಕರ್ತರು ಇಷ್ಟು ವರ್ಷಗಳಿಂದ ಭ್ರಷ್ಟಾಚಾರ, ಅವ್ಯವಸ್ಥೆ ಮತ್ತು ವಿಭಜಕ ರಾಜಕೀಯದಲ್ಲಿ ಮಾತ್ರ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ” ಎಂದಿದ್ದಾರೆ.

“ಯೋಗಿ ಆದಿತ್ಯನಾಥ್ ಅವರ ಸರ್ಕಾರ ಗೂಂಡಾರಾಜ್ ಹಾಗೂ ಮಾಫಿಯಾವನ್ನು ನಿಯಂತ್ರಿಸಿದೆ. ನಾವು ಮುಂದಿನ ಐದು ವರ್ಷಗಳಲ್ಲಿ ಉತ್ತಮ ಉತ್ತರ ಪ್ರದೇಶವನ್ನು ರೂಪಿಸಬೇಕಾಗಿದೆ. ಯುಪಿ ಗೆಲುವು 2024ಕ್ಕೆ ಬಾಗಿಲು ತೆರೆಯುತ್ತದೆ” ಎಂದು ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಗೂಂಡಾ ರಾಜ್ ಬಗ್ಗೆ ಜನರಿಗೆ ತಿಳಿಸಲು ಮನೆಮನೆಗೆ ಕಾರ್ಯಕರ್ತರು ಭೇಟಿ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 28 ವರ್ಷಗಳಿಂದಾದ ಪ್ರಯೋಗಗಳ ಫಲ- ಒಂದು ವರ್ಷದ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...