Homeಮುಖಪುಟ'ಉದಯನಿಧಿ ಸ್ಟಾಲಿನ್ ತಲೆ ಕಡಿದವರಿಗೆ 10 ಕೋಟಿ': ಅಯೋಧ್ಯೆಯ ಸ್ವಾಮೀಜಿಯಿಂದ ಬೆದರಿಕೆ

‘ಉದಯನಿಧಿ ಸ್ಟಾಲಿನ್ ತಲೆ ಕಡಿದವರಿಗೆ 10 ಕೋಟಿ’: ಅಯೋಧ್ಯೆಯ ಸ್ವಾಮೀಜಿಯಿಂದ ಬೆದರಿಕೆ

- Advertisement -
- Advertisement -

ತಮಿಳುನಾಡು ಕ್ರೀಡಾ ಸಚಿವ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಗೆ ಹಲವು ಹಿಂದೂ ಸ್ವಾಮಿಗಳು ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ ಅಯೋಧ್ಯೆಯ ಸ್ವಾಮೀಜಿ ಒಬ್ಬರು ಉದಯನಿಧಿಗೆ ಜೀವ ಬೆದರಿಕೆ ಒಡ್ಡಿದ್ದಾರೆ.

ಅಯೋಧ್ಯೆಯ ತಪಸ್ವಿ ಛವನಿ ದೇವಸ್ಥಾನದ ಮುಖ್ಯ ಅರ್ಚಕರಾಗಿರುವ ಪರಮಹಂಸ ಆಚಾರ್ಯ ಸ್ವಾಮೀಜಿ ಉದಯನಿಧಿಗೆ ಜೀವ ಬೆದರಿಕೆ ಹಾಕಿದ್ದಾರೆ.

”ಉದಯನಿಧಿ ಸ್ಟಾಲಿನ್ ಹೇಳಿಕೆ ಹಿಂದೂ ಧರ್ಮಕ್ಕೆ ಸಂಪೂರ್ಣ ವಿರುದ್ಧವಾಗಿದೆ ಅವರ ತಲೆ ಕಡಿದು ತಂದು ಕೊಟ್ಟವರಿಗೆ 10 ಕೋಟಿ ರೂ. ಕೊಡುತ್ತೇನೆ. ಇಲ್ಲದಿದ್ದರೆ ನಾನೇ ಅವನನ್ನು ಹುಡುಕಿ ಕೊಲ್ಲುತ್ತೇನೆ” ಎಂದು ಪರಮಹಂಸ ಆಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಈ ಸ್ವಾಮೀಜಿ ಈ ಹಿಂದೆಯೂ ಕೂಡ ವಿವಾದಿತ ಹೇಳಿಕೆ ನೀಡಿದ್ದರು ಪಠಾನ್ ಚಿತ್ರಕ್ಕೆ ಸಂಬಂಧಿಸಿದಂತೆ ನಟ ಶಾರುಕ್ ಖಾನ್ ಅವರನ್ನು ಜೀವಂತ ಸುಡುತ್ತೇನೆ ಎಂದು ಹೇಳಿದ್ದರು.

ಮತ್ತೊಂದೆಡೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಉದಯನಿಧಿ ಅವರು, ”ಸನಾತನ ಧರ್ಮದ ವಿರುದ್ಧ ಮಾತನಾಡುವದನ್ನು, ಅದನ್ನು ವಿರೋಧಿಸುವುದನ್ನು ಮುಂದುವರಿಸುತ್ತೇನೆ. ಈ ವಿಷಯದಲ್ಲಿ ಎಷ್ಟು ಪ್ರಕರಣ ದಾಖಲಾದರೂ ಎದುರಿಸಲು ನಾನು ಸಿದ್ಧ” ಎಂದು ಹೇಳಿದ್ದಾರೆ.

ಆದರೆ, ಯಾವುದೇ ಸಮುದಾಯದ ಹತ್ಯಾಕಾಂಡ ಮಾಡಬೇಕು ಎಂದು ನಾನು ಎಂದಿಗೂ ಹೇಳಿಲ್ಲ. ಸನಾತನ ಧರ್ಮದ ನಿರ್ಮೂಲನೆ ಕುರಿತಂತೆ ಭಾನುವಾರ ನಾನು ಹೇಳಿರುವ ಮಾತುಗಳಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಸೋಮವಾರ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...