Homeಮುಖಪುಟಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

ಗೋ ಹತ್ಯೆ ಮಾಡಿ ಮುಸ್ಲಿಂ ವ್ಯಕ್ತಿಯನ್ನು ಸಿಲುಕಿಸಲು ಯತ್ನ: ಬಜರಂಗದಳದ ಜಿಲ್ಲಾಧ್ಯಕ್ಷ ಸೇರಿ ನಾಲ್ವರ ಬಂಧನ

- Advertisement -
- Advertisement -

ಮುಸ್ಲಿಂ ವ್ಯಕ್ತಿಯನ್ನು ಗೋಹತ್ಯೆಯ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಗೋಹತ್ಯೆ ಮಾಡಿದ ಆರೋಪದ ಮೇಲೆ  ಬಜರಂಗದಳದ ಮೊರಾದಾಬಾದ್ ಜಿಲ್ಲಾಧ್ಯಕ್ಷ ಸೇರಿದಂತೆ ನಾಲ್ವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮೊರಾದಾಬಾದ್ ಜಿಲ್ಲೆಯ ಚೇತ್ರಂಪುರ ಗ್ರಾಮದ ಶಹಾಬುದ್ದೀನ್, ಬಜರಂಗದಳದ ಮುಖಂಡ ಮೋನು ಬಿಷ್ಣೋಯ್ ಅಲಿಯಾಸ್ ಸುಮಿತ್ ಮತ್ತು ಆತನ ಸಹಚರರಾರ ರಮಣ್ ಚೌಧರಿ ಮತ್ತು ರಾಜೀವ್ ಚೌಧರಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ ಶಹಾಬುದ್ದೀನ್‌ಗೆ, ಮಕ್ಸೂದ್‌ ಎಂಬಾತನ ಜೊತೆ ವೈಯಕ್ತಿಕ ವೈಷಮ್ಯ ಇತ್ತು. ಈತ ಬಜರಂಗ ದಳದ ಕಾರ್ಯಕರ್ತರ ಸಹಾಯವನ್ನು ಪಡೆದು ಗೋಹತ್ಯೆ ಕೇಸ್‌ನಲ್ಲಿ ಮಕ್ಸೂದ್‌ ಎಂಬಾತನನ್ನು ಜೈಲಿಗೆ ಕಳುಹಿಸಿದ್ದಾನೆ. ಹರಿದ್ವಾರಕ್ಕೆ ಹೋಗಲು ಶ್ರಾವಣ ಮಾಸದಲ್ಲಿ ಹಿಂದೂ ಯಾತ್ರಿಕರು ಹೆಚ್ಚಾಗಿ ಬಳಸುವ ರಸ್ತೆಯಾದ ಕನ್ವರ್ ಪಥ್‌ನಿಂದ ಜನವರಿ 16ರಂದು ಹಸುವಿನ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದರ ನಂತರ ಜನವರಿ 28ರ ರಾತ್ರಿ ಗೋಹತ್ಯೆಯ ಮತ್ತೊಂದು ಘಟನೆ ಕೆಲವು ಕಿಲೋಮೀಟರ್ ದೂರದಲ್ಲಿರುವ ಚೆತ್ರಾಮ್‌ಪುರ ಗ್ರಾಮದಲ್ಲಿ ನಡೆದಿದೆ. ಎರಡೂ ಘಟನೆಗಳು ಅನುಮಾನಾಸ್ಪದ ಮತ್ತು ಪರಸ್ಪರ ಸಂಬಂಧವನ್ನು ಹೊಂದಿರುವಂತೆ ಕಂಡು ಬಂದಿತ್ತು. ಇದು ಕೇವಲ ಗೋಹತ್ಯೆಯ ಪ್ರಕರಣವಲ್ಲ, ಖಂಡಿತವಾಗಿಯೂ ಅದರಲ್ಲಿ ಕೆಲವು ಹಿಡನ್ ಅಜೆಂಡಾ ಇದೆ ಎಂಬ ಅನುಮಾನವಿತ್ತು ಎಂದು ಮೊರಾದಾಬಾದ್‌ನ ಪೊಲೀಸ್‌ ಅಧೀಕ್ಷಕ ಹೇಮರಾಜ್ ಮೀನಾ ಹೇಳಿದ್ದಾರೆ.

ಎರಡನೇ ಘಟನೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಒಬ್ಬ ವ್ಯಕ್ತಿಯ ಪ್ಯಾಂಟ್ ಮತ್ತು ಮಕ್ಸೂದ್ ಅವರ ಫೋಟೋ ಇರುವ ವ್ಯಾಲೆಟ್ ಪತ್ತೆಯಾಗಿದೆ. ಈ ಬಗ್ಗೆ ಮಕ್ಸೂದ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಗ್ರಾಮದ ಕೆಲವು ಜನರೊಂದಿಗೆ ದ್ವೇಷವನ್ನು ಹೊಂದಿದ್ದರು ಎಂದು ಹೇಳಿದ್ದಾರೆ. ಈ ಕಾರಣದಿಂದಾಗಿ ಆತನ ವಿರುದ್ಧ ಪಿತೂರಿ ನಡೆಸಿರುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಶಹಾಬುದ್ದೀನ್ ಹೆಸರನ್ನು ಮಕ್ಸೂದ್‌ ಹೇಳಿದ್ದಾರೆ. ಶಹಾಬುದ್ದೀನ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಮೋನು ಬಿಷ್ಣೋಯ್, ರಾಜೀವ್ ಚೌಧರಿ ಮತ್ತು ರಮಣ್ ಚೌಧರಿ ಅವರ ಸಹಾಯವನ್ನು ಪಡೆದು ಕೃತ್ಯವನ್ನು ನಡೆಸಿರುವುದು ಬಹಿರಂಗವಾಗಿದೆ ಎಂದು ಹೇಮರಾಜ್ ಮೀನಾ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಮೋನು ಬಿಷ್ಣೋಯ್‌ ಕೊಲೆ ಯತ್ನ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ. ಜೈಲಿನಿಂದ ಬಂದ ಈತ ಛಜ್ಲೈತ್ ಠಾಣೆಯ ಪೊಲೀಸರಿಗೆ ತನ್ನ ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲಿಸುವಂತೆ ಒತ್ತಾಯಿಸುತ್ತಿದ್ದ. ಅಧಿಕಾರಿಗಳು ಈತನ ಮಾತನ್ನು ನಿರಾಕರಿಸಿದಾಗ ಅವರ ವಿರುದ್ಧ ಸಂಚು ರೂಪಿಸಿದ್ದಾನೆ. ಮೊದಲು ಅವರು ಜನವರಿ 14ರಂದು ಶಹಾಬುದ್ದೀನ್ ಸಹಚರ ನಯೀಮ್‌ಗೆ 2,000ರೂ.ನೀಡಿ ಕೃತ್ಯಕ್ಕೆ ತಂತ್ರವನ್ನು ರೂಪಿಸಿದ್ದರು. ಹಸುವಿನ ತಲೆಯನ್ನು ತಂದು ಛಜಲೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡುವಂತೆ ಹೇಳಿದ್ದ. ಯಾರದೋ ಮನೆಯಿಂದ ಹಸುವನ್ನು ಕದ್ದು, ಅದನ್ನು ಕೊಂದು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಎಸ್‌ಎಸ್‌ಪಿ ಮೀನಾ ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಿಸಿಟಿವಿ, ಮೊಬೈಲ್ ನೆಟ್‌ವರ್ಕ್‌ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಕೃತ್ಯವನ್ನು ಬಯಲು ಮಾಡಿದ್ದಾರೆ. ಮೊರಾದಾಬಾದ್ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 ಬಿ(ಕ್ರಿಮಿನಲ್ ಪಿತೂರಿ), 211 , 380 457  ಮತ್ತು 411 ಮತ್ತು ಗೋಹತ್ಯೆ ಕಾಯಿದೆಯ ಸೆಕ್ಷನ್‌ಗಳಡಿಯಲ್ಲಿ ಕೇಸ್‌ ದಾಖಲಿಸಿದ್ದಾರೆ ಎಂದು ಮೀನಾ ಹೇಳಿದ್ದಾರೆ.

ಇದನ್ನು ಓದಿ: ಬಂಧನ ಪ್ರಶ್ನಿಸಿ ಹೇಮಂತ್ ಸೊರೆನ್ ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...