Homeಮುಖಪುಟಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

ಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಆಪ್ನಾ ದಳ (ಎಸ್) ನಾಯಕಿ ಅನುಪ್ರಿಯಾ ಪಟೇಲ್‌ ಅವರು, “ತಮ್ಮ ಪಕ್ಷವು ಮಿತ್ರ ಪಕ್ಷ ಬಿಜೆಪಿಗಿಂತ ಸೈದ್ಧಾಂತಿಕವಾಗಿ ಭಿನ್ನವಾಗಿದೆ ಮತ್ತು ‘ಹಿಂದುತ್ವ ಹಾಗೂ ಅದರ ಎಲ್ಲಾ ವಿಷಯಗಳೊಂದಿಗೆ’ ನಮಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಮುಸ್ಲಿಂ ಅಭ್ಯರ್ಥಿಗಳು ತಮ್ಮ ಪಕ್ಷಕ್ಕೆ ಅಸ್ಪೃಶ್ಯರಲ್ಲ ಎಂದು ಹೇಳಿದ ಅವರು, ಅಪ್ನಾ ದಳ (ಎಸ್) ಸಾಮಾಜಿಕ ನ್ಯಾಯದ ಪರವಾಗಿ ನಿಂತಿದೆ ಎಂದು ಹೇಳಿದ್ದಾರೆ. ಫೆಬ್ರವರಿ 10 ರಂದು ಉತ್ತರ ಪ್ರದೇಶದಲ್ಲಿ ಏಳು ಹಂತಗಳ ವಿಧಾನಸಭೆ ಚುನಾವಣೆ ಆರಂಭವಾಗಲಿದೆ.

ಇದನ್ನೂ ಓದಿ: ಚುನಾವಣೆ- 2022: ಗೋವಾ-ಮಣಿಪುರಕ್ಕೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಯುಪಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮುಂದೂಡಿದ ಬಿಜೆಪಿ!

“ಹೌದು ನಾವು ಬಿಜೆಪಿಗಿಂತ ಸೈದ್ಧಾಂತಿಕವಾಗಿ ಭಿನ್ನರು. ಜನರು ನನಗೆ ಹಿಂದುತ್ವ ಮತ್ತು ಅದರ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಯತ್ನಿಸುತ್ತಿದ್ದಾರೆ. ನಾನು ಈ ಎಲ್ಲಾ ಸಮಸ್ಯೆಗಳಿಂದ ದೂರವಿರುತ್ತೇನೆ ಮತ್ತು ನನ್ನ ಪಕ್ಷವು ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದಿಲ್ಲ. ನಾವು ಸಾಮಾಜಿಕ ನ್ಯಾಯಕ್ಕಾಗಿ ನಿಲ್ಲುತ್ತೇವೆ. ಅದು ನಮ್ಮ ಸಿದ್ಧಾಂತ” ಎಂದು ಅನುಪ್ರಿಯಾ ಪಟೇಲ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ನಾವು ಬೀದಿಗಳಲ್ಲಿ ಅಥವಾ ಸಂಸತ್ತಿನಲ್ಲಿ ಯಾವಾಗಲೂ ಸಮಾಜದ ಅಂಚಿನಲ್ಲಿರುವ ವರ್ಗಗಳಿಗಾಗಿ ಕೆಲಸ ಮಾಡಿದ್ದೇವೆ. ಇದು ನಮ್ಮ ತತ್ವ ಮತ್ತು ಸ್ಥಾಪಕ ಸಿದ್ದಾಂತಗಳಾಗಿವೆ. ನಾವು ಅದಕ್ಕೆ ಅಂಟಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳು ಮತ್ತು 2017 ರ ವಿಧಾನಸಭಾ ಚುನಾವಣೆಗಳ ಸಮಯ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಅಪ್ನಾ ದಳ (ಎಸ್) ಮೊದಲ ಬಾರಿಗೆ ತನ್ನ ಪಟ್ಟಿಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಕಾಂಗ್ರೆಸ್ ಹಿರಿಯ ನಾಯಕಿ ಬೇಗಂ ನೂರ್ ಬಾನೊ ಅವರ ಮೊಮ್ಮಗ ಹೈದರ್ ಅಲಿ ಅವರು ಅಪ್ನಾ ದಳ (ಎಸ್) ಘೋಷಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ನೂರ್‌ ಬಾನೊ ಅವರು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಂ ಖಾನ್ ವಿರುದ್ಧ ಸುವಾರ್‌ನಿಂದ ಸ್ಪರ್ಧಿಸುತ್ತಿದ್ದಾರೆ.

ಕಳೆದ ಬಾರಿ ಬಿಜೆಪಿ ಮೈತ್ರಿ ಪಕ್ಷಗಳಿಂದ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿ ಯಾಕೆ ಇರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅನುಪ್ರಿಯ ಪಟೇಲ್ ತಮ್ಮ ಪಕ್ಷವು ಅಭ್ಯರ್ಥಿಗಳನ್ನು ಧರ್ಮದ ಚೌಕಟ್ಟಿನಿಂದ ನೋಡುವುದಿಲ್ಲ ಎಂದು ಹೇಳಿದ್ದಾರೆ. “ಪ್ರತಿಯೊಬ್ಬರೂ ಅಭ್ಯರ್ಥಿಯನ್ನು ಧರ್ಮದ ದೃಷ್ಟಿಕೋನದಿಂದ ಏಕೆ ನೋಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರು ಉತ್ತಮ ಶಿಕ್ಷಣ ಪಡೆದಿರುವ ಭರವಸೆಯ ಯುವಕ” ಎಂದು ಪಟೇಲ್ ಹೇಳಿದ್ದಾರೆ.

“ಪಕ್ಷದ ಸಂಸ್ಥಾಪಕ ಸೋನೆಲಾಲ್ ಪಟೇಲ್ ಜೀವಂತವಾಗಿದ್ದಾಗ ಪಕ್ಷದ ಮೊದಲ ಶಾಸಕರು ಪ್ರತಾಪಗಢ ಸದರ್ ಕ್ಷೇತ್ರವನ್ನು ಗೆದ್ದ ಮುಸ್ಲಿಂ ಮತ್ತು ಅವರ ಹೆಸರು ಹಾಜಿ ಮುನ್ನಾ. ಅನೇಕ ಮುಸ್ಲಿಮರು ಅಪ್ನಾ ದಳದ ರಾಜ್ಯಾಧ್ಯಕ್ಷರಾಗಿದ್ದಾರೆ. ನನ್ನ ಪಕ್ಷಕ್ಕೆ ಮುಸ್ಲಿಮರು ಅಸ್ಪೃಶ್ಯರಲ್ಲ ಮತ್ತು ನಾನು ಅಭ್ಯರ್ಥಿಗಳನ್ನು ಅವರ ಧರ್ಮದ ಹಿನ್ನಲೆಯಲ್ಲಿ ನೋಡುವುದಿಲ್ಲ” ಎಂದು ಅನುಪ್ರಿಯ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಸಚಿವರಾಗಿರುವ ಅನುಪ್ರಿಯಾ ಪಟೇಲ್, ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅಪ್ನಾ ದಳ (ಎಸ್) ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. ಪಕ್ಷವು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ನೀಟ್ ಪರೀಕ್ಷೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯ ವಿಷಯವನ್ನು ಈ ಹಿಂದೆ ಎತ್ತಿತ್ತು.

ಉತ್ತರ ಪ್ರದೇಶದ ಚಿತ್ತವು ಎನ್‌ಡಿಎ ಪರವಾಗಿದ್ದು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ. “ಮೂಡ್ ತುಂಬಾ ಸ್ಪಷ್ಟವಾಗಿದೆ. ನಾವು ಉತ್ತರ ಪ್ರದೇಶದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುತ್ತೇವೆ. ಉತ್ತರ ಪ್ರದೇಶದಲ್ಲಿ ಜನರು ಉತ್ತಮ ಆಡಳಿತ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯನ್ನು ಕಂಡಿದ್ದಾರೆ. ನಾವು ರಾಜ್ಯದ ಜನರ ನಿರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಸಾಧ್ಯವಾಯಿತು ಎಂದು ನಾನು ಭಾವಿಸುತ್ತೇನೆ. ಜನರು ರಾಜ್ಯದಲ್ಲಿ ಉತ್ತಮ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಂತರ್ಗತ ಬೆಳವಣಿಗೆಯನ್ನು ಕಂಡಿದ್ದಾರೆ, ಹೀಗಾಗಿ ನಮಗೆ ಬೆಂಬಲ ನೀಡುತ್ತಾರೆ” ಎಂದು ಪಟೇಲ್ ಹೇಳಿದರು.

ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಹಲವು ಒಬಿಸಿ ಮುಖಂಡರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಪ್ರಿಯ ಪಟೇಲ್, “ಚುನಾವಣೆಗೂ ಮುನ್ನ ಇದು ಸಾಮಾನ್ಯ ಪ್ರವೃತ್ತಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಅಪ್ನಾ ದಳವು 13 ಅಭ್ಯರ್ಥಿಗಳನ್ನು ಘೋಷಿಸಿದೆ ಮತ್ತು 403 ಸದಸ್ಯ ಬಲವಿರುವ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮತ್ತೇ ಐದು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 11 ಸ್ಥಾನಗಳಲ್ಲಿ ಸ್ಪರ್ಧಿಸಿ 9 ಸ್ಥಾನಗಳನ್ನು ಗೆದ್ದಿತ್ತು. ಅಪ್ನಾ ದಳ (ಎಸ್) ಲೋಕಸಭೆಯಲ್ಲಿ ಇಬ್ಬರು ಸಂಸದರನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...