Homeಮುಖಪುಟಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

ಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಆಪ್ನಾ ದಳ (ಎಸ್) ನಾಯಕಿ ಅನುಪ್ರಿಯಾ ಪಟೇಲ್‌ ಅವರು, “ತಮ್ಮ ಪಕ್ಷವು ಮಿತ್ರ ಪಕ್ಷ ಬಿಜೆಪಿಗಿಂತ ಸೈದ್ಧಾಂತಿಕವಾಗಿ ಭಿನ್ನವಾಗಿದೆ ಮತ್ತು ‘ಹಿಂದುತ್ವ ಹಾಗೂ ಅದರ ಎಲ್ಲಾ ವಿಷಯಗಳೊಂದಿಗೆ’ ನಮಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಮುಸ್ಲಿಂ ಅಭ್ಯರ್ಥಿಗಳು ತಮ್ಮ ಪಕ್ಷಕ್ಕೆ ಅಸ್ಪೃಶ್ಯರಲ್ಲ ಎಂದು ಹೇಳಿದ ಅವರು, ಅಪ್ನಾ ದಳ (ಎಸ್) ಸಾಮಾಜಿಕ ನ್ಯಾಯದ ಪರವಾಗಿ ನಿಂತಿದೆ ಎಂದು ಹೇಳಿದ್ದಾರೆ. ಫೆಬ್ರವರಿ 10 ರಂದು ಉತ್ತರ ಪ್ರದೇಶದಲ್ಲಿ ಏಳು ಹಂತಗಳ ವಿಧಾನಸಭೆ ಚುನಾವಣೆ ಆರಂಭವಾಗಲಿದೆ.

ಇದನ್ನೂ ಓದಿ: ಚುನಾವಣೆ- 2022: ಗೋವಾ-ಮಣಿಪುರಕ್ಕೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಯುಪಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮುಂದೂಡಿದ ಬಿಜೆಪಿ!

“ಹೌದು ನಾವು ಬಿಜೆಪಿಗಿಂತ ಸೈದ್ಧಾಂತಿಕವಾಗಿ ಭಿನ್ನರು. ಜನರು ನನಗೆ ಹಿಂದುತ್ವ ಮತ್ತು ಅದರ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಯತ್ನಿಸುತ್ತಿದ್ದಾರೆ. ನಾನು ಈ ಎಲ್ಲಾ ಸಮಸ್ಯೆಗಳಿಂದ ದೂರವಿರುತ್ತೇನೆ ಮತ್ತು ನನ್ನ ಪಕ್ಷವು ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದಿಲ್ಲ. ನಾವು ಸಾಮಾಜಿಕ ನ್ಯಾಯಕ್ಕಾಗಿ ನಿಲ್ಲುತ್ತೇವೆ. ಅದು ನಮ್ಮ ಸಿದ್ಧಾಂತ” ಎಂದು ಅನುಪ್ರಿಯಾ ಪಟೇಲ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ನಾವು ಬೀದಿಗಳಲ್ಲಿ ಅಥವಾ ಸಂಸತ್ತಿನಲ್ಲಿ ಯಾವಾಗಲೂ ಸಮಾಜದ ಅಂಚಿನಲ್ಲಿರುವ ವರ್ಗಗಳಿಗಾಗಿ ಕೆಲಸ ಮಾಡಿದ್ದೇವೆ. ಇದು ನಮ್ಮ ತತ್ವ ಮತ್ತು ಸ್ಥಾಪಕ ಸಿದ್ದಾಂತಗಳಾಗಿವೆ. ನಾವು ಅದಕ್ಕೆ ಅಂಟಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳು ಮತ್ತು 2017 ರ ವಿಧಾನಸಭಾ ಚುನಾವಣೆಗಳ ಸಮಯ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಅಪ್ನಾ ದಳ (ಎಸ್) ಮೊದಲ ಬಾರಿಗೆ ತನ್ನ ಪಟ್ಟಿಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಕಾಂಗ್ರೆಸ್ ಹಿರಿಯ ನಾಯಕಿ ಬೇಗಂ ನೂರ್ ಬಾನೊ ಅವರ ಮೊಮ್ಮಗ ಹೈದರ್ ಅಲಿ ಅವರು ಅಪ್ನಾ ದಳ (ಎಸ್) ಘೋಷಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ನೂರ್‌ ಬಾನೊ ಅವರು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಂ ಖಾನ್ ವಿರುದ್ಧ ಸುವಾರ್‌ನಿಂದ ಸ್ಪರ್ಧಿಸುತ್ತಿದ್ದಾರೆ.

ಕಳೆದ ಬಾರಿ ಬಿಜೆಪಿ ಮೈತ್ರಿ ಪಕ್ಷಗಳಿಂದ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿ ಯಾಕೆ ಇರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅನುಪ್ರಿಯ ಪಟೇಲ್ ತಮ್ಮ ಪಕ್ಷವು ಅಭ್ಯರ್ಥಿಗಳನ್ನು ಧರ್ಮದ ಚೌಕಟ್ಟಿನಿಂದ ನೋಡುವುದಿಲ್ಲ ಎಂದು ಹೇಳಿದ್ದಾರೆ. “ಪ್ರತಿಯೊಬ್ಬರೂ ಅಭ್ಯರ್ಥಿಯನ್ನು ಧರ್ಮದ ದೃಷ್ಟಿಕೋನದಿಂದ ಏಕೆ ನೋಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರು ಉತ್ತಮ ಶಿಕ್ಷಣ ಪಡೆದಿರುವ ಭರವಸೆಯ ಯುವಕ” ಎಂದು ಪಟೇಲ್ ಹೇಳಿದ್ದಾರೆ.

“ಪಕ್ಷದ ಸಂಸ್ಥಾಪಕ ಸೋನೆಲಾಲ್ ಪಟೇಲ್ ಜೀವಂತವಾಗಿದ್ದಾಗ ಪಕ್ಷದ ಮೊದಲ ಶಾಸಕರು ಪ್ರತಾಪಗಢ ಸದರ್ ಕ್ಷೇತ್ರವನ್ನು ಗೆದ್ದ ಮುಸ್ಲಿಂ ಮತ್ತು ಅವರ ಹೆಸರು ಹಾಜಿ ಮುನ್ನಾ. ಅನೇಕ ಮುಸ್ಲಿಮರು ಅಪ್ನಾ ದಳದ ರಾಜ್ಯಾಧ್ಯಕ್ಷರಾಗಿದ್ದಾರೆ. ನನ್ನ ಪಕ್ಷಕ್ಕೆ ಮುಸ್ಲಿಮರು ಅಸ್ಪೃಶ್ಯರಲ್ಲ ಮತ್ತು ನಾನು ಅಭ್ಯರ್ಥಿಗಳನ್ನು ಅವರ ಧರ್ಮದ ಹಿನ್ನಲೆಯಲ್ಲಿ ನೋಡುವುದಿಲ್ಲ” ಎಂದು ಅನುಪ್ರಿಯ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಸಚಿವರಾಗಿರುವ ಅನುಪ್ರಿಯಾ ಪಟೇಲ್, ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅಪ್ನಾ ದಳ (ಎಸ್) ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. ಪಕ್ಷವು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ನೀಟ್ ಪರೀಕ್ಷೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯ ವಿಷಯವನ್ನು ಈ ಹಿಂದೆ ಎತ್ತಿತ್ತು.

ಉತ್ತರ ಪ್ರದೇಶದ ಚಿತ್ತವು ಎನ್‌ಡಿಎ ಪರವಾಗಿದ್ದು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ. “ಮೂಡ್ ತುಂಬಾ ಸ್ಪಷ್ಟವಾಗಿದೆ. ನಾವು ಉತ್ತರ ಪ್ರದೇಶದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುತ್ತೇವೆ. ಉತ್ತರ ಪ್ರದೇಶದಲ್ಲಿ ಜನರು ಉತ್ತಮ ಆಡಳಿತ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯನ್ನು ಕಂಡಿದ್ದಾರೆ. ನಾವು ರಾಜ್ಯದ ಜನರ ನಿರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಸಾಧ್ಯವಾಯಿತು ಎಂದು ನಾನು ಭಾವಿಸುತ್ತೇನೆ. ಜನರು ರಾಜ್ಯದಲ್ಲಿ ಉತ್ತಮ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಂತರ್ಗತ ಬೆಳವಣಿಗೆಯನ್ನು ಕಂಡಿದ್ದಾರೆ, ಹೀಗಾಗಿ ನಮಗೆ ಬೆಂಬಲ ನೀಡುತ್ತಾರೆ” ಎಂದು ಪಟೇಲ್ ಹೇಳಿದರು.

ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಹಲವು ಒಬಿಸಿ ಮುಖಂಡರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಪ್ರಿಯ ಪಟೇಲ್, “ಚುನಾವಣೆಗೂ ಮುನ್ನ ಇದು ಸಾಮಾನ್ಯ ಪ್ರವೃತ್ತಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಅಪ್ನಾ ದಳವು 13 ಅಭ್ಯರ್ಥಿಗಳನ್ನು ಘೋಷಿಸಿದೆ ಮತ್ತು 403 ಸದಸ್ಯ ಬಲವಿರುವ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮತ್ತೇ ಐದು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 11 ಸ್ಥಾನಗಳಲ್ಲಿ ಸ್ಪರ್ಧಿಸಿ 9 ಸ್ಥಾನಗಳನ್ನು ಗೆದ್ದಿತ್ತು. ಅಪ್ನಾ ದಳ (ಎಸ್) ಲೋಕಸಭೆಯಲ್ಲಿ ಇಬ್ಬರು ಸಂಸದರನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...