Homeಮುಖಪುಟಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

ಯುಪಿ: ಹಿಂದುತ್ವದೊಂದಿಗೆ ನಮಗೆ ಸಂಬಂಧವಿಲ್ಲ ಎಂದ BJPಯ ಮೈತ್ರಿ ಪಕ್ಷ ‘ಆಪ್ನಾ ದಳ (ಎಸ್)’

- Advertisement -
- Advertisement -

ಒಕ್ಕೂಟ ಸರ್ಕಾರದ ಸಚಿವೆ, ಆಪ್ನಾ ದಳ (ಎಸ್) ನಾಯಕಿ ಅನುಪ್ರಿಯಾ ಪಟೇಲ್‌ ಅವರು, “ತಮ್ಮ ಪಕ್ಷವು ಮಿತ್ರ ಪಕ್ಷ ಬಿಜೆಪಿಗಿಂತ ಸೈದ್ಧಾಂತಿಕವಾಗಿ ಭಿನ್ನವಾಗಿದೆ ಮತ್ತು ‘ಹಿಂದುತ್ವ ಹಾಗೂ ಅದರ ಎಲ್ಲಾ ವಿಷಯಗಳೊಂದಿಗೆ’ ನಮಗೆ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಮುಸ್ಲಿಂ ಅಭ್ಯರ್ಥಿಗಳು ತಮ್ಮ ಪಕ್ಷಕ್ಕೆ ಅಸ್ಪೃಶ್ಯರಲ್ಲ ಎಂದು ಹೇಳಿದ ಅವರು, ಅಪ್ನಾ ದಳ (ಎಸ್) ಸಾಮಾಜಿಕ ನ್ಯಾಯದ ಪರವಾಗಿ ನಿಂತಿದೆ ಎಂದು ಹೇಳಿದ್ದಾರೆ. ಫೆಬ್ರವರಿ 10 ರಂದು ಉತ್ತರ ಪ್ರದೇಶದಲ್ಲಿ ಏಳು ಹಂತಗಳ ವಿಧಾನಸಭೆ ಚುನಾವಣೆ ಆರಂಭವಾಗಲಿದೆ.

ಇದನ್ನೂ ಓದಿ: ಚುನಾವಣೆ- 2022: ಗೋವಾ-ಮಣಿಪುರಕ್ಕೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಯುಪಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮುಂದೂಡಿದ ಬಿಜೆಪಿ!

“ಹೌದು ನಾವು ಬಿಜೆಪಿಗಿಂತ ಸೈದ್ಧಾಂತಿಕವಾಗಿ ಭಿನ್ನರು. ಜನರು ನನಗೆ ಹಿಂದುತ್ವ ಮತ್ತು ಅದರ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಯತ್ನಿಸುತ್ತಿದ್ದಾರೆ. ನಾನು ಈ ಎಲ್ಲಾ ಸಮಸ್ಯೆಗಳಿಂದ ದೂರವಿರುತ್ತೇನೆ ಮತ್ತು ನನ್ನ ಪಕ್ಷವು ಧರ್ಮದ ಹೆಸರಲ್ಲಿ ರಾಜಕೀಯ ಮಾಡುವುದಿಲ್ಲ. ನಾವು ಸಾಮಾಜಿಕ ನ್ಯಾಯಕ್ಕಾಗಿ ನಿಲ್ಲುತ್ತೇವೆ. ಅದು ನಮ್ಮ ಸಿದ್ಧಾಂತ” ಎಂದು ಅನುಪ್ರಿಯಾ ಪಟೇಲ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ನಾವು ಬೀದಿಗಳಲ್ಲಿ ಅಥವಾ ಸಂಸತ್ತಿನಲ್ಲಿ ಯಾವಾಗಲೂ ಸಮಾಜದ ಅಂಚಿನಲ್ಲಿರುವ ವರ್ಗಗಳಿಗಾಗಿ ಕೆಲಸ ಮಾಡಿದ್ದೇವೆ. ಇದು ನಮ್ಮ ತತ್ವ ಮತ್ತು ಸ್ಥಾಪಕ ಸಿದ್ದಾಂತಗಳಾಗಿವೆ. ನಾವು ಅದಕ್ಕೆ ಅಂಟಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳು ಮತ್ತು 2017 ರ ವಿಧಾನಸಭಾ ಚುನಾವಣೆಗಳ ಸಮಯ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಅಪ್ನಾ ದಳ (ಎಸ್) ಮೊದಲ ಬಾರಿಗೆ ತನ್ನ ಪಟ್ಟಿಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಕಾಂಗ್ರೆಸ್ ಹಿರಿಯ ನಾಯಕಿ ಬೇಗಂ ನೂರ್ ಬಾನೊ ಅವರ ಮೊಮ್ಮಗ ಹೈದರ್ ಅಲಿ ಅವರು ಅಪ್ನಾ ದಳ (ಎಸ್) ಘೋಷಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ. ನೂರ್‌ ಬಾನೊ ಅವರು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಂ ಖಾನ್ ವಿರುದ್ಧ ಸುವಾರ್‌ನಿಂದ ಸ್ಪರ್ಧಿಸುತ್ತಿದ್ದಾರೆ.

ಕಳೆದ ಬಾರಿ ಬಿಜೆಪಿ ಮೈತ್ರಿ ಪಕ್ಷಗಳಿಂದ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿ ಯಾಕೆ ಇರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅನುಪ್ರಿಯ ಪಟೇಲ್ ತಮ್ಮ ಪಕ್ಷವು ಅಭ್ಯರ್ಥಿಗಳನ್ನು ಧರ್ಮದ ಚೌಕಟ್ಟಿನಿಂದ ನೋಡುವುದಿಲ್ಲ ಎಂದು ಹೇಳಿದ್ದಾರೆ. “ಪ್ರತಿಯೊಬ್ಬರೂ ಅಭ್ಯರ್ಥಿಯನ್ನು ಧರ್ಮದ ದೃಷ್ಟಿಕೋನದಿಂದ ಏಕೆ ನೋಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರು ಉತ್ತಮ ಶಿಕ್ಷಣ ಪಡೆದಿರುವ ಭರವಸೆಯ ಯುವಕ” ಎಂದು ಪಟೇಲ್ ಹೇಳಿದ್ದಾರೆ.

“ಪಕ್ಷದ ಸಂಸ್ಥಾಪಕ ಸೋನೆಲಾಲ್ ಪಟೇಲ್ ಜೀವಂತವಾಗಿದ್ದಾಗ ಪಕ್ಷದ ಮೊದಲ ಶಾಸಕರು ಪ್ರತಾಪಗಢ ಸದರ್ ಕ್ಷೇತ್ರವನ್ನು ಗೆದ್ದ ಮುಸ್ಲಿಂ ಮತ್ತು ಅವರ ಹೆಸರು ಹಾಜಿ ಮುನ್ನಾ. ಅನೇಕ ಮುಸ್ಲಿಮರು ಅಪ್ನಾ ದಳದ ರಾಜ್ಯಾಧ್ಯಕ್ಷರಾಗಿದ್ದಾರೆ. ನನ್ನ ಪಕ್ಷಕ್ಕೆ ಮುಸ್ಲಿಮರು ಅಸ್ಪೃಶ್ಯರಲ್ಲ ಮತ್ತು ನಾನು ಅಭ್ಯರ್ಥಿಗಳನ್ನು ಅವರ ಧರ್ಮದ ಹಿನ್ನಲೆಯಲ್ಲಿ ನೋಡುವುದಿಲ್ಲ” ಎಂದು ಅನುಪ್ರಿಯ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಸಚಿವರಾಗಿರುವ ಅನುಪ್ರಿಯಾ ಪಟೇಲ್, ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅಪ್ನಾ ದಳ (ಎಸ್) ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. ಪಕ್ಷವು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ನೀಟ್ ಪರೀಕ್ಷೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯ ವಿಷಯವನ್ನು ಈ ಹಿಂದೆ ಎತ್ತಿತ್ತು.

ಉತ್ತರ ಪ್ರದೇಶದ ಚಿತ್ತವು ಎನ್‌ಡಿಎ ಪರವಾಗಿದ್ದು, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ. “ಮೂಡ್ ತುಂಬಾ ಸ್ಪಷ್ಟವಾಗಿದೆ. ನಾವು ಉತ್ತರ ಪ್ರದೇಶದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುತ್ತೇವೆ. ಉತ್ತರ ಪ್ರದೇಶದಲ್ಲಿ ಜನರು ಉತ್ತಮ ಆಡಳಿತ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯನ್ನು ಕಂಡಿದ್ದಾರೆ. ನಾವು ರಾಜ್ಯದ ಜನರ ನಿರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಸಾಧ್ಯವಾಯಿತು ಎಂದು ನಾನು ಭಾವಿಸುತ್ತೇನೆ. ಜನರು ರಾಜ್ಯದಲ್ಲಿ ಉತ್ತಮ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಂತರ್ಗತ ಬೆಳವಣಿಗೆಯನ್ನು ಕಂಡಿದ್ದಾರೆ, ಹೀಗಾಗಿ ನಮಗೆ ಬೆಂಬಲ ನೀಡುತ್ತಾರೆ” ಎಂದು ಪಟೇಲ್ ಹೇಳಿದರು.

ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ತೊರೆದ ಹಲವು ಒಬಿಸಿ ಮುಖಂಡರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಪ್ರಿಯ ಪಟೇಲ್, “ಚುನಾವಣೆಗೂ ಮುನ್ನ ಇದು ಸಾಮಾನ್ಯ ಪ್ರವೃತ್ತಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ, ಅಪ್ನಾ ದಳವು 13 ಅಭ್ಯರ್ಥಿಗಳನ್ನು ಘೋಷಿಸಿದೆ ಮತ್ತು 403 ಸದಸ್ಯ ಬಲವಿರುವ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮತ್ತೇ ಐದು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 11 ಸ್ಥಾನಗಳಲ್ಲಿ ಸ್ಪರ್ಧಿಸಿ 9 ಸ್ಥಾನಗಳನ್ನು ಗೆದ್ದಿತ್ತು. ಅಪ್ನಾ ದಳ (ಎಸ್) ಲೋಕಸಭೆಯಲ್ಲಿ ಇಬ್ಬರು ಸಂಸದರನ್ನು ಹೊಂದಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...