Homeಮುಖಪುಟಯುಪಿ BJP ನಾಯಕ ರಾಮ್‌ ಸಿಂಗ್‌‌ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!

ಯುಪಿ BJP ನಾಯಕ ರಾಮ್‌ ಸಿಂಗ್‌‌ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ರಾಜ್ಯದ ಎಲ್ಲಾ ಪಕ್ಷಗಳು ತಯಾರಾಗುತ್ತಿದೆ. ಇದೀಗ ಬಿಜೆಪಿ ನಾಯಕ, ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಅವರು ಸೋಮವಾರದಂದು ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ರಾಮ್ ಸಿಂಗ್‌ ಬಿಜೆಪಿಯಲ್ಲಿದ್ದರೂ, ಪಕ್ಷದ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌‌ರ ಪ್ರಮುಖ ಟೀಕಾಕಾರರಾಗಿದ್ದರು.

ಈ ಬಗ್ಗೆ ಟ್ವೀಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷ, “ಬೆಳೆಯುತ್ತಿರುವ ಕಾರವಾನ್‌ ಸಂಕೇತ” ಎಂದು ಬಣ್ಣಿಸಿದೆ.

“ಎಸ್ಪಿಯ ಬೆಳೆಯುತ್ತಿರುವ ಕಾರವಾನ್. ಬಲ್ಲಿಯಾದ ಚಿಲ್ಕಹಾರ್ ವಿಧಾನಸಭಾ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ರಾಮ್ ಇಕ್ಬಾಲ್ ಸಿಂಗ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್‌ ನಾಯಕತ್ವದಲ್ಲಿ ನಂಬಿಕೆ ಇಟ್ಟುಕೊಂಡು ತಮ್ಮ ಸಹಚರರೊಂದಿಗೆ ಸಮಾಜವಾದಿ ಪಕ್ಷಕ್ಕೆ ಸೇರಿದರು” ಎಂದು ಪಕ್ಷ ಟ್ವೀಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ:ಆದಿತ್ಯನಾಥ್‌ ಅವರನ್ನು ‘ವಿಷ’ ಎಂದು ಉಲ್ಲೇಖಿಸಿದ ಯುಪಿ BJP ಕಾರ್ಯಕಾರಿಣಿ ಸದಸ್ಯ!

ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿಯ ಮಾಜಿ ಸದಸ್ಯರೂ ಆಗಿರುವ ರಾಮ್‌ ಸಿಂಗ್, 2002 ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಚಿಲ್ಕಹಾರ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2008 ರಲ್ಲಿ ವಿಧಾನಸಭಾ ಕ್ಷೇತ್ರಗಳ ವಿಂಗಡಣೆಯ ನಂತರ, ಚಿಲ್ಕಹಾರ್ ಅಸ್ತಿತ್ವದಲ್ಲಿಲ್ಲ.

ಅಕ್ಟೋಬರ್ 14 ರಂದು, ಲಖಿಂಪುರ ಹಿಂಸಾಚಾರದ ಹಿಂದೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಕೈವಾಡವಿದೆ ಎಂದು ರಾಮ್‌ ಸಿಂಗ್ ಆರೋಪಿಸಿದ್ದರು ಮತ್ತು ಅವರನ್ನು ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದರು.

ರಾಜ್ಯದಲ್ಲಿ ಅಧಿಕಾರಶಾಹಿಗಳು ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ಅವರು ಈ ಹಿಂದೆ ಹೇಳಿದ್ದರು ಮತ್ತು ಆದಿತ್ಯನಾಥ್ ಸರ್ಕಾರವು ಎರಡನೇ ಕೋವಿಡ್ ಅಲೆಯನ್ನು ನಿಭಾಯಿಸಿರುವ ಬಗ್ಗೆ ಪ್ರಶ್ನೆ ಮಾಡಿದ್ದರು.

ನವೆಂಬರ್ 10 ರಂದು, ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಿದರೆ, ಅವರು ತಕ್ಷಣವೇ ಸನ್ಯಾಸಿಯಾಗುತ್ತಾರೆ ಎಂದು ರಾಮ್‌ ಸಿಂಗ್ ಸಲಹೆ ನೀಡಿದ್ದರು.

ಇದನ್ನೂ ಓದಿ:ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...