Homeಮುಖಪುಟ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್...

‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕ ಭೂಪೇಶ್ ಚೌಬೆ ಅವರು, ರಾಜ್ಯದ ಸೋನಭದ್ರಾದಲ್ಲಿ ಇತ್ತಿಚೆಗೆ ನಡೆದ ಸಾರ್ವಜನಿಕ ಸಭೆಯ ವೇದಿಕೆಯೆ ಮೇಲೆ ತಾನು ಕುಳಿತ ಕುರ್ಚಿಯಲ್ಲಿ ನಿಂತು ಕಿವಿ ಹಿಡಿದು ಬಸ್ಕಿ ಹೊಡೆದು, “ಕಳೆದ ಐದು ವರ್ಷಗಳಲ್ಲಿ ತಿಳಿದೋ ಅಥವಾ ತಿಳಿಯದೆಯೋ ಮಾಡಿದ ತಪ್ಪುಗಳನ್ನು ಕ್ಷಮಿಸಿ” ಎಂದು ಜನರನ್ನು ಕೇಳಿಕೊಂಡಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೇ 7 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿರುವ ಸೋನ್‌ಭದ್ರದ ರಾಬರ್ಟ್ಸ್‌ಗಂಜ್ ವಿಧಾನಸಭಾ ಕ್ಷೇತ್ರದಿಂದ ಭೂಪೇಶ್ ಚೌಬೆ ಕಣದಲ್ಲಿದ್ದಾರೆ. ವೇದಿಕೆಯಲ್ಲಿದ್ದ ಇತರ ಜನರು ಅವರು ಬಸ್ಕಿ ಹೊಡೆಯದಂತೆ ತಡೆಯುತ್ತಿದ್ದರೂ ಅವರು ಅದನ್ನು ಮುಂದುವರೆಸಿದ್ದರು.

2017ರ ಚುನಾವಣೆಯಲ್ಲಿ ನೀವೆಲ್ಲರೂ ಆಶೀರ್ವಾದ ನೀಡಿದ್ದೀರಿ. ಅದೇ ರೀತಿ ಈ ಬಾರಿಯೂ ರಾಬರ್ಟ್ಸ್‌ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಲು ನಿಮ್ಮ ಆಶೀರ್ವಾದ ನೀಡಿ ಎಂದು ಚೌಬೆ ಜನರನ್ನು ಕೋರಿದ್ದಾರೆ.

“ಬಿಜೆಪಿಯ ಕೆಲವು ತಳಮಟ್ಟದ ಕಾರ್ಯಕರ್ತರು ಇತ್ತೀಚೆಗೆ ಪ್ರಚಾರದ ಸಮಯದಲ್ಲಿ ಚೌಬೆ ವಿರುದ್ಧ ಅಸಮಾಧಾನಗೊಂಡಿದ್ದರು. ಚೌಬೆ ಅವರು ನಮ್ಮ ಕೈಗೆ ಸಿಗುತ್ತಿಲ್ಲ, 2017 ರ ಚುನಾವಣೆ ಗೆದ್ದ ನಂತರ ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

“ಅವರನ್ನು ಸಮಾಧಾನಪಡಿಸಲು ಚೌಬೆ ವೇದಿಕೆ ಮೇಲೆ ಬಸ್ಕಿ ಹೊಡೆದಿದ್ದಾರೆ” ಎಂದು ಸಭೆಯಲ್ಲಿದ್ದ ಸ್ಥಳೀಯರೊಬ್ಬರು ಹೇಳಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸ್ಥಳೀಯ ಬಿಜೆಪಿ ಮುಖಂಡ ಭಾನು ಪ್ರತಾಪ್ ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಮತ ಯಾಚಿಸುವಾಗ ಮಾತನಾಡಿದ ಭಾನು ಪ್ರತಾಪ್‌, “ಯುಪಿ ವಿಧಾನಸಭಾ ಚುನಾವಣೆಯ ಮೂರು ಹಂತಗಳಲ್ಲಿ, ಎಸ್‌ಪಿ ಮತ್ತು ಬಿಎಸ್‌ಪಿ ಅರ್ಧದಷ್ಟು ನಾಶವಾಗಿದೆ. ಏಳನೇ ಹಂತದಲ್ಲಿ ಇವು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...