Homeಮುಖಪುಟ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್...

‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕ ಭೂಪೇಶ್ ಚೌಬೆ ಅವರು, ರಾಜ್ಯದ ಸೋನಭದ್ರಾದಲ್ಲಿ ಇತ್ತಿಚೆಗೆ ನಡೆದ ಸಾರ್ವಜನಿಕ ಸಭೆಯ ವೇದಿಕೆಯೆ ಮೇಲೆ ತಾನು ಕುಳಿತ ಕುರ್ಚಿಯಲ್ಲಿ ನಿಂತು ಕಿವಿ ಹಿಡಿದು ಬಸ್ಕಿ ಹೊಡೆದು, “ಕಳೆದ ಐದು ವರ್ಷಗಳಲ್ಲಿ ತಿಳಿದೋ ಅಥವಾ ತಿಳಿಯದೆಯೋ ಮಾಡಿದ ತಪ್ಪುಗಳನ್ನು ಕ್ಷಮಿಸಿ” ಎಂದು ಜನರನ್ನು ಕೇಳಿಕೊಂಡಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೇ 7 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿರುವ ಸೋನ್‌ಭದ್ರದ ರಾಬರ್ಟ್ಸ್‌ಗಂಜ್ ವಿಧಾನಸಭಾ ಕ್ಷೇತ್ರದಿಂದ ಭೂಪೇಶ್ ಚೌಬೆ ಕಣದಲ್ಲಿದ್ದಾರೆ. ವೇದಿಕೆಯಲ್ಲಿದ್ದ ಇತರ ಜನರು ಅವರು ಬಸ್ಕಿ ಹೊಡೆಯದಂತೆ ತಡೆಯುತ್ತಿದ್ದರೂ ಅವರು ಅದನ್ನು ಮುಂದುವರೆಸಿದ್ದರು.

2017ರ ಚುನಾವಣೆಯಲ್ಲಿ ನೀವೆಲ್ಲರೂ ಆಶೀರ್ವಾದ ನೀಡಿದ್ದೀರಿ. ಅದೇ ರೀತಿ ಈ ಬಾರಿಯೂ ರಾಬರ್ಟ್ಸ್‌ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಲು ನಿಮ್ಮ ಆಶೀರ್ವಾದ ನೀಡಿ ಎಂದು ಚೌಬೆ ಜನರನ್ನು ಕೋರಿದ್ದಾರೆ.

“ಬಿಜೆಪಿಯ ಕೆಲವು ತಳಮಟ್ಟದ ಕಾರ್ಯಕರ್ತರು ಇತ್ತೀಚೆಗೆ ಪ್ರಚಾರದ ಸಮಯದಲ್ಲಿ ಚೌಬೆ ವಿರುದ್ಧ ಅಸಮಾಧಾನಗೊಂಡಿದ್ದರು. ಚೌಬೆ ಅವರು ನಮ್ಮ ಕೈಗೆ ಸಿಗುತ್ತಿಲ್ಲ, 2017 ರ ಚುನಾವಣೆ ಗೆದ್ದ ನಂತರ ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

“ಅವರನ್ನು ಸಮಾಧಾನಪಡಿಸಲು ಚೌಬೆ ವೇದಿಕೆ ಮೇಲೆ ಬಸ್ಕಿ ಹೊಡೆದಿದ್ದಾರೆ” ಎಂದು ಸಭೆಯಲ್ಲಿದ್ದ ಸ್ಥಳೀಯರೊಬ್ಬರು ಹೇಳಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸ್ಥಳೀಯ ಬಿಜೆಪಿ ಮುಖಂಡ ಭಾನು ಪ್ರತಾಪ್ ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಮತ ಯಾಚಿಸುವಾಗ ಮಾತನಾಡಿದ ಭಾನು ಪ್ರತಾಪ್‌, “ಯುಪಿ ವಿಧಾನಸಭಾ ಚುನಾವಣೆಯ ಮೂರು ಹಂತಗಳಲ್ಲಿ, ಎಸ್‌ಪಿ ಮತ್ತು ಬಿಎಸ್‌ಪಿ ಅರ್ಧದಷ್ಟು ನಾಶವಾಗಿದೆ. ಏಳನೇ ಹಂತದಲ್ಲಿ ಇವು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....