Homeಮುಖಪುಟಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

ಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ತೀವ್ರ ಕಸರತ್ತು ನಡೆಸುತ್ತಿವೆ. ಇಂತಹ ಸಮಯದಲ್ಲಿ ಬಿಜೆಪಿ ಶಾಸಕನೊಬ್ಬ ವೇದಿಕೆ ಮೇಲಿರುವಾಗಲೇ ಅಲ್ಲಿಗೆ ಬಂದ ರೈತನೊಬ್ಬ ಶಾಸಕನ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉನ್ನಾವೋದ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲಿದ್ದಾಗ ವಯಸ್ಸಾದ ರೈತನೊಬ್ಬ ಕೆನ್ನೆಗೆ ಬಾರಿಸಿದ್ದಾನೆ. ಕೂಡಲೇ ಅಲ್ಲಿದ್ದವರು ರೈತನನ್ನು ವೇದಿಕೆಯಿಂದ ಹೊರಗೆ ಎಳೆದುಕೊಂಡು ಹೋಗಿದ್ದಾರೆ. ಈ 21 ಸೆಕೆಂಡ್‌ಗಳ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಜನ ಸಿಟ್ಟುಗೊಂಡಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

ಈ ವಿಡಿಯೋವನ್ನು ಪೋಸ್ಟ್ ಮಾಡಿರುವ ಸಮಾಜವಾದಿ ಪಕ್ಷವು “ಬಿಜೆಪಿ ಶಾಸಕ ಪಂಕಜ್ ಗುಪ್ತಾ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ರೈತನೊಬ್ಬ ಅವರ ಕಪಾಳಕ್ಕೆ ಬಾರಿಸಿದ್ದಾರೆ. ಇದು ಕೇವಲ ಶಾಸಕನಿಗೆ ಮಾತ್ರವಲ್ಲ ಯೋಗಿ ಆದಿತ್ಯನಾಥ್‌ರವರ ಕೆಟ್ಟ ಆಡಳಿತ, ಕೆಟ್ಟ ನೀತಿಗಳು ಮತ್ತು ಸರ್ವಾಧಿಕಾರಕ್ಕೆ ಬಿದ್ದ ಹೊಡೆತವಾಗಿದೆ” ಎಂದು ಬರೆದಿದೆ.

ರೈತ ತನ್ನ ಹಸು ಕಳೆದುಹೋಗಿದ್ದರ ಬಗ್ಗೆ ಪೊಲೀಸ್ ಸೇರಿದಂತೆ ಶಾಸಕನಿಗೆ ದೂರು ಕೊಟ್ಟಿದ್ದ. ಆದರೆ ಅದನ್ನು ಹುಡುಕಲು ಯಾರೂ ಸಹಾಯ ಮಾಡಲಿಲ್ಲ. ಹಾಗಾಗಿ ಕೋಪದಲ್ಲಿ ಶಾಸಕನ ಕಪಾಳಕ್ಕೆ ಬಾರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಘಟನೆ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಪ್ರತಿಕ್ರಿಯಿಸಿದ್ದು, “ಅವರು ಕೇವಲ ನನ್ನ ಗದ್ದ ಮುಟ್ಟಿ ಮುದ್ದು ಮಾಡಿದರು ಅಷ್ಟೇ. ಆದರೆ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಪ್ರಕರಣವನ್ನು ತಿರುಚುತ್ತಿವೆ” ಎಂದು ಆರೋಪಿಸಿದ್ದಾರೆ.

ಅಲ್ಲದೆ ಶಾಸಕರು ತಮಗೆ ಕಪಾಳ ಮೋಕ್ಷ ಮಾಡಿದ ರೈತರನೊಟ್ಟಿಗೆ ಕುಳಿತು ಪತ್ರಿಕಾಗೋಷ್ಠಿ ಸಹ ನಡೆಸಿದ್ದಾರೆ. ಅಲ್ಲಿ ಪತ್ರಕರ್ತರೊಬ್ಬರು ನೀವು ಪ್ರೀತಿಯಿಂದ ಮಾಡಿದ್ದೀರಿ ಎಂದು ಹೇಳುತ್ತಿದ್ದೀರಿ, ಆದರೆ ಅದರಿಂದ ತಪ್ಪು ಸಂದೇಶ ಹೋಗಿದೆಯಲ್ಲ ಎಂದು ರೈತನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ರೈತನು “ನಾನು ಶಾಸಕನಿಗೆ ಹೊಡೆದಿಲ್ಲ. ನಾನು ಅವರ ಹತ್ತಿರ ಬಂದು ಬೇಟಾ (ಮಗ) ಎಂದು ಸಂಬೋಧಿಸಿ ಏನೋ ಕೇಳಿದೆ” ಎಂದಿದ್ದಾರೆ.

ಆಗ ಮಧ್ಯಪ್ರವೇಸಿಸಿದ ಶಾಸಕ ಪಂಕಜ್ ಗುಪ್ತಾ, “ವಾಸ್ತವ ಸಂಗತಿ ಏನೆಂದರೆ, ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಘಟನೆಯನ್ನು ತಿರುಚಿದ್ದಾರೆ. ಈ ರೈತನಿಗೆ ನನ್ನ ಜೊತೆ ಯಾವುದೇ ಸಮಸ್ಯೆ ಇಲ್ಲ, ರೈತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದ್ದಾರೆ ಎಂದು ತೋರಿಸಲು ವಿರೋಧ ಪಕ್ಷಗಳು ಬಯಸಿದ್ದಾರೆ. ಇವರು ನನ್ನ ತಂದೆಯಂತೆ, ಅವರು ಇದನ್ನು ಹಿಂದೆಯೂ ಮಾಡುತ್ತಿದ್ದರು” ಎಂದು ರೈತನ ಕುರಿತು ಮಾತನಾಡಿದ್ದಾರೆ.


ಇದನ್ನೂ ಓದಿ: ಬುಲ್ಲಿ ಬಾಯ್‌‌ ವಿಕೃತಿಯ ಬಳಿಕ ‘ಟ್ರೇಡ್‌’ ‘ರಾಯ್ತಾಸ್‌’ ಗುಂಪುಗಳ ನಡುವಿನ ಬಲಪಂಥೀಯ ಭಿನ್ನತೆ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...