Homeಮುಖಪುಟಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

ಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ತೀವ್ರ ಕಸರತ್ತು ನಡೆಸುತ್ತಿವೆ. ಇಂತಹ ಸಮಯದಲ್ಲಿ ಬಿಜೆಪಿ ಶಾಸಕನೊಬ್ಬ ವೇದಿಕೆ ಮೇಲಿರುವಾಗಲೇ ಅಲ್ಲಿಗೆ ಬಂದ ರೈತನೊಬ್ಬ ಶಾಸಕನ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉನ್ನಾವೋದ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲಿದ್ದಾಗ ವಯಸ್ಸಾದ ರೈತನೊಬ್ಬ ಕೆನ್ನೆಗೆ ಬಾರಿಸಿದ್ದಾನೆ. ಕೂಡಲೇ ಅಲ್ಲಿದ್ದವರು ರೈತನನ್ನು ವೇದಿಕೆಯಿಂದ ಹೊರಗೆ ಎಳೆದುಕೊಂಡು ಹೋಗಿದ್ದಾರೆ. ಈ 21 ಸೆಕೆಂಡ್‌ಗಳ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಜನ ಸಿಟ್ಟುಗೊಂಡಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

ಈ ವಿಡಿಯೋವನ್ನು ಪೋಸ್ಟ್ ಮಾಡಿರುವ ಸಮಾಜವಾದಿ ಪಕ್ಷವು “ಬಿಜೆಪಿ ಶಾಸಕ ಪಂಕಜ್ ಗುಪ್ತಾ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ರೈತನೊಬ್ಬ ಅವರ ಕಪಾಳಕ್ಕೆ ಬಾರಿಸಿದ್ದಾರೆ. ಇದು ಕೇವಲ ಶಾಸಕನಿಗೆ ಮಾತ್ರವಲ್ಲ ಯೋಗಿ ಆದಿತ್ಯನಾಥ್‌ರವರ ಕೆಟ್ಟ ಆಡಳಿತ, ಕೆಟ್ಟ ನೀತಿಗಳು ಮತ್ತು ಸರ್ವಾಧಿಕಾರಕ್ಕೆ ಬಿದ್ದ ಹೊಡೆತವಾಗಿದೆ” ಎಂದು ಬರೆದಿದೆ.

ರೈತ ತನ್ನ ಹಸು ಕಳೆದುಹೋಗಿದ್ದರ ಬಗ್ಗೆ ಪೊಲೀಸ್ ಸೇರಿದಂತೆ ಶಾಸಕನಿಗೆ ದೂರು ಕೊಟ್ಟಿದ್ದ. ಆದರೆ ಅದನ್ನು ಹುಡುಕಲು ಯಾರೂ ಸಹಾಯ ಮಾಡಲಿಲ್ಲ. ಹಾಗಾಗಿ ಕೋಪದಲ್ಲಿ ಶಾಸಕನ ಕಪಾಳಕ್ಕೆ ಬಾರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಘಟನೆ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಪ್ರತಿಕ್ರಿಯಿಸಿದ್ದು, “ಅವರು ಕೇವಲ ನನ್ನ ಗದ್ದ ಮುಟ್ಟಿ ಮುದ್ದು ಮಾಡಿದರು ಅಷ್ಟೇ. ಆದರೆ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಪ್ರಕರಣವನ್ನು ತಿರುಚುತ್ತಿವೆ” ಎಂದು ಆರೋಪಿಸಿದ್ದಾರೆ.

ಅಲ್ಲದೆ ಶಾಸಕರು ತಮಗೆ ಕಪಾಳ ಮೋಕ್ಷ ಮಾಡಿದ ರೈತರನೊಟ್ಟಿಗೆ ಕುಳಿತು ಪತ್ರಿಕಾಗೋಷ್ಠಿ ಸಹ ನಡೆಸಿದ್ದಾರೆ. ಅಲ್ಲಿ ಪತ್ರಕರ್ತರೊಬ್ಬರು ನೀವು ಪ್ರೀತಿಯಿಂದ ಮಾಡಿದ್ದೀರಿ ಎಂದು ಹೇಳುತ್ತಿದ್ದೀರಿ, ಆದರೆ ಅದರಿಂದ ತಪ್ಪು ಸಂದೇಶ ಹೋಗಿದೆಯಲ್ಲ ಎಂದು ರೈತನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ರೈತನು “ನಾನು ಶಾಸಕನಿಗೆ ಹೊಡೆದಿಲ್ಲ. ನಾನು ಅವರ ಹತ್ತಿರ ಬಂದು ಬೇಟಾ (ಮಗ) ಎಂದು ಸಂಬೋಧಿಸಿ ಏನೋ ಕೇಳಿದೆ” ಎಂದಿದ್ದಾರೆ.

ಆಗ ಮಧ್ಯಪ್ರವೇಸಿಸಿದ ಶಾಸಕ ಪಂಕಜ್ ಗುಪ್ತಾ, “ವಾಸ್ತವ ಸಂಗತಿ ಏನೆಂದರೆ, ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಘಟನೆಯನ್ನು ತಿರುಚಿದ್ದಾರೆ. ಈ ರೈತನಿಗೆ ನನ್ನ ಜೊತೆ ಯಾವುದೇ ಸಮಸ್ಯೆ ಇಲ್ಲ, ರೈತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದ್ದಾರೆ ಎಂದು ತೋರಿಸಲು ವಿರೋಧ ಪಕ್ಷಗಳು ಬಯಸಿದ್ದಾರೆ. ಇವರು ನನ್ನ ತಂದೆಯಂತೆ, ಅವರು ಇದನ್ನು ಹಿಂದೆಯೂ ಮಾಡುತ್ತಿದ್ದರು” ಎಂದು ರೈತನ ಕುರಿತು ಮಾತನಾಡಿದ್ದಾರೆ.


ಇದನ್ನೂ ಓದಿ: ಬುಲ್ಲಿ ಬಾಯ್‌‌ ವಿಕೃತಿಯ ಬಳಿಕ ‘ಟ್ರೇಡ್‌’ ‘ರಾಯ್ತಾಸ್‌’ ಗುಂಪುಗಳ ನಡುವಿನ ಬಲಪಂಥೀಯ ಭಿನ್ನತೆ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...