Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...