Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...