Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...