Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...