Homeಮುಖಪುಟ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

- Advertisement -
- Advertisement -

ಕಳೆದ 8 ತಿಂಗಳಿನಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿ ಗಡಿಗಳ ಸುತ್ತಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ರೈತರು ತಮ್ಮ ಹೋರಾಟವನ್ನು ಉತ್ತರ ಪ್ರದೇಶ ಮತ್ತು ಉತ್ತಾರಾಖಂಡ ರಾಜ್ಯಗಳಿಗೂ ವಿಸ್ತರಿಸುವುದಾಗಿ ಹೇಳಿದ್ದು, ಸೆಪ್ಟೆಂಬರ್‌ ತಿಂಗಳಿನಿಂದ ಅಲ್ಲಿ ಹೋರಾಟಗಳು ಪ್ರಾರಂಭವಾಗುತ್ತದೆ. ಈ ಹೋರಾಟವನ್ನು ರೈತ ಮುಖಂಡರು ಪ್ರಕಟಿಸುತ್ತಿದ್ದಂತೆ ಉತ್ತರ ಪ್ರದೇಶ ಬಿಜೆಪಿ ರೈತರನ್ನು ಬಹಿರಂಗವಾಗಿ ಬೆದರಿಸಿದೆ.

ಬಿಜೆಪಿಯು, “ಆದಿತ್ಯನಾಥ್‌‌ ನಿಮ್ಮ ಚರ್ಮ ಸುಲಿದು, ಪೋಸ್ಟರ್‌‌‌ಗಳನ್ನು ಗೋಡೆಗಳಿಗೆ ಅಂಟಿಸುತ್ತಾರೆ” ಎಂದು ಬೆದರಿಸಿದೆ. ಆದರೆ ರೈತರು, ಬಿಜೆಪಿಯ ಬೆದರಿಕೆಗೆ ಜಗ್ಗಲ್ಲ, ಹೋರಾಟವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಜುಲೈ 26 ರಂದು ಲಕ್ನೋಗೆ ಭೇಟಿ ನೀಡಿದ್ದ ರೈತರ ನಾಯಕರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಪ್ರತಿಭಟನೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್‌‌ ಮತ್ತು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಅವರು ಉತ್ತರ ಪ್ರದೇಶದ ಎಲ್ಲಾ 75 ಜಿಲ್ಲೆಗಳಲ್ಲಿ ಮಹಾಪಂಚಾಯತ್, ರ್‍ಯಾಲಿ ಮತ್ತು ಸಭೆಗಳನ್ನು ನಡೆಸುವುದಾಗಿ ಘೋಷಿಸಿದ್ದರು.

ಗುರುವಾರದಂದು ಈ ಹೋರಾಟಗಳ ವಿರುದ್ದ ಬಿಜೆಪಿಯ ಅಧೀಕೃತ ಕಾರ್ಟೂನ್‌ ಒಂದನ್ನು ಪೋಸ್ಟ್‌ ಮಾಡಿದೆ. ಅದರಲ್ಲಿ ರಾಕೇಶ್‌ ಟಿಕಾಯತ್‌ ಅವರಂತೆ ಕಾಣುವ ವ್ಯಕ್ತಿಯೊಬ್ಬರಿಗೆ ಮತ್ತೊಬ್ಬ ವ್ಯಕ್ತಿ ಹೆದರುತ್ತಾ, “ನೀವು ಲಕ್ನೋಗೆ ತೆರಳುತ್ತಿದ್ದೀರಿ ಎಂದು ಕೇಳಿದೆ. ಅಲ್ಲಿ ಯಾರೊಂದಿಗೂ ಘರ್ಷಣೆಗೆ ಇಳಿಯಬೇಡಿ. ಅಲ್ಲಿ ಯೋಗಿ ಕುಳಿತಿದ್ದು, ಅವರು ನಿಮ್ಮನ್ನು ಹೊಡೆದು ಚರ್ಮವನ್ನು ಸುಲಿಯುತ್ತಾರೆ. ಅಲ್ಲದೆ ನಿಮ್ಮ ಪೋಸ್ಟರ್ ಅನ್ನು ನಗರದ ಗೋಡೆಗಳ ಮೇಲೆ ಅಂಟಿಸುತ್ತಾರೆ” ಎಂದು ಹೇಳುವಂತೆ ಮತ್ತು ಕಾವಿಧಾರಿಯೊಬ್ಬ ರೈತ ಮುಖಂಡನ ಕೂದಲನ್ನು ಹಿಡಿದು ಎಳೆದುಕೊಂಡು ಹೋಗುತ್ತಿರುವಂತೆ ಚಿತ್ರಿಸಲಾಗಿದೆ. ಈ ಕಾರ್ಟೂನ್‌ ಅನ್ನು ಹಂಚಿರುವ ಬಿಜೆಪಿ, “ಓ ಅಣ್ಣಾ ಲಕ್ನೋಗೆ ಸ್ವಲ್ಪ ಎಚ್ಚರಿಕೆಯಿಂದ ತೆರಳಿ” ಎಂದು ಬರೆದಿದೆ.

ಬಿಜೆಪಿಯ ಬೆದರಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ವಲಯ ಹಾಗೂ ರೈತರ ಆಂದೋಲನದ ಬೆಂಬಲಿಗರಲ್ಲಿ ಕೋಲಾಹಲವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

“ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಅವರ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರದ ಕಾರಣ ಜನ ಚಳುವಳಿಗಳನ್ನು ಹತ್ತಿಕ್ಕುತ್ತಿದ್ದಾರೆ. ಕಾರ್ಟೂನ್ ಪ್ರಕಟಿಸುವ ಮೂಲಕ, ಬಿಜೆಪಿ ತನ್ನ ನಿಜವಾದ ಮುಖವನ್ನು ಸಾರ್ವಜನಿಕರಿಗೆ ತೋರಿಸುತ್ತಿದೆ. ಯಾವುದೇ ಬೆದರಿಕೆಗೆ ಒಳಗಾಗಿ ತಮ್ಮ ಪ್ರತಿಭಟನೆಯನ್ನು ರೈತರು ಹಿಂತೆಗೆದುಕೊಳ್ಳುವುದಿಲ್ಲ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಧಾನ ವಿರೋಧ ಪಕ್ಷ ಸಮಾಜವಾದಿ ಪಕ್ಷ (ಎಸ್ಪಿ) ನಾಯಕ ಸುನಿಲ್ ಕುಮಾರ್‌ ಸಾಜನ್‌, “ಪ್ರಸ್ತುತ ಕಾರ್ಟೂನ್‌, ಬಡವರು ಮತ್ತು ರೈತರ ಬಗ್ಗೆಗಿನ ಬಿಜೆಪಿಯ ಆಲೋಚನೆ ಮತ್ತು ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ. ಕಾರ್ಟೂನ್‌ನಲ್ಲಿ ರೈತನ ತಲೆಯಿಂದ ಬೀಳುವ ಟೋಪಿ ವಾಸ್ತವವಾಗಿ ರೈತನ ಹೆಮ್ಮಯಾಗಿದೆ. ಕಾರ್ಟೂನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಹಂಕಾರವನ್ನು ಪ್ರತಿಬಿಂಬಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕೂಡ ಕಾರ್ಟೂನ್ ಅನ್ನು ಖಂಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ಲಲ್ಲು, “ ಈ ಕಾರ್ಟೂನ್ ಮೂಲಕ ಸರ್ಕಾರವು ಗೂಂಡಾಗಿರಿಯನ್ನು ಬಳಸಿ ಪ್ರತಿಭಟನೆಯನ್ನು ಇಲ್ಲದಂತೆ ಮಾಡಲು ಬಯಸುತ್ತದೆ ಎಂದು ಜೋರಾಗಿ ಮತ್ತು ಸ್ಪಷ್ಟ ಸಂದೇಶವನ್ನು ನೀಡಿದೆ. ಕಾಂಗ್ರೆಸ್‌ ರೈತರ ಬೆಂಬಲಕ್ಕಿದ್ದು, ರೈತರ ಪ್ರತಿಭಟನೆಯನ್ನು ಅಡಗಿಸಲು, ಬಿಜೆಪಿಯ ಸೊಕ್ಕಿನ ಆಡಳಿತಕ್ಕೆ ನಾವು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...