Homeಮುಖಪುಟಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

ಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಮನ ಅವತಾರದಂತೆ ಉತ್ತರ ಪ್ರದೇಶದ ಬಿಜೆಪಿ ಬಿಂಬಿಸಿರುವ ವ್ಯಂಗ್ಯಚಿತ್ರ ಪ್ರಕಟಿಸಿದೆ.

ದಸರಾ ಸಂಭ್ರಮಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಬಿಜೆಪಿ ಟ್ವಿಟರ್‌‌ನಲ್ಲಿ ಹಂಚಿಕೊಂಡಿರುವ ವ್ಯಂಗ್ಯಚಿತ್ರದಲ್ಲಿ ಯೋಗಿ ಆದಿತ್ಯನಾಥ ಅವರನ್ನು ರಾಮನಂತೆ ಬಿಂಬಿಸಿ, ಅವರ ಕೈಗೆ ಬಿಲ್ಲು ಬಾಣವನ್ನು ನೀಡಲಾಗಿದೆ. ಆದಿತ್ಯನಾಥ ಅವರು ರಾವಣನ ಮೇಲೆ ಬಾಣ ಪ್ರಯೋಗಿಸುತ್ತಿದ್ದಾರೆ. ಹತ್ತು ತಲೆಯ ರಾವಣನ ಒಂಬತ್ತು ತಲೆಗಳು ಒಂದೊಂದು ಸಾಮಾಜಿಕ ಅನಿಷ್ಟವೆಂಬಂತೆ ಬಿಂಬಿಸಲಾಗಿದೆ.

“ಸಾಮಾಜಿಕ ಅನಿಷ್ಟಗಳು ಉತ್ತರ ಪ್ರದೇಶದಲ್ಲಿ ಅಳಿಯುತ್ತಿವೆ. ಭ್ರಷ್ಟಾಚಾರ, ಗುಂಡಾರಾಜ್ಯ, ಹಗರಣ, ಅಪರಾಧ, ಜಂಗಲ್‌ ರಾಜ್, ವಂಚನೆ, ಸಮಾಧಾನಪಡಿಸುವಿಕೆ, ಕೊರೊನಾ, ಮತಾಂತರದ ಮೇಲೆ ಬಿಜೆಪಿ ಸರ್ಕಾರ ದಾಳಿ ಮಾಡಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಕ್ತಾರ ಹರ್ಷ ಶ್ರೀನಿವಾಸ ಪ್ರತಿಕ್ರಿಯಿಸಿ, “ರಾವಣನನ್ನು ದುಷ್ಟತನದ ಪ್ರತೀಕವಾಗಿ ನೋಡಲಾಗುತ್ತದೆ. ಭ್ರಷ್ಟಾಚಾರ, ಅಪರಾಧ, ಗೂಂಡಾರಾಜ್‌ಗಳು ಕೂಡ ಸಮಾಜದ ದುಷ್ಟತನಗಳು. ಮುಖ್ಯಮಂತ್ರಿ ಆದಿತ್ಯನಾಥ ಅವರು ಸಾಂಕೇತಿಕವಾಗಿ ಅವುಗಳಿಗೆ ಗುರಿ ಇಟ್ಟಿದ್ದಾರೆ” ಎಂದು ಸಮರ್ಥಿಸಿದ್ದಾರೆ.

“ಭ್ರಷ್ಟಾಚಾರ, ಅಪರಾಧ ಕೃತ್ಯಗಳನ್ನು ರಾಜ್ಯದಲ್ಲಿ ತಡೆಯಲು ಮುಖ್ಯಮಂತ್ರಿ ಆದಿತ್ಯನಾಥ ಅವರು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಹೆಚ್ಚೇನು ಹೇಳದೆ ಸಾಮಾಜಿಕ ಮಾಧ್ಯಮಗಳ ಮೂಲಕ ಕಾರ್ಟೂನ್‌‌ ಬಳಸಿ ಹೇಳಬಹುದು” ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಭಗವಾನ್ ರಾಮನಿಗೆ ಹೋಲುವಂತೆಯೇ ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಯುಪಿ ಮುಖ್ಯಮಂತ್ರಿಯವರನ್ನು ರಾಮನಂತೆ ಪೋಸ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಮನು ನಂಬಿಕೆ, ಘನತೆ, ನ್ಯಾಯ ಮತ್ತು ಸತ್ಯದ ಸಂಕೇತ. ಯೋಗಿ ಆದಿತ್ಯನಾಥ್ ‌ಅವರು ಕಾರ್ಟೂನ್‌ನಲ್ಲಿ ಗುರಿ ಇಟ್ಟಿರುವ ವಿಚಾರಗಳು ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿವೆ” ಎಂದು ಶ್ರೀನಾಟೆ ಹೇಳಿದ್ದಾರೆ.

“ಅನ್ಯಾಯದಿಂದ ಅಧೀನದವರೆಗೂ, ಮಹಿಳೆಯರ ವಿರುದ್ಧದ ಅಪರಾಧದವರೆಗೆ, ಇಡೀ ರಾಜ್ಯದಲ್ಲಿ ಹಬ್ಬಿರುವ ಭಯ ಮತ್ತು ಭಯೋತ್ಪಾದನೆಯವರೆಗೆ ರಾಜ್ಯದ ಮುಖ್ಯಮಂತ್ರಿ ಉತ್ತರದಾಯಿ ಆಗುತ್ತಾರೆ. ಸಾರ್ವಜನಿಕ ಅಭಿಪ್ರಾಯವನ್ನು ಗೌರವಿಸುವ ಬದಲು, ಅವರು ಇಂದು ಯುಪಿಯಲ್ಲಿ ರೈತರನ್ನು ಸದೆಬಡಿಯಲು ನಿಂತಿದ್ದಾರೆ. ರಾಜ್ಯದ ಜನತೆ ಅವರ ದುರಾಡಳಿತಕ್ಕೆ ತಕ್ಕ ಉತ್ತರ ನೀಡುತ್ತಾರೆ ” ಎಂದು ಎಚ್ಚರಿಸಿದ್ದಾರೆ.

ಮುಂದಿನ ಚುನಾವಣೆಯ ಭಾಗವಾಗಿ ಕಾರ್ಟೂನ್‌ಗಳನ್ನು ಯುಪಿ ಬಿಜೆಪಿ ಪೋಸ್ಟ್‌ ಮಾಡುತ್ತಿದೆ. ಕೆಲವು ದಿನಗಳ ಹಿಂದೆ “ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಹಿಂದುತ್ವದ ವೇಷ ಧರಿಸುತ್ತಿದ್ದಾರೆ” ಎಂಬ ಕಾರ್ಟೂನ್‌ಅನ್ನು ಟ್ವಿಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...