Homeಮುಖಪುಟಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

ಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಮನ ಅವತಾರದಂತೆ ಉತ್ತರ ಪ್ರದೇಶದ ಬಿಜೆಪಿ ಬಿಂಬಿಸಿರುವ ವ್ಯಂಗ್ಯಚಿತ್ರ ಪ್ರಕಟಿಸಿದೆ.

ದಸರಾ ಸಂಭ್ರಮಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಬಿಜೆಪಿ ಟ್ವಿಟರ್‌‌ನಲ್ಲಿ ಹಂಚಿಕೊಂಡಿರುವ ವ್ಯಂಗ್ಯಚಿತ್ರದಲ್ಲಿ ಯೋಗಿ ಆದಿತ್ಯನಾಥ ಅವರನ್ನು ರಾಮನಂತೆ ಬಿಂಬಿಸಿ, ಅವರ ಕೈಗೆ ಬಿಲ್ಲು ಬಾಣವನ್ನು ನೀಡಲಾಗಿದೆ. ಆದಿತ್ಯನಾಥ ಅವರು ರಾವಣನ ಮೇಲೆ ಬಾಣ ಪ್ರಯೋಗಿಸುತ್ತಿದ್ದಾರೆ. ಹತ್ತು ತಲೆಯ ರಾವಣನ ಒಂಬತ್ತು ತಲೆಗಳು ಒಂದೊಂದು ಸಾಮಾಜಿಕ ಅನಿಷ್ಟವೆಂಬಂತೆ ಬಿಂಬಿಸಲಾಗಿದೆ.

“ಸಾಮಾಜಿಕ ಅನಿಷ್ಟಗಳು ಉತ್ತರ ಪ್ರದೇಶದಲ್ಲಿ ಅಳಿಯುತ್ತಿವೆ. ಭ್ರಷ್ಟಾಚಾರ, ಗುಂಡಾರಾಜ್ಯ, ಹಗರಣ, ಅಪರಾಧ, ಜಂಗಲ್‌ ರಾಜ್, ವಂಚನೆ, ಸಮಾಧಾನಪಡಿಸುವಿಕೆ, ಕೊರೊನಾ, ಮತಾಂತರದ ಮೇಲೆ ಬಿಜೆಪಿ ಸರ್ಕಾರ ದಾಳಿ ಮಾಡಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಕ್ತಾರ ಹರ್ಷ ಶ್ರೀನಿವಾಸ ಪ್ರತಿಕ್ರಿಯಿಸಿ, “ರಾವಣನನ್ನು ದುಷ್ಟತನದ ಪ್ರತೀಕವಾಗಿ ನೋಡಲಾಗುತ್ತದೆ. ಭ್ರಷ್ಟಾಚಾರ, ಅಪರಾಧ, ಗೂಂಡಾರಾಜ್‌ಗಳು ಕೂಡ ಸಮಾಜದ ದುಷ್ಟತನಗಳು. ಮುಖ್ಯಮಂತ್ರಿ ಆದಿತ್ಯನಾಥ ಅವರು ಸಾಂಕೇತಿಕವಾಗಿ ಅವುಗಳಿಗೆ ಗುರಿ ಇಟ್ಟಿದ್ದಾರೆ” ಎಂದು ಸಮರ್ಥಿಸಿದ್ದಾರೆ.

“ಭ್ರಷ್ಟಾಚಾರ, ಅಪರಾಧ ಕೃತ್ಯಗಳನ್ನು ರಾಜ್ಯದಲ್ಲಿ ತಡೆಯಲು ಮುಖ್ಯಮಂತ್ರಿ ಆದಿತ್ಯನಾಥ ಅವರು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಹೆಚ್ಚೇನು ಹೇಳದೆ ಸಾಮಾಜಿಕ ಮಾಧ್ಯಮಗಳ ಮೂಲಕ ಕಾರ್ಟೂನ್‌‌ ಬಳಸಿ ಹೇಳಬಹುದು” ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಭಗವಾನ್ ರಾಮನಿಗೆ ಹೋಲುವಂತೆಯೇ ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಯುಪಿ ಮುಖ್ಯಮಂತ್ರಿಯವರನ್ನು ರಾಮನಂತೆ ಪೋಸ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಮನು ನಂಬಿಕೆ, ಘನತೆ, ನ್ಯಾಯ ಮತ್ತು ಸತ್ಯದ ಸಂಕೇತ. ಯೋಗಿ ಆದಿತ್ಯನಾಥ್ ‌ಅವರು ಕಾರ್ಟೂನ್‌ನಲ್ಲಿ ಗುರಿ ಇಟ್ಟಿರುವ ವಿಚಾರಗಳು ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿವೆ” ಎಂದು ಶ್ರೀನಾಟೆ ಹೇಳಿದ್ದಾರೆ.

“ಅನ್ಯಾಯದಿಂದ ಅಧೀನದವರೆಗೂ, ಮಹಿಳೆಯರ ವಿರುದ್ಧದ ಅಪರಾಧದವರೆಗೆ, ಇಡೀ ರಾಜ್ಯದಲ್ಲಿ ಹಬ್ಬಿರುವ ಭಯ ಮತ್ತು ಭಯೋತ್ಪಾದನೆಯವರೆಗೆ ರಾಜ್ಯದ ಮುಖ್ಯಮಂತ್ರಿ ಉತ್ತರದಾಯಿ ಆಗುತ್ತಾರೆ. ಸಾರ್ವಜನಿಕ ಅಭಿಪ್ರಾಯವನ್ನು ಗೌರವಿಸುವ ಬದಲು, ಅವರು ಇಂದು ಯುಪಿಯಲ್ಲಿ ರೈತರನ್ನು ಸದೆಬಡಿಯಲು ನಿಂತಿದ್ದಾರೆ. ರಾಜ್ಯದ ಜನತೆ ಅವರ ದುರಾಡಳಿತಕ್ಕೆ ತಕ್ಕ ಉತ್ತರ ನೀಡುತ್ತಾರೆ ” ಎಂದು ಎಚ್ಚರಿಸಿದ್ದಾರೆ.

ಮುಂದಿನ ಚುನಾವಣೆಯ ಭಾಗವಾಗಿ ಕಾರ್ಟೂನ್‌ಗಳನ್ನು ಯುಪಿ ಬಿಜೆಪಿ ಪೋಸ್ಟ್‌ ಮಾಡುತ್ತಿದೆ. ಕೆಲವು ದಿನಗಳ ಹಿಂದೆ “ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಹಿಂದುತ್ವದ ವೇಷ ಧರಿಸುತ್ತಿದ್ದಾರೆ” ಎಂಬ ಕಾರ್ಟೂನ್‌ಅನ್ನು ಟ್ವಿಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...