Homeಮುಖಪುಟಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

ಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಮನ ಅವತಾರದಂತೆ ಉತ್ತರ ಪ್ರದೇಶದ ಬಿಜೆಪಿ ಬಿಂಬಿಸಿರುವ ವ್ಯಂಗ್ಯಚಿತ್ರ ಪ್ರಕಟಿಸಿದೆ.

ದಸರಾ ಸಂಭ್ರಮಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಬಿಜೆಪಿ ಟ್ವಿಟರ್‌‌ನಲ್ಲಿ ಹಂಚಿಕೊಂಡಿರುವ ವ್ಯಂಗ್ಯಚಿತ್ರದಲ್ಲಿ ಯೋಗಿ ಆದಿತ್ಯನಾಥ ಅವರನ್ನು ರಾಮನಂತೆ ಬಿಂಬಿಸಿ, ಅವರ ಕೈಗೆ ಬಿಲ್ಲು ಬಾಣವನ್ನು ನೀಡಲಾಗಿದೆ. ಆದಿತ್ಯನಾಥ ಅವರು ರಾವಣನ ಮೇಲೆ ಬಾಣ ಪ್ರಯೋಗಿಸುತ್ತಿದ್ದಾರೆ. ಹತ್ತು ತಲೆಯ ರಾವಣನ ಒಂಬತ್ತು ತಲೆಗಳು ಒಂದೊಂದು ಸಾಮಾಜಿಕ ಅನಿಷ್ಟವೆಂಬಂತೆ ಬಿಂಬಿಸಲಾಗಿದೆ.

“ಸಾಮಾಜಿಕ ಅನಿಷ್ಟಗಳು ಉತ್ತರ ಪ್ರದೇಶದಲ್ಲಿ ಅಳಿಯುತ್ತಿವೆ. ಭ್ರಷ್ಟಾಚಾರ, ಗುಂಡಾರಾಜ್ಯ, ಹಗರಣ, ಅಪರಾಧ, ಜಂಗಲ್‌ ರಾಜ್, ವಂಚನೆ, ಸಮಾಧಾನಪಡಿಸುವಿಕೆ, ಕೊರೊನಾ, ಮತಾಂತರದ ಮೇಲೆ ಬಿಜೆಪಿ ಸರ್ಕಾರ ದಾಳಿ ಮಾಡಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಕ್ತಾರ ಹರ್ಷ ಶ್ರೀನಿವಾಸ ಪ್ರತಿಕ್ರಿಯಿಸಿ, “ರಾವಣನನ್ನು ದುಷ್ಟತನದ ಪ್ರತೀಕವಾಗಿ ನೋಡಲಾಗುತ್ತದೆ. ಭ್ರಷ್ಟಾಚಾರ, ಅಪರಾಧ, ಗೂಂಡಾರಾಜ್‌ಗಳು ಕೂಡ ಸಮಾಜದ ದುಷ್ಟತನಗಳು. ಮುಖ್ಯಮಂತ್ರಿ ಆದಿತ್ಯನಾಥ ಅವರು ಸಾಂಕೇತಿಕವಾಗಿ ಅವುಗಳಿಗೆ ಗುರಿ ಇಟ್ಟಿದ್ದಾರೆ” ಎಂದು ಸಮರ್ಥಿಸಿದ್ದಾರೆ.

“ಭ್ರಷ್ಟಾಚಾರ, ಅಪರಾಧ ಕೃತ್ಯಗಳನ್ನು ರಾಜ್ಯದಲ್ಲಿ ತಡೆಯಲು ಮುಖ್ಯಮಂತ್ರಿ ಆದಿತ್ಯನಾಥ ಅವರು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಹೆಚ್ಚೇನು ಹೇಳದೆ ಸಾಮಾಜಿಕ ಮಾಧ್ಯಮಗಳ ಮೂಲಕ ಕಾರ್ಟೂನ್‌‌ ಬಳಸಿ ಹೇಳಬಹುದು” ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಭಗವಾನ್ ರಾಮನಿಗೆ ಹೋಲುವಂತೆಯೇ ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಯುಪಿ ಮುಖ್ಯಮಂತ್ರಿಯವರನ್ನು ರಾಮನಂತೆ ಪೋಸ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಮನು ನಂಬಿಕೆ, ಘನತೆ, ನ್ಯಾಯ ಮತ್ತು ಸತ್ಯದ ಸಂಕೇತ. ಯೋಗಿ ಆದಿತ್ಯನಾಥ್ ‌ಅವರು ಕಾರ್ಟೂನ್‌ನಲ್ಲಿ ಗುರಿ ಇಟ್ಟಿರುವ ವಿಚಾರಗಳು ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿವೆ” ಎಂದು ಶ್ರೀನಾಟೆ ಹೇಳಿದ್ದಾರೆ.

“ಅನ್ಯಾಯದಿಂದ ಅಧೀನದವರೆಗೂ, ಮಹಿಳೆಯರ ವಿರುದ್ಧದ ಅಪರಾಧದವರೆಗೆ, ಇಡೀ ರಾಜ್ಯದಲ್ಲಿ ಹಬ್ಬಿರುವ ಭಯ ಮತ್ತು ಭಯೋತ್ಪಾದನೆಯವರೆಗೆ ರಾಜ್ಯದ ಮುಖ್ಯಮಂತ್ರಿ ಉತ್ತರದಾಯಿ ಆಗುತ್ತಾರೆ. ಸಾರ್ವಜನಿಕ ಅಭಿಪ್ರಾಯವನ್ನು ಗೌರವಿಸುವ ಬದಲು, ಅವರು ಇಂದು ಯುಪಿಯಲ್ಲಿ ರೈತರನ್ನು ಸದೆಬಡಿಯಲು ನಿಂತಿದ್ದಾರೆ. ರಾಜ್ಯದ ಜನತೆ ಅವರ ದುರಾಡಳಿತಕ್ಕೆ ತಕ್ಕ ಉತ್ತರ ನೀಡುತ್ತಾರೆ ” ಎಂದು ಎಚ್ಚರಿಸಿದ್ದಾರೆ.

ಮುಂದಿನ ಚುನಾವಣೆಯ ಭಾಗವಾಗಿ ಕಾರ್ಟೂನ್‌ಗಳನ್ನು ಯುಪಿ ಬಿಜೆಪಿ ಪೋಸ್ಟ್‌ ಮಾಡುತ್ತಿದೆ. ಕೆಲವು ದಿನಗಳ ಹಿಂದೆ “ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಹಿಂದುತ್ವದ ವೇಷ ಧರಿಸುತ್ತಿದ್ದಾರೆ” ಎಂಬ ಕಾರ್ಟೂನ್‌ಅನ್ನು ಟ್ವಿಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...