Homeಮುಖಪುಟಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

ಯೋಗಿ ಆದಿತ್ಯನಾಥರನ್ನು ರಾಮನ ಅವತಾರದಂತೆ ಬಿಂಬಿಸಿದ ಯುಪಿ ಬಿಜೆಪಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ರಾಮನ ಅವತಾರದಂತೆ ಉತ್ತರ ಪ್ರದೇಶದ ಬಿಜೆಪಿ ಬಿಂಬಿಸಿರುವ ವ್ಯಂಗ್ಯಚಿತ್ರ ಪ್ರಕಟಿಸಿದೆ.

ದಸರಾ ಸಂಭ್ರಮಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಬಿಜೆಪಿ ಟ್ವಿಟರ್‌‌ನಲ್ಲಿ ಹಂಚಿಕೊಂಡಿರುವ ವ್ಯಂಗ್ಯಚಿತ್ರದಲ್ಲಿ ಯೋಗಿ ಆದಿತ್ಯನಾಥ ಅವರನ್ನು ರಾಮನಂತೆ ಬಿಂಬಿಸಿ, ಅವರ ಕೈಗೆ ಬಿಲ್ಲು ಬಾಣವನ್ನು ನೀಡಲಾಗಿದೆ. ಆದಿತ್ಯನಾಥ ಅವರು ರಾವಣನ ಮೇಲೆ ಬಾಣ ಪ್ರಯೋಗಿಸುತ್ತಿದ್ದಾರೆ. ಹತ್ತು ತಲೆಯ ರಾವಣನ ಒಂಬತ್ತು ತಲೆಗಳು ಒಂದೊಂದು ಸಾಮಾಜಿಕ ಅನಿಷ್ಟವೆಂಬಂತೆ ಬಿಂಬಿಸಲಾಗಿದೆ.

“ಸಾಮಾಜಿಕ ಅನಿಷ್ಟಗಳು ಉತ್ತರ ಪ್ರದೇಶದಲ್ಲಿ ಅಳಿಯುತ್ತಿವೆ. ಭ್ರಷ್ಟಾಚಾರ, ಗುಂಡಾರಾಜ್ಯ, ಹಗರಣ, ಅಪರಾಧ, ಜಂಗಲ್‌ ರಾಜ್, ವಂಚನೆ, ಸಮಾಧಾನಪಡಿಸುವಿಕೆ, ಕೊರೊನಾ, ಮತಾಂತರದ ಮೇಲೆ ಬಿಜೆಪಿ ಸರ್ಕಾರ ದಾಳಿ ಮಾಡಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಬಿಜೆಪಿ ವಕ್ತಾರ ಹರ್ಷ ಶ್ರೀನಿವಾಸ ಪ್ರತಿಕ್ರಿಯಿಸಿ, “ರಾವಣನನ್ನು ದುಷ್ಟತನದ ಪ್ರತೀಕವಾಗಿ ನೋಡಲಾಗುತ್ತದೆ. ಭ್ರಷ್ಟಾಚಾರ, ಅಪರಾಧ, ಗೂಂಡಾರಾಜ್‌ಗಳು ಕೂಡ ಸಮಾಜದ ದುಷ್ಟತನಗಳು. ಮುಖ್ಯಮಂತ್ರಿ ಆದಿತ್ಯನಾಥ ಅವರು ಸಾಂಕೇತಿಕವಾಗಿ ಅವುಗಳಿಗೆ ಗುರಿ ಇಟ್ಟಿದ್ದಾರೆ” ಎಂದು ಸಮರ್ಥಿಸಿದ್ದಾರೆ.

“ಭ್ರಷ್ಟಾಚಾರ, ಅಪರಾಧ ಕೃತ್ಯಗಳನ್ನು ರಾಜ್ಯದಲ್ಲಿ ತಡೆಯಲು ಮುಖ್ಯಮಂತ್ರಿ ಆದಿತ್ಯನಾಥ ಅವರು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ. ಹೆಚ್ಚೇನು ಹೇಳದೆ ಸಾಮಾಜಿಕ ಮಾಧ್ಯಮಗಳ ಮೂಲಕ ಕಾರ್ಟೂನ್‌‌ ಬಳಸಿ ಹೇಳಬಹುದು” ಎಂದಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಭಗವಾನ್ ರಾಮನಿಗೆ ಹೋಲುವಂತೆಯೇ ಬಿಂಬಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಯುಪಿ ಮುಖ್ಯಮಂತ್ರಿಯವರನ್ನು ರಾಮನಂತೆ ಪೋಸ್ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಮನು ನಂಬಿಕೆ, ಘನತೆ, ನ್ಯಾಯ ಮತ್ತು ಸತ್ಯದ ಸಂಕೇತ. ಯೋಗಿ ಆದಿತ್ಯನಾಥ್ ‌ಅವರು ಕಾರ್ಟೂನ್‌ನಲ್ಲಿ ಗುರಿ ಇಟ್ಟಿರುವ ವಿಚಾರಗಳು ಉತ್ತರ ಪ್ರದೇಶದಲ್ಲಿ ವಿಜೃಂಭಿಸುತ್ತಿವೆ” ಎಂದು ಶ್ರೀನಾಟೆ ಹೇಳಿದ್ದಾರೆ.

“ಅನ್ಯಾಯದಿಂದ ಅಧೀನದವರೆಗೂ, ಮಹಿಳೆಯರ ವಿರುದ್ಧದ ಅಪರಾಧದವರೆಗೆ, ಇಡೀ ರಾಜ್ಯದಲ್ಲಿ ಹಬ್ಬಿರುವ ಭಯ ಮತ್ತು ಭಯೋತ್ಪಾದನೆಯವರೆಗೆ ರಾಜ್ಯದ ಮುಖ್ಯಮಂತ್ರಿ ಉತ್ತರದಾಯಿ ಆಗುತ್ತಾರೆ. ಸಾರ್ವಜನಿಕ ಅಭಿಪ್ರಾಯವನ್ನು ಗೌರವಿಸುವ ಬದಲು, ಅವರು ಇಂದು ಯುಪಿಯಲ್ಲಿ ರೈತರನ್ನು ಸದೆಬಡಿಯಲು ನಿಂತಿದ್ದಾರೆ. ರಾಜ್ಯದ ಜನತೆ ಅವರ ದುರಾಡಳಿತಕ್ಕೆ ತಕ್ಕ ಉತ್ತರ ನೀಡುತ್ತಾರೆ ” ಎಂದು ಎಚ್ಚರಿಸಿದ್ದಾರೆ.

ಮುಂದಿನ ಚುನಾವಣೆಯ ಭಾಗವಾಗಿ ಕಾರ್ಟೂನ್‌ಗಳನ್ನು ಯುಪಿ ಬಿಜೆಪಿ ಪೋಸ್ಟ್‌ ಮಾಡುತ್ತಿದೆ. ಕೆಲವು ದಿನಗಳ ಹಿಂದೆ “ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಹಿಂದುತ್ವದ ವೇಷ ಧರಿಸುತ್ತಿದ್ದಾರೆ” ಎಂಬ ಕಾರ್ಟೂನ್‌ಅನ್ನು ಟ್ವಿಟ್‌ ಮಾಡಲಾಗಿತ್ತು.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...