Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...