Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...