Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...