Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...