Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...