Homeಮುಖಪುಟಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

ಯುಪಿಯಿಂದ ಆಲೂಗಡ್ಡೆ ಆಮದಿಗೆ ತೆಲಂಗಾಣದಲ್ಲಿ ತಡೆ: ಯುಪಿಯಲ್ಲಿ ಓವೈಸಿ ರಾಜಕಾರಣಕ್ಕೆ ವಿರೋಧ

- Advertisement -
- Advertisement -

ಅಸಾದುದ್ದೀನ್ ಓವೈಸಿಯ ಪಕ್ಷವು ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಆಲೂಗಡ್ಡೆ ಉತ್ಪಾದಕರು ವಿರೋಧಿಸಿದ್ದಾರೆ. ಉತ್ತರ ಪ್ರದೇಶದಿಂದ ಸರಬರಾಜಾಗುತ್ತಿದ್ದ ಆಲೂಗಡ್ಡೆಗೆ ತೆಲಂಗಾಣ ರಾಜ್ಯ ಸರ್ಕಾರ ತಡೆವೊಡ್ಡಿದ್ದೇ ಇದಕ್ಕೆ ಕಾರಣವಾಗಿದೆ.

ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಓವೈಸಿಯವರ ಪಕ್ಷ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದೆ. ಓವೈಸಿಯವರು ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡಿರುವುದರಿಂದ ಆಲೂಗಡ್ಡೆ ಉತ್ಪಾದಕರ ವಿರೋಧವನ್ನು ಎದುರಿಸುವಂತಾಗಿದೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವಿಶೇಷ ವರದಿ ಮಾಡಿದೆ.

ಆಗ್ರಾ ಸಮೀಪದ ಖಂಡೌಲಿಯ ಆರು ಎಕರೆ ಭೂಮಿಯಲ್ಲಿ ಆಲೂಗೆಡ್ಡೆ ಬೆಳೆದಿರುವ ಮೊಹಮ್ಮದ್ ಅಲಂಗೀರ್ ಅವರು ಆಗ್ರಾದ ಆಲೂ ಉತ್ಪಾದಕ್ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಹೌದು. ಇವರು ಓವೈಸಿ ಸ್ಪರ್ಧೆಯನ್ನು ಪ್ರಶ್ನಿಸಿದ್ದಾರೆ.

“ನಮ್ಮ ಆಲೂಗಡ್ಡೆಯನ್ನು ನಿರ್ಬಂಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ನೇತೃತ್ವದ ತೆಲಂಗಾಣ ಸರ್ಕಾರವನ್ನು ಬೆಂಬಲಿಸುತ್ತಿರುವ ಒವೈಸಿ ಇಲ್ಲಿ ಹೇಗೆ ಪ್ರಚಾರ ಮಾಡಬಹುದು?” ಎಂದು ಅಲಂಗೀರ್ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದಿಂದ ತೆಲಂಗಾಣಕ್ಕೆ ಪ್ರತಿ ದಿನ ಸುಮಾರು 100 ಟ್ರಕ್‌ಗಳಲ್ಲಿ ಆಲೂಗೆಡ್ಡೆ ಆಮದು ಮಾಡಲಾಗುತ್ತದೆ. ಒಂದೊಂದು ಟ್ರಕ್‌ನಲ್ಲೂ 50 ಕೆ.ಜಿ.ಯ 500 ಚೀಲಗಳನ್ನು ಇರಿಸಲಾಗುತ್ತದೆ ಎಂದು ಎಂದು ಅಲಂಗೀರ್ ಅಂದಾಜಿಸಿದ್ದಾರೆ. ಅದರಲ್ಲಿ 50-60 ಟ್ರಕ್‌ಗಳು ಆಗ್ರಾದಿಂದ ಹೊರಡುತ್ತವೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಉತ್ತರ ಪ್ರದೇಶದಿಂದ ಪ್ರತಿದಿನ 700-800 ಟ್ರಕ್‌ಗಳಲ್ಲಿ ಆಲೂಗಡ್ಡೆ ಸರಬರಾಜು ಮಾಡಲಾಗುತ್ತದೆ.

ತೆಲಂಗಾಣದ ಕೃಷಿ ಸಚಿವ ಎಸ್.ನಿರಂಜನ್ ರೆಡ್ಡಿ ಅವರು ತಮ್ಮ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದು, “ಈಗ ಯುಪಿಯಿಂದ ಬರುತ್ತಿರುವ ಆಲೂಗಡ್ಡೆಗಳು ಕಳೆದ ವರ್ಷದ ಉತ್ಪನ್ನವಾಗಿದ್ದು, ಕೋಲ್ಡ್ ಸ್ಟೋರ್‌ಗಳಲ್ಲಿ ಇರಿಸಲಾಗಿರುತ್ತದೆ. ತೆಲಂಗಾಣದಲ್ಲಿ ರೈತರು ಬೆಳೆದಿರುವ, ಹೊಸದಾಗಿ ಕೊಯ್ಲು ಮಾಡಿದ ಆಲೂಗಡ್ಡೆ ಮಾರುಕಟ್ಟೆಗೆ ಬರುತ್ತಿರುವಾಗ ನಾವು ಕಳೆದ ವರ್ಷದ ಆಲೂಗಡ್ಡೆಗಳನ್ನೇಕೆ ಸೇವಿಸಬೇಕು” ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ರೈತರು ಅಕ್ಟೋಬರ್‌ನಿಂದ ನವೆಂಬರ್ ಆರಂಭದವರೆಗೆ ಆಲೂಗಡ್ಡೆಯನ್ನು ಬಿತ್ತುತ್ತಾರೆ. ಫೆಬ್ರವರಿ 20ರಿಂದ ಮಾರ್ಚ್ 10ರೊಳಗೆ ಕೊಯ್ಲು ಮಾಡುತ್ತಾರೆ. ಈ ರೈತರು ಸಾಮಾನ್ಯವಾಗಿ ಸುಗ್ಗಿಯ ಸಮಯದಲ್ಲಿ ಸುಮಾರು ಐದನೇ ಒಂದು ಭಾಗವನ್ನು ಮಾತ್ರ ಮಾರಾಟ ಮಾಡಿ, ಇನ್ನುಳಿದ ಉತ್ಪನ್ನಗಳನ್ನು ನವೆಂಬರ್ ವರೆಗೆ ಮಾರಾಟ ಮಾಡಲು ಕೋಲ್ಡ್‌ ಸ್ಟೋರೇಜ್‌ಗಳಲ್ಲಿ ಶೇಖರಿಸುತ್ತಾರೆ. ಹಿಮಾಚಲ ಪ್ರದೇಶ (ಮುಖ್ಯವಾಗಿ ಉನಾ ಜಿಲ್ಲೆ), ಪಂಜಾಬ್ (ದೋಬಾ ಬೆಲ್ಟ್), ಕರ್ನಾಟಕ (ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ), ಮಹಾರಾಷ್ಟ್ರ (ಮಂಚಾರ್) ಮತ್ತು ಯುಪಿ (ಫರೂಕಾಬಾದ್ ಮತ್ತು ಕನ್ನೌಜ್) ನಂತಹ ರಾಜ್ಯಗಳಲ್ಲಿ ತಾಜಾ ಆಲೂಗಡ್ಡೆ ಲಭ್ಯವಿದೆ. 60-75 ದಿನಗಳ ಕಡಿಮೆ ಅವಧಿಯ ಈ ಬೆಳೆ 2-4 ಡಿಗ್ರಿ ಸೆಲ್ಸಿಯಸ್‌ನಲ್ಲಿ 9-10 ತಿಂಗಳವರೆಗೆ ಸಂಗ್ರಹಿಸಲು ಯೋಗ್ಯವಾಗಿಲ್ಲ.

“ಕಳೆದ ವರ್ಷ ಹೆಚ್ಚಿನ ಆಲೂಗಡ್ಡೆ ಬೆಳೆದಿದ್ದೇವೆ. ಇದರಿಂದಾಗಿ ಒಟ್ಟು ಉತ್ಪನ್ನದ ಶೇ. 4-5ರಷ್ಟು ಆಲೂಗಡ್ಡೆಗಳು ಇನ್ನೂ ನಮ್ಮ ಕೋಲ್ಡ್ ಸ್ಟೋರ್‌ಗಳಲ್ಲಿ ಬಿದ್ದಿವೆ. ತೆಲಂಗಾಣ ಮತ್ತು ಇತರರು ಖರೀದಿಸುವುದನ್ನು ನಿಲ್ಲಿಸಿದರೆ, ಫೆಬ್ರವರಿ ಅಂತ್ಯದಿಂದ ರೈತರು ತರುವ ಹೊಸ ಆಲೂಗಡ್ಡೆಗಳಿಗೆ ಜಾಗವನ್ನು ನೀಡಲು ನಾವು ಇವುಗಳನ್ನು ರಸ್ತೆಗೆ ಎಸೆಯಬೇಕಾಗುತ್ತದೆ” ಎಂದು ವೈದ್ಯಜಿ ಶೀಟ್‌ಗ್ರಾಹ್ ಪ್ರೈ.ಲಿ. (ಕೋಲ್ಡ್‌ ಸ್ಟೋರೇಜ್‌) ಮಾಲೀಕ ದೂಂಗಾರ್ ಸಿಂಗ್ ಚೌಧರಿ ಆತಂಕ ವ್ಯಕ್ತಪಡಿಸುತ್ತಾರೆ.

ಇತ್ತ ಆಲೂಗಡ್ಡೆ ಬೆಳೆಯುವಲ್ಲಿ ತೆಲಂಗಾಣವೂ ಗಮನ ಸೆಳೆಯುತ್ತಿದೆ. ತೆಲಂಗಾಣ ರಾಜ್ಯದಲ್ಲಿ ಪ್ರಸ್ತುತ 3,500-4,000 ಎಕರೆಗಳಲ್ಲಿ ಆಲೂಗಡ್ಡೆಯನ್ನು ಬೆಳೆಯಲಾಗುತ್ತಿದೆ. ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಪ್ರದೇಶ ಆಲೂಗಡ್ಡೆ ಕೃಷಿಗೆ ಹೆಸರಾಗಿದೆ. “ನಮ್ಮ ರಾಜ್ಯವು ಆಲೂಗಡ್ಡೆ ಬೆಳೆಯಲು ಅತ್ಯಂತ ಸೂಕ್ತವಾಗಿದೆ. ವಿಶೇಷವಾಗಿ ನಾವು ಕೈಗೊಂಡ ನೀರಾವರಿ ಯೋಜನೆಗಳ ನಂತರ ಹೆಚ್ಚಿನ ಕೃಷಿಯನ್ನು ಉತ್ತೇಜಿಸಲು ಅವಕಾಶವಿದೆ. ಇದು ನಿಸ್ಸಂದೇಹವಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸುಗ್ಗಿಯ 4-5 ದಿನಗಳಲ್ಲಿ ಸೇವಿಸಬಹುದಾದ ತಾಜಾ ಆಲೂಗಡ್ಡೆ ಉತ್ಪಾದನೆ ಮತ್ತು ಮಾರುಕಟ್ಟೆಯನ್ನು ನಾವು ಗುರಿಯಾಗಿಸಿಕೊಂಡಿದ್ದೇವೆ. ಹೊಸದಾಗಿ ಬೆಳೆದ ಉತ್ಪನ್ನಗಳಿಗೆ ಬೇಡಿಕೆ ಇರುವಾಗ ಆಗ್ರಾದ ಕೋಲ್ಡ್ ಸ್ಟೋರ್‌ಗಳನ್ನು ನಾವೇಕೆ ಅವಲಂಬಿಸಬೇಕು” ಎಂದು ಕೃಷಿ ಸಚಿವ ನಿರಂಜನ್ ರೆಡ್ಡಿ ಕೇಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಓವೈಸಿಯ ಸ್ಪರ್ಧೆಯನ್ನು ಉತ್ತರ ಪ್ರದೇಶದಲ್ಲಿ ವಿರೋಧಿಸಲಾಗುತ್ತಿದೆ.


ಇದನ್ನೂ ಓದಿರಿ: ದೆಹಲಿ: ಡ್ರಗ್ ಸ್ಮಗ್ಲರ್‌ ಬಂಧಿಸಲು ಹೋದ ಪೋಲೀಸರ ಮೇಲೆ ಗುಂಪು ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...