Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...