Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...