Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...