Homeಮುಖಪುಟಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಯುಪಿ: ಸರ್ಕಾರಿ ಕಾಲೇಜೊಂದರಲ್ಲಿ ಬುರ್ಕಾ ನಿಷೇಧ; ವಿವಾದದ ವಾಸ್ತವವೇನು?

ಪ್ರತಿಭಟನಾಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ವಿರೋಧವಿಲ್ಲ: ಪ್ರಾಂಶುಪಾಲ

- Advertisement -
- Advertisement -

ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸದಂತೆ ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಕಾಲೇಜಿನಲ್ಲಿ ಜಾರಿಗೊಳಿಸಿದ ಸಮವಸ್ತ್ರ ನೀತಿಯು ವಿವಾದಕ್ಕೆ ಗುರಿಯಾಗಿದೆ.

ಸಮಾಜವಾದಿ ಪಕ್ಷದ ಯುವ ಘಟಕವು ಪ್ರತಿಭಟನೆ ನಡೆಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನೊಳಗೆ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಹಿಂದೂ ಕಾಲೇಜಿನ ಅಧಿಕಾರಿಗಳು ಪ್ರತಿಕ್ರಿಯಿಸುತ್ತಾ “ಹೊರಗಿನವರ ಪ್ರವೇಶವನ್ನು ತಡೆಯಲು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ” ಎಂದಿದ್ದಾರೆ.

ಹುಡುಗರಿಗೆ ಬಿಳಿ ಶರ್ಟ್ ಮತ್ತು ಬೂದು ಬಣ್ಣದ ಪ್ಯಾಂಟ್, ಹುಡುಗಿಯರಿಗೆ ಬೂದು ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮವನ್ನು ಸಮವಸ್ತ್ರವಾಗಿ ಅಳವಡಿಸಲಾಗಿದೆ. ಈ ನಿಯಮವು ಯಾವಾಗಲೂ ಜಾರಿಯಲ್ಲಿರುತ್ತದೆ. ಕೆಲವು ಹೊರಗಿನವರು ಅಧ್ಯಾಪಕರೊಬ್ಬರ ಮೇಲೆ ದಾಳಿ ಮಾಡಿದ ನಂತರ, ಕಾಲೇಜು ಅಧಿಕಾರಿಗಳು ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದರು. ಕಳೆದ ಅಕ್ಟೋಬರ್ 15ರಂದು ನಿಯಮ ಜಾರಿಯಾದರೂ ಈ ವರ್ಷದ ಜನವರಿ 1 ರಿಂದ ಮಾತ್ರ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಕಾಲೇಜು ಹೇಳಿಕೊಂಡಿದೆ.

ಸಮಾಜವಾದಿ ಪಕ್ಷದ ಯುವ ಘಟಕದ ನೇತೃತ್ವದಲ್ಲಿ ಜನವರಿ ಮೊದಲ ವಾರದಲ್ಲಿ ಕಾಲೇಜು ಗೇಟ್‌ಗಳ ಹೊರಗೆ ಧರಣಿ ಆರಂಭಿಸಿದ ವಿದ್ಯಾರ್ಥಿಗಳು, “ಪ್ರವೇಶದ್ವಾರದಲ್ಲಿ ತಮ್ಮ ಬುರ್ಖಾವನ್ನು ತೆಗೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸೂಚಿಸಲಾಗುತ್ತಿದೆ.  ಹೀಗಾದಾಗ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ” ಎಂದು ದೂರಿದ್ದಾರೆ. ಆದರೆ ಕಾಲೇಜಿನ ಅಧಿಕಾರಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ.

“ಪ್ರವೇಶದ್ವಾರದ ಬಳಿ ಇರುವ ಕೊಠಡಿಯನ್ನು ಯಾವಾಗಲೂ ಈ ಉದ್ದೇಶಕ್ಕಾಗಿ ನಿಗದಿಪಡಿಸಲಾಗಿದೆ” ಎಂದು ಕಾಲೇಜು ಹೇಳಿಕೊಂಡಿದೆ. ಜನವರಿಯಲ್ಲಿ ವಿವಾದ ಉಂಟಾದ ಬಳಿಕ ಈ ಕೊಠಡಿಗೆ ‘ಬದಲಾವಣೆ ಕೊಠಡಿ’ ಎಂದು ಹೆಸರಿಡಲಾಗಿದೆ.

“ನಾನು ಈ ಪ್ರತಿಭಟನೆಯನ್ನು ಬೆಂಬಲಿಸುವುದಿಲ್ಲ. ಬುರ್ಖಾ ಹಾಕಿಕೊಂಡು ಬರುವ ಹುಡುಗಿಯರಿಗೆ ಕಾಲೇಜು ಆಡಳಿತ ಮಂಡಳಿ ಜಾಗ ನೀಡಿದೆ. ಬುರ್ಖಾ ಹಾಕದೆ ಬರಬೇಕೆಂದು ಅವರೇನು ಹೇಳುತ್ತಿಲ್ಲ. ಬುರ್ಖಾ ತೆಗೆದು ಕಾಲೇಜಿನೊಳಗೆ ಬರುಲು ಹೇಳುತ್ತಿದ್ದಾರೆ. ಅವರು ಹಿಜಾಬ್ ಮೇಲೆ ನಿರ್ಬಂಧಗಳನ್ನು ಹಾಕಿಲ್ಲ” ಎಂದು ಮೊದಲ ವರ್ಷದ ಎಂ.ಕಾಂ ವಿದ್ಯಾರ್ಥಿ ಇಕ್ರಾ ಅವರು ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ತಿಳಿಸಿದ್ದಾರೆ.

“ಕಾಲೇಜಿಗೆ ಪ್ರವೇಶ ಪಡೆಯುವ ಸಮಯದಲ್ಲೇ ಈ ಸಮವಸ್ತ್ರಕ್ಕೆ ಒಪ್ಪಿಗೆ ನೀಡುವ ನಿಬಂಧನೆಗೆ ಸಹಿ ಹಾಕಲಾಗಿರುತ್ತದೆ. ವಿದ್ಯಾರ್ಥಿನಿಯವರು ಮತ್ತು ಪೋಷಕರಿಗೆ ಸಮಸ್ಯೆಯಾಗಿಲ್ಲ. ಇದು ಹೊರನವರ ಪ್ರಶ್ನೆಯಷ್ಟೇ” ಎಂದು ಮಾಹಿತಿ ನೀಡಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿನಿ ಅಟೂಫಾ ಪ್ರತಿಕ್ರಿಯಿಸಿದ್ದು, “ಪ್ರತಿಭಟನಾಕಾರರು ಹೊರಗಿನವರು. ತಮ್ಮ ಗುರುತನ್ನು ಮುಚ್ಚಿಕೊಳ್ಳಲು ಬುರ್ಖಾವನ್ನು ಧರಿಸಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಬುರ್ಖಾ ಧರಿಸಿದ್ದ ಹಲವಾರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ ಎಂದು ‘ನ್ಯೂಸ್‌ಲಾಂಡ್ರಿ’ ತಿಳಿಸಿದೆ.

“ಈಗ ಯಾವುದೇ ವಿವಾದವಿಲ್ಲ” ಎಂದು ಕಾಲೇಜಿನ ಮುಖ್ಯ ಅಧಿಕಾರಿ ಎಪಿ ಸಿಂಗ್ ಹೇಳಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಬುರ್ಖಾವನ್ನು ಪ್ರವೇಶದ್ವಾರದಲ್ಲಿಯೇ ತೆಗೆಯುವಂತೆ ಹೇಳುವುದರ ಬಗ್ಗೆ ತಪ್ಪು ತಿಳಿವಳಿಕೆ ರವಾನೆಯಾಗಿದೆ. ಈ ಸುದ್ದಿ ಎಲ್ಲೆಡೆ ಪ್ರಸಾರವಾಗಿದೆ. ಇದಕ್ಕಾಗಿ ಬುರ್ಕಾ ತೆಗೆಯುವುದಕ್ಕಾಗಿಯೇ ಕೊಠಡಿಯನ್ನು ನೀಡಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಸುಮಾರು ಆರು ತಿಂಗಳ ಹಿಂದೆ ಪ್ರೊಫೆಸರ್ ಎ.ಯು.ಖಾನ್ ಅವರ ಮೇಲೆ ಕಾಲೇಜಿನ ಪ್ರವೇಶದ್ವಾರದಲ್ಲಿ ಹೊರಗಿನ ವ್ಯಕ್ತಿಗಳು  ಹಲ್ಲೆ ನಡೆಸಿದ ನಂತರ ಸಮವಸ್ತ್ರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕಾಲೇಜು ನಿರ್ಧರಿಸಿತು” ಎಂದು ವಿವರಿಸಿದ್ದಾರೆ.

“ನಮಗೆ ಬುರ್ಖಾದಿಂದ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರು ಕಾಲೇಜಿಗೆ ಅದನ್ನು ಧರಿಸಿ, ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ತೆಗೆದಿಟ್ಟು ತಮ್ಮ ಡ್ರೆಸ್‌ನಲ್ಲಿ ಪ್ರವೇಶಿಸಿದರೆ ಯಾರಿಗೆ ತೊಂದರೆ? ಜನವರಿ 1 ರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊರಗಿನಿಂದ ಬಂದ ಕೆಲವು ಯುವಕರು ಇದರ ವಿರುದ್ಧ ಪ್ರತಿಭಟಿಸಿದ್ದಾರೆ. ಫೋಟೋಗಳನ್ನು ಕ್ಲಿಕ್ ಮಾಡಿ, ಅದನ್ನು ರಾಜಕೀಯಗೊಳಿಸಿದ್ದಾರೆ. ಸಮವಸ್ತ್ರವು ಹುಡುಗಿಯರು ಮತ್ತು ಹುಡುಗರಿಬ್ಬರಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

ಕಾಲೇಜು ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕ ಸತ್ಯವ್ರತ್ ಸಿಂಗ್ ರಾವತ್ ಅವರು ಪ್ರತಿಕ್ರಿಯಿಸಿ, “ಸಮವಸ್ತ್ರವು ನೀತಿ ಸಂಹಿತೆಯ ಭಾಗವಾಗಿದೆ. ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಈ ಕುರಿತು ಸಹಿ ಹಾಕಿರುತ್ತಾರೆ. ಕಾಲೇಜಿನಲ್ಲಿ 12,000 ವಿದ್ಯಾರ್ಥಿಗಳಿದ್ದಾರೆ. ಹೆಚ್ಚುತ್ತಿರುವ ಗೂಂಡಾಗಿರಿ ಮತ್ತು ಹೊರಗಿನವರ ಉಪಟಳವನ್ನು ತಡೆಯಲು ಕ್ರಮ ಜರುಗಿಸಲಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಕಾರರು ಕಾಲೇಜು ವಿದ್ಯಾರ್ಥಿಗಳಲ್ಲ. ನಮಗೆ ಯಾರೊಂದಿಗೂ ಸಮಸ್ಯೆ ಇಲ್ಲ, ಅವರು ಸ್ಕಾರ್ಫ್ ಅಥವಾ ಹಿಜಾಬ್‌ ಧರಿಸಬಹುದು. ಆದರೆ ಸಮವಸ್ತ್ರ ಕಡ್ಡಾಯವಾಗಿದೆ. ಬದಲಾಯಿಸುವ ಕೋಣೆಯಲ್ಲಿ ಬುರ್ಖಾವನ್ನು ತೆಗೆಯಬೇಕು. ಅಂತಿಮವಾಗಿ, ಸಮವಸ್ತ್ರವನ್ನು ಧರಿಸಲು ಇಷ್ಟಪಡದವರೊಂದಿಗೆ ತಕರಾರುಗಳಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕ್ರಮವು ಕಾನೂನುಬದ್ಧವಾಗಿದೆಯೇ?

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, “ಡ್ರೆಸ್ ಕೋಡ್ ಅನ್ನು ಜಾರಿಗೊಳಿಸುವ ಅಧಿಕಾರವು ಪ್ರಾಂಶುಪಾಲರಿಗೆ ಇರುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಎಂ.ಕಾಮ್ ವಿದ್ಯಾರ್ಥಿನಿ ಮೆಹಕ್ ಅನ್ಸಾರಿ ಮಾತನಾಡಿ, “ಬಟ್ಟೆ ಬದಲಾಯಿಸುವ ಕೊಠಡಿ ಇದ್ದಾಗ ಬುರ್ಖಾ ತೆಗೆದರೆ ಏನು ತೊಂದರೆ? ರಸ್ತೆಯಲ್ಲಿ ಬುರ್ಖಾ ತೆಗೆಯುವಂತಾಗಿದೆ ಎಂಬುದು ಸುಳ್ಳು” ಎಂದು ಹೇಳಿದ್ದಾರೆ.

ಮತ್ತೋರ್ವ ವಿದ್ಯಾರ್ಥಿ ಮಧು ಮನ್ಶಾ ಮಾತನಾಡಿ, “ಈ ಹಿಂದೆ ಗುರುತಿನ ಚೀಟಿ ತಪಾಸಣೆ ಇಲ್ಲದ ಕಾರಣ ಯಾರಾದರೂ ಕಾಲೇಜಿಗೆ ಪ್ರವೇಶಿಸುತ್ತಿದ್ದರು. ಆದರೆ ಈಗ ಗುರುತಿನ ಚೀಟಿಯನ್ನೂ ಪರಿಶೀಲಿಸಲಾಗಿದೆ. ಈಗ ಗುರುತಿನ ಚೀಟಿ ಮತ್ತು ಸಮವಸ್ತ್ರ ಹೊಂದಿರುವವರು ಮಾತ್ರ ಪ್ರವೇಶಿಸಬಹುದು” ಎಂದಿದ್ದಾರೆ.

ಕಾಲೇಜಿನಲ್ಲಿ ಡಿಫೆನ್ಸ್‌ ಸ್ಟಡೀಸ್ ಕಲಿಸುವ ಪ್ರೊಫೆಸರ್ ಆನಂದ್ ಕುಮಾರ್, “ಮಾಧ್ಯಮದ ಒಂದು ವಿಭಾಗವು ದಾರಿ ತಪ್ಪಿಸುವ ವರದಿ ಮಾಡುತ್ತಿದೆ. ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಆದರೆ ಅವರಿಗೆ ಹಿಜಾಬ್ ಮತ್ತು ಬುರ್ಖಾ ನಡುವಿನ ವ್ಯತ್ಯಾಸ ತಿಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೊತ್ವಾಲಿ ಎಸ್‌ಎಚ್‌ಒ ವಿಪ್ಲವ್ ಶರ್ಮಾ ಮಾತನಾಡಿ, “ಕಾಲೇಜಿನಲ್ಲಿ ಡ್ರೆಸ್ ಕೋಡ್ ಬಹಳ ಹಿಂದಿನಿಂದಲೂ ಇದೆ. ಅಂತಹದ್ದೇನೂ ಇಲ್ಲದಿರುವಾಗ ಬುರ್ಖಾ ಸಮಸ್ಯೆ ಎಂದು ಮಾಧ್ಯಮಗಳು ತಪ್ಪುದಾರಿಗೆಳೆಯುವ ಸುದ್ದಿಗಳನ್ನು ನೀಡುತ್ತಿವೆ” ಎಂದು ಟೀಕಿಸಿದ್ದಾರೆ.

ವರದಿ ಕೃಪೆ: ನ್ಯೂಸ್‌ ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...