Homeಮುಖಪುಟಯುಪಿ ಉಪಚುನಾವಣೆ | ಎಸ್‌ಪಿ ಅಭ್ಯರ್ಥಿಗಳನ್ನು ಹೆಸರಿಸಿದ ನಂತರ ಕೂಡಾ ಕಾಂಗ್ರೆಸ್‌ನಲ್ಲಿ 'ಮೈತ್ರಿ ಭರವಸೆ'!

ಯುಪಿ ಉಪಚುನಾವಣೆ | ಎಸ್‌ಪಿ ಅಭ್ಯರ್ಥಿಗಳನ್ನು ಹೆಸರಿಸಿದ ನಂತರ ಕೂಡಾ ಕಾಂಗ್ರೆಸ್‌ನಲ್ಲಿ ‘ಮೈತ್ರಿ ಭರವಸೆ’!

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ 10 ವಿಧಾನಸಭಾ ಸ್ಥಾನಗಳ ಉಪ ಚುನಾವಣೆಗೆ 6 ಕ್ಷೇತ್ರಗಳಿಗೆ ಸಮಾಜವಾದಿ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ. ಅದಾಗಿ ಕೆಲವೇ ದಿನಗಳಲ್ಲಿ ಸಮಾಜವಾದಿ ಪಕ್ಷದೊಂದಿಗೆ ಟಿಕೆಟ್ ಹಂಚಿಕೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಮೈತ್ರಿಯ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ನಾಯಕರು ಭಾನುವಾರ ಹೇಳಿದ್ದಾರೆ. ಯುಪಿ ಉಪಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ನಂತರ ಎಸ್‌ಪಿ ಉತ್ತರ ಪ್ರದೇಶದ 10 ವಿಧಾನಸಭಾ ಸ್ಥಾನಗಳ ಪೈಕಿ ಆರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಚುನಾವಣೆಯ ವೇಳಾಪಟ್ಟಿ ಇನ್ನಷ್ಟೆ ಪ್ರಕಟವಾಗಬೇಕಿದೆ. ಯುಪಿ ಉಪಚುನಾವಣೆ

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ಅವಿನಾಶ್ ಪಾಂಡೆ ಮಾತನಾಡುತ್ತಾ, “ಫಲಿತಾಂಶಗಳು ನಮ್ಮ ನಿರೀಕ್ಷೆಗಳನ್ನು ಪೂರೈಸದಿದ್ದರೆ, ನಮ್ಮ ಕಾರ್ಯಕರ್ತರು ಮತ್ತು ನಾಯಕರಲ್ಲಿ ನಿರಾಶೆ ಉಂಟಾಗುವುದು ಸಹಜ. ಆದರೆ, ನಾವು ಯುಪಿಯಲ್ಲಿ ನಮ್ಮ ಉದ್ದೇಶಗಳಿಗೆ ಬದ್ಧರಾಗಿದ್ದೇವೆ. ಜಂಗಲ್ ರಾಜ್ ಯುಗ ಕೊನೆಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸಿದ್ಧಾರ್ಥ ವಿಹಾರ ಟ್ರಸ್ಟ್‌’ಗೆ ಸರ್ಕಾರ ಮಂಜೂರು ಮಾಡಿದ್ದ ಭೂಮಿ ವಾಪಸ್ ನೀಡಿದ ಮಲ್ಲಿಕಾರ್ಜುನ ಖರ್ಗೆ

ಹರಿಯಾಣದಲ್ಲಿನ ಕಾಂಗ್ರೆಸ್ ಸೋಲು ರಾಜ್ಯದ ಆರು ಸ್ಥಾನಗಳಿಗೆ ಸಮಾಜವಾದಿ ಪಕ್ಷ ಅಭ್ಯರ್ಥಿಗಳನ್ನು ಘೋಷಿಸುವಂತೆ ಮಾಡಿದೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ಹೇಳಿದರು.

ಹರಿಯಾಣದ ಹಿನ್ನಡೆಯ ಹೊರತಾಗಿಯೂ, ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ ಮತ್ತು ಸಮಯೋಚಿತ ಸಂವಹನದ ಮೂಲಕ ಪರಿಹಾರಗಳನ್ನು ಕಂಡುಕೊಳ್ಳಲಾಗುವುದು ಎಂದು ಪಾಂಡೆ ಒತ್ತಿ ಹೇಳಿದ್ದಾರೆ. “ಇದು ಪ್ರಮುಖ ವಿಷಯವಲ್ಲ. ಮುಂದೆ ಇನ್ನೂ ಸಾಧ್ಯತೆಗಳಿವೆ,” ಅವರು ಪ್ರತಿಪಾದಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಎಸ್‌ಪಿ ಜೊತೆ ಮೈತ್ರಿ ಮಾಡಿಕೊಂಡು ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಎಸ್‌ಪಿ 37 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 6 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. 2027 ರ ಯುಪಿ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ತನ್ನ ತಂತ್ರಗಳನ್ನು ಪರೀಕ್ಷಿಸಲು ಮುಂಬರುವ ಉಪಚುನಾವಣೆಗೆ ಉತ್ಸುಕವಾಗಿದೆ.

ಇದನ್ನೂ ಓದಿ: ಹಿಂದೂ ಸಮಾಜ ದಲಿತರು, ದುರ್ಬಲ ವರ್ಗಗಳೊಂದಿಗೆ ಒಳಗೊಳ್ಳಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

ರಾಜ್ಯಾಧ್ಯಕ್ಷ ಅಜಯ್ ರೈ ಕೂಡ ಕಾಂಗ್ರೆಸ್ ಲಭ್ಯವಿರುವ ಹತ್ತು ಸ್ಥಾನಗಳ ಪೈಕಿ ಐದರಲ್ಲಿ ಸ್ಪರ್ಧಿಸುವುದಾಗಿ ಪ್ರಸ್ತಾಪಿಸಿದರು. ಆದಾಗ್ಯೂ, ಹರಿಯಾಣದಲ್ಲಿನ ಇತ್ತೀಚಿನ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಕಣ್ಣಿಟ್ಟಿರುವ ಎರಡು ಕ್ಷೇತ್ರಗಳು ಸೇರಿದಂತೆ ಆರು ಸ್ಥಾನಗಳ ಮೇಲೆ ಹಕ್ಕು ಸಾಧಿಸಲು ಎಸ್‌ಪಿಯನ್ನು ಪ್ರೇರೇಪಿಸಿತು.

ಬುಧವಾರ ಸಮಾಜವಾದಿ ಪಕ್ಷವು ಕರ್ಹಾಲ್ (ಮೈನ್‌ಪುರಿ), ಸಿಸಾಮಾವು (ಕಾನ್ಪುರ್ ನಗರ), ಮಿಲ್ಕಿಪುರ (ಅಯೋಧ್ಯೆ), ಕತೇಹಾರಿ (ಅಂಬೇಡ್ಕರ್‌ನಗರ), ಫುಲ್‌ಪುರ್ (ಪ್ರಯಾಗ್‌ರಾಜ್), ಮತ್ತು ಮಜವಾನ್ (ಮಿರ್ಜಾಪುರ) ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದೆ. ವಿಶೇಷವೆಂದರೆ ಸಮಾಜವಾದಿ ಪಕ್ಷವು ಟಿಕೆಟ್ ಘೋಷಿಸಿದ ಫುಲ್ಪುರ್ ಮತ್ತು ಮಜವಾನ್ ಕ್ಷೇತ್ರಗಳು ಕಾಂಗ್ರೆಸ್ ಸ್ಪರ್ಧಿಸಲು ಬಯಸಿದ ಐದು ಸ್ಥಾನಗಳಲ್ಲಿ ಸೇರಿದ ಎರಡು ಕ್ಷೇತ್ರಗಳಾಗಿವೆ.

ಕುಂದರ್ಕಿ, ಮೀರಾಪುರ, ಗಾಜಿಯಾಬಾದ್ ಮತ್ತು ಖೇರ್ ಸ್ಥಾನಗಳಿಗೆ ಸಮಾಜವಾದಿ ಪಕ್ಷ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

2022ರಲ್ಲಿ ಬಿಜೆಪಿಗೆ ಹಿನ್ನಡೆಯಾದ ಐದು ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪ್ರಸ್ತಾಪಿಸಿದೆ. ಆದರೆ ಸಮಾಜವಾದಿ ಪಕ್ಷ ಈಗ ಎರಡು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ ಎಂದು ರಾಯ್ ಹೇಳಿದ್ದಾರೆ. ರಾಯ್ ಮತ್ತು ಇತರ ಕಾಂಗ್ರೆಸ್ ನಾಯಕರು ಎಸ್‌ಪಿ ಜೊತೆಗಿನ ಮೈತ್ರಿಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡಾ ಈ ಭಾವನೆಯನ್ನು ವ್ಯಕ್ತಪಡಿಸಿದ್ದು, ಮೈತ್ರಿ ಅಖಂಡವಾಗಿಯೇ ಇರುತ್ತದೆ ಎಂದು ದೃಢಪಡಿಸಿದ್ದಾರೆ.

ವಿಡಿಯೊ ನೋಡಿ: ದಸಂಸ ಹುಟ್ಟಿದ್ದೇ ಒಂದು ಸಾಂಸ್ಕೃತಿಕ ಚಳವಳಿಯಾಗಿ; ಸಂದರ್ಭ ಐಕ್ಯತೆಗೆ ಕರೆಕೊಟ್ಟಿದೆ ಇಂದೂಧರ ಹೊನ್ನಾಪುರ ಅವರ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...