Homeಮುಖಪುಟಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

ಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಮಿಲ್ಕಿಪುರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಚಂದ್ರಭಾನು ಪಾಸ್ವಾನ್ ಅವರು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಜಿತ್ ಪ್ರಸಾದ್ ಅವರನ್ನು 65,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಅದಗ್ಯೂ, ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಎಸ್‌ಪಿ ಆರೋಪಿಸಿದೆ. ಯುಪಿ ಉಪ ಚುನಾವಣೆ

ಮಿಲ್ಕಿಪುರ ಕ್ಷೇತ್ರದ ಉಪ ಚುನಾವಣೆಯನ್ನು ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿ ಪರಿಗಣಿಸಿತ್ತು. ಚುನಾವಣೆಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸಿದ್ದರು. ಮಿಲ್ಕಿಪುರ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಿಜೆಪಿ ಎಂಟು ವರ್ಷಗಳ ಅಂತರವನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಾಸ್ವಾನ್ ಅವರು ತನ್ನ ಗೆಲುವಿಗೆ ಶನಿವಾರ ಬಿಜೆಪಿಗೆ ಕೃತಜ್ಞತೆ ಸಲ್ಲಿಸಿದ್ದು, “ಮೋದಿ ಅವರು ಮತ್ತು ಯೋಗಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಮತದಾರರ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅಪಾರ ಗೌರವ ಮತ್ತು ಬೆಂಬಲ ಸಿಕ್ಕಿದೆ.” ಎಂದು ಹೇಳಿದ್ದಾರೆ. ಯುಪಿ ಉಪ ಚುನಾವಣೆ

ಅಯೋಧ್ಯೆ ಮತ್ತು ಮಿಲ್ಕಿಪುರದ ಜನರು ಅಭಿವೃದ್ಧಿ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಒ.ಪಿ. ರಾಜ್‌ಭರ್ ಹೇಳಿದ್ದಾರೆ. “ಎನ್‌ಡಿಎ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲ್ಲುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಸಾರ್ವಜನಿಕರು ಅಭಿವೃದ್ಧಿಯನ್ನು ಬಯಸುತ್ತಾರೆ ಮತ್ತು ಅವರು ಯೋಗಿ ಅವರ ಕೆಲಸದಿಂದ ಸಂತೋಷಪಟ್ಟಿದ್ದಾರೆ” ಎಂದು ರಾಜ್‌ಭರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

2024ರಲ್ಲಿ ಲೋಕಸಭೆಗೆ ಆಯ್ಕೆಯಾದ ಕಾರಣಕ್ಕೆ ಎಸ್‌ಪಿಯ ಅವಧೇಶ್ ಪ್ರಸಾದ್ ಕ್ಷೇತ್ರವನ್ನು ತೊರೆದಿದ್ದರು, ಹಾಗಾಗಿ ಮಿಲ್ಕಿಪುರ ಉಪಚುನಾವಣೆ ನಡೆದಿತ್ತು. ಫೈಜಾಬಾದ್ ಕ್ಷೇತ್ರದಲ್ಲಿ ಅವಧೇಶ್ ಪ್ರಸಾದ್ ಅವರು ಎರಡು ಬಾರಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದರು. ಎಸ್‌ಪಿಯ ಉಪ ಚುನಾವಣೆ ಅಭ್ಯರ್ಥಿ ಅಜಿತ್ ಪ್ರಸಾದ್ ಅವರು ಅವದೇಶ್ ಪ್ರಸಾದ್‌ ಮಗ.

ಮತ ಎಣಿಕೆಯ ಸಮಯದಲ್ಲಿ, ಎಸ್‌ಪಿ ಸಂಸದ ಅವಧೇಶ್ ಪ್ರಸಾದ್ ಬಿಜೆಪಿಯನ್ನು “ಅಪ್ರಾಮಾಣಿಕ” ಪಕ್ಷ ಎಂದು ಆರೋಪಿಸಿದ್ದು, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯ ಗೆಲುವು ನಕಲಿ ಎಂದು ಕರೆದಿದ್ದಾರೆ.

ಕ್ಷೇತ್ರದ ಉಪಚುನಾವಣೆಯ ಮತದಾನ ಬುಧವಾರ ನಡೆದಿದ್ದು, ಒಟ್ಟು 3.70 ಲಕ್ಷ ಮತದಾರರಲ್ಲಿ 65% ಕ್ಕೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಿದ್ದರು. ಚುನಾವಣಾ ಆಯೋಗದ (EC) ಪ್ರಕಾರ, ಮತದಾನ ಪೂರ್ಣಗೊಳ್ಳುವವರೆಗೆ ಶೇ. 65.35 ರಷ್ಟು ಮತಗಳು ಚಲಾವಣೆಯಾಗಿವೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಶೇ. 60.23 ರಷ್ಟು ಮತದಾನ ದಾಖಲಾಗಿತ್ತು.

ಮತದಾನದ ದಿನ ಕೂಡಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಡಿಯೋ ಕ್ಲಿಪ್ ಅನ್ನು ಹಂಚಿಕೊಂಡು, ಇದು ಆಡಳಿತಾರೂಢ ಬಿಜೆಪಿಗೆ ಸಹಾಯ ಮಾಡಲು ಅದರ ಅಧ್ಯಕ್ಷರು “ನಕಲಿ ಮತದಾನ”ದ “ಗುರಿ”ಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸುತ್ತದೆ ಎಂದು ಹೇಳಿಕೊಂಡಿದ್ದರು.

ಇದನ್ನೂಓದಿ:  ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...