Homeಮುಖಪುಟಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

ಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಮಿಲ್ಕಿಪುರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಚಂದ್ರಭಾನು ಪಾಸ್ವಾನ್ ಅವರು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಜಿತ್ ಪ್ರಸಾದ್ ಅವರನ್ನು 65,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಅದಗ್ಯೂ, ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಎಸ್‌ಪಿ ಆರೋಪಿಸಿದೆ. ಯುಪಿ ಉಪ ಚುನಾವಣೆ

ಮಿಲ್ಕಿಪುರ ಕ್ಷೇತ್ರದ ಉಪ ಚುನಾವಣೆಯನ್ನು ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿ ಪರಿಗಣಿಸಿತ್ತು. ಚುನಾವಣೆಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸಿದ್ದರು. ಮಿಲ್ಕಿಪುರ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಿಜೆಪಿ ಎಂಟು ವರ್ಷಗಳ ಅಂತರವನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಾಸ್ವಾನ್ ಅವರು ತನ್ನ ಗೆಲುವಿಗೆ ಶನಿವಾರ ಬಿಜೆಪಿಗೆ ಕೃತಜ್ಞತೆ ಸಲ್ಲಿಸಿದ್ದು, “ಮೋದಿ ಅವರು ಮತ್ತು ಯೋಗಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಮತದಾರರ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅಪಾರ ಗೌರವ ಮತ್ತು ಬೆಂಬಲ ಸಿಕ್ಕಿದೆ.” ಎಂದು ಹೇಳಿದ್ದಾರೆ. ಯುಪಿ ಉಪ ಚುನಾವಣೆ

ಅಯೋಧ್ಯೆ ಮತ್ತು ಮಿಲ್ಕಿಪುರದ ಜನರು ಅಭಿವೃದ್ಧಿ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಒ.ಪಿ. ರಾಜ್‌ಭರ್ ಹೇಳಿದ್ದಾರೆ. “ಎನ್‌ಡಿಎ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲ್ಲುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಸಾರ್ವಜನಿಕರು ಅಭಿವೃದ್ಧಿಯನ್ನು ಬಯಸುತ್ತಾರೆ ಮತ್ತು ಅವರು ಯೋಗಿ ಅವರ ಕೆಲಸದಿಂದ ಸಂತೋಷಪಟ್ಟಿದ್ದಾರೆ” ಎಂದು ರಾಜ್‌ಭರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

2024ರಲ್ಲಿ ಲೋಕಸಭೆಗೆ ಆಯ್ಕೆಯಾದ ಕಾರಣಕ್ಕೆ ಎಸ್‌ಪಿಯ ಅವಧೇಶ್ ಪ್ರಸಾದ್ ಕ್ಷೇತ್ರವನ್ನು ತೊರೆದಿದ್ದರು, ಹಾಗಾಗಿ ಮಿಲ್ಕಿಪುರ ಉಪಚುನಾವಣೆ ನಡೆದಿತ್ತು. ಫೈಜಾಬಾದ್ ಕ್ಷೇತ್ರದಲ್ಲಿ ಅವಧೇಶ್ ಪ್ರಸಾದ್ ಅವರು ಎರಡು ಬಾರಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದರು. ಎಸ್‌ಪಿಯ ಉಪ ಚುನಾವಣೆ ಅಭ್ಯರ್ಥಿ ಅಜಿತ್ ಪ್ರಸಾದ್ ಅವರು ಅವದೇಶ್ ಪ್ರಸಾದ್‌ ಮಗ.

ಮತ ಎಣಿಕೆಯ ಸಮಯದಲ್ಲಿ, ಎಸ್‌ಪಿ ಸಂಸದ ಅವಧೇಶ್ ಪ್ರಸಾದ್ ಬಿಜೆಪಿಯನ್ನು “ಅಪ್ರಾಮಾಣಿಕ” ಪಕ್ಷ ಎಂದು ಆರೋಪಿಸಿದ್ದು, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯ ಗೆಲುವು ನಕಲಿ ಎಂದು ಕರೆದಿದ್ದಾರೆ.

ಕ್ಷೇತ್ರದ ಉಪಚುನಾವಣೆಯ ಮತದಾನ ಬುಧವಾರ ನಡೆದಿದ್ದು, ಒಟ್ಟು 3.70 ಲಕ್ಷ ಮತದಾರರಲ್ಲಿ 65% ಕ್ಕೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಿದ್ದರು. ಚುನಾವಣಾ ಆಯೋಗದ (EC) ಪ್ರಕಾರ, ಮತದಾನ ಪೂರ್ಣಗೊಳ್ಳುವವರೆಗೆ ಶೇ. 65.35 ರಷ್ಟು ಮತಗಳು ಚಲಾವಣೆಯಾಗಿವೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಶೇ. 60.23 ರಷ್ಟು ಮತದಾನ ದಾಖಲಾಗಿತ್ತು.

ಮತದಾನದ ದಿನ ಕೂಡಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಡಿಯೋ ಕ್ಲಿಪ್ ಅನ್ನು ಹಂಚಿಕೊಂಡು, ಇದು ಆಡಳಿತಾರೂಢ ಬಿಜೆಪಿಗೆ ಸಹಾಯ ಮಾಡಲು ಅದರ ಅಧ್ಯಕ್ಷರು “ನಕಲಿ ಮತದಾನ”ದ “ಗುರಿ”ಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸುತ್ತದೆ ಎಂದು ಹೇಳಿಕೊಂಡಿದ್ದರು.

ಇದನ್ನೂಓದಿ:  ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...