Homeಮುಖಪುಟಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

ಯುಪಿ ಉಪ ಚುನಾವಣೆ | ಬಿಜೆಪಿಗೆ ಭರ್ಜರಿ ಗೆಲುವು, ಅಕ್ರಮ ನಡೆದಿದೆ ಎಂದು ಸಮಾಜವಾದಿ ಪಕ್ಷ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಮಿಲ್ಕಿಪುರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದೆ. ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಚಂದ್ರಭಾನು ಪಾಸ್ವಾನ್ ಅವರು ಸಮಾಜವಾದಿ ಪಕ್ಷ (ಎಸ್‌ಪಿ)ದ ಅಜಿತ್ ಪ್ರಸಾದ್ ಅವರನ್ನು 65,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಅದಗ್ಯೂ, ಚುನಾವಣೆಯಲ್ಲಿ ವಂಚನೆ ನಡೆದಿದೆ ಎಂದು ಎಸ್‌ಪಿ ಆರೋಪಿಸಿದೆ. ಯುಪಿ ಉಪ ಚುನಾವಣೆ

ಮಿಲ್ಕಿಪುರ ಕ್ಷೇತ್ರದ ಉಪ ಚುನಾವಣೆಯನ್ನು ಸಮಾಜವಾದಿ ಪಕ್ಷ ಮತ್ತು ಬಿಜೆಪಿ ಪ್ರತಿಷ್ಠೆಯ ಕಣವಾಗಿ ಪರಿಗಣಿಸಿತ್ತು. ಚುನಾವಣೆಗಳನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೈಯಕ್ತಿಕವಾಗಿ ಮೇಲ್ವಿಚಾರಣೆ ನಡೆಸಿದ್ದರು. ಮಿಲ್ಕಿಪುರ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಿಜೆಪಿ ಎಂಟು ವರ್ಷಗಳ ಅಂತರವನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಾಸ್ವಾನ್ ಅವರು ತನ್ನ ಗೆಲುವಿಗೆ ಶನಿವಾರ ಬಿಜೆಪಿಗೆ ಕೃತಜ್ಞತೆ ಸಲ್ಲಿಸಿದ್ದು, “ಮೋದಿ ಅವರು ಮತ್ತು ಯೋಗಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಮತದಾರರ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅಪಾರ ಗೌರವ ಮತ್ತು ಬೆಂಬಲ ಸಿಕ್ಕಿದೆ.” ಎಂದು ಹೇಳಿದ್ದಾರೆ. ಯುಪಿ ಉಪ ಚುನಾವಣೆ

ಅಯೋಧ್ಯೆ ಮತ್ತು ಮಿಲ್ಕಿಪುರದ ಜನರು ಅಭಿವೃದ್ಧಿ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಒ.ಪಿ. ರಾಜ್‌ಭರ್ ಹೇಳಿದ್ದಾರೆ. “ಎನ್‌ಡಿಎ ಅಭ್ಯರ್ಥಿ ಭಾರಿ ಬಹುಮತದಿಂದ ಗೆಲ್ಲುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಸಾರ್ವಜನಿಕರು ಅಭಿವೃದ್ಧಿಯನ್ನು ಬಯಸುತ್ತಾರೆ ಮತ್ತು ಅವರು ಯೋಗಿ ಅವರ ಕೆಲಸದಿಂದ ಸಂತೋಷಪಟ್ಟಿದ್ದಾರೆ” ಎಂದು ರಾಜ್‌ಭರ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

2024ರಲ್ಲಿ ಲೋಕಸಭೆಗೆ ಆಯ್ಕೆಯಾದ ಕಾರಣಕ್ಕೆ ಎಸ್‌ಪಿಯ ಅವಧೇಶ್ ಪ್ರಸಾದ್ ಕ್ಷೇತ್ರವನ್ನು ತೊರೆದಿದ್ದರು, ಹಾಗಾಗಿ ಮಿಲ್ಕಿಪುರ ಉಪಚುನಾವಣೆ ನಡೆದಿತ್ತು. ಫೈಜಾಬಾದ್ ಕ್ಷೇತ್ರದಲ್ಲಿ ಅವಧೇಶ್ ಪ್ರಸಾದ್ ಅವರು ಎರಡು ಬಾರಿ ಬಿಜೆಪಿ ಸಂಸದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದರು. ಎಸ್‌ಪಿಯ ಉಪ ಚುನಾವಣೆ ಅಭ್ಯರ್ಥಿ ಅಜಿತ್ ಪ್ರಸಾದ್ ಅವರು ಅವದೇಶ್ ಪ್ರಸಾದ್‌ ಮಗ.

ಮತ ಎಣಿಕೆಯ ಸಮಯದಲ್ಲಿ, ಎಸ್‌ಪಿ ಸಂಸದ ಅವಧೇಶ್ ಪ್ರಸಾದ್ ಬಿಜೆಪಿಯನ್ನು “ಅಪ್ರಾಮಾಣಿಕ” ಪಕ್ಷ ಎಂದು ಆರೋಪಿಸಿದ್ದು, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯ ಗೆಲುವು ನಕಲಿ ಎಂದು ಕರೆದಿದ್ದಾರೆ.

ಕ್ಷೇತ್ರದ ಉಪಚುನಾವಣೆಯ ಮತದಾನ ಬುಧವಾರ ನಡೆದಿದ್ದು, ಒಟ್ಟು 3.70 ಲಕ್ಷ ಮತದಾರರಲ್ಲಿ 65% ಕ್ಕೂ ಹೆಚ್ಚು ಮತದಾರರು ತಮ್ಮ ಮತ ಚಲಾಯಿಸಿದ್ದರು. ಚುನಾವಣಾ ಆಯೋಗದ (EC) ಪ್ರಕಾರ, ಮತದಾನ ಪೂರ್ಣಗೊಳ್ಳುವವರೆಗೆ ಶೇ. 65.35 ರಷ್ಟು ಮತಗಳು ಚಲಾವಣೆಯಾಗಿವೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಶೇ. 60.23 ರಷ್ಟು ಮತದಾನ ದಾಖಲಾಗಿತ್ತು.

ಮತದಾನದ ದಿನ ಕೂಡಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಡಿಯೋ ಕ್ಲಿಪ್ ಅನ್ನು ಹಂಚಿಕೊಂಡು, ಇದು ಆಡಳಿತಾರೂಢ ಬಿಜೆಪಿಗೆ ಸಹಾಯ ಮಾಡಲು ಅದರ ಅಧ್ಯಕ್ಷರು “ನಕಲಿ ಮತದಾನ”ದ “ಗುರಿ”ಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ ಎಂದು ತೋರಿಸುತ್ತದೆ ಎಂದು ಹೇಳಿಕೊಂಡಿದ್ದರು.

ಇದನ್ನೂಓದಿ:  ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ಪ್ಯಾಲೆಸ್ತೀನ್ ಕುರಿತ ಭಾರತದ ದೀರ್ಘಕಾಲದ ನಿಲುವು ಬದಲಾಗಿಲ್ಲ : ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...