Homeರಾಷ್ಟ್ರೀಯಯುಪಿ: 400 ಜನರ ಮತಾಂತರಕ್ಕೆ ಒತ್ತಾಯ ಮಾಡಿದ್ದಾರೆಂದು 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಯುಪಿ: 400 ಜನರ ಮತಾಂತರಕ್ಕೆ ಒತ್ತಾಯ ಮಾಡಿದ್ದಾರೆಂದು 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಕೇವಲ ಒಂಬತ್ತು ಮಂದಿ ಬೇರೊಂದು ಊರಿಗೆ ಬಂದು, ದಾಂದಲೆ ನಡೆಸಿ 400 ಜನರನ್ನು ಬಲವಂತವಾಗಿ ಮತಾಂತರ ಮಾಡಲು ಸಾಧ್ಯವೆ ಎಂದು ಪ್ರಶ್ನಿಸಲಾಗಿದೆ

- Advertisement -
- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯ ಮಾಡಿದ್ದಾರೆ ಎಂದು ಆರೋಪಿಸಿ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹಿರಿಯ ಪೊಲೀಸ್ ಅಧೀಕ್ಷಕರನ್ನು (ಎಸ್‌ಎಸ್‌ಪಿ) ಸಂಪರ್ಕಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ಜನರು ದೂರಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದ ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ಘಟನೆ ನಡೆದಿದ್ದು, “ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳನ್ನು ತೆಗೆದುಹಾಕುವಂತೆ ಒತ್ತಾಯಿಸಲಾಯಿತು” ಎಂದು ಸಂತ್ರಸ್ತರು ಆರೋಪಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶುಕ್ರವಾರ ಬಿಜೆಪಿ ನಾಯಕನೊಂದಿಗೆ ಬ್ರಹ್ಮಪುತ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಜನರು, ಆರೋಪಿಗಳು ಧಾರ್ಮಿಕ ಮತಾಂತರಕ್ಕಾಗಿ ಹಣ ಮತ್ತು ಆಹಾರದ ಆಮಿಷ ಒಡ್ಡಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ದೇವತೆಗಳ ವಿಗ್ರಹಗಳು, ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ತೆಗೆದು ಕ್ರಿಶ್ಚಿಯನ್ ಧರ್ಮ ಸ್ವೀಕರಿಸುವಂತೆ ಗ್ರಾಮಸ್ಥರನ್ನು ಒತ್ತಾಯಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ‘ಇಂಡಿಗೋ’ ವಿಮಾನದಲ್ಲಿ ಬೆಂಕಿ!

“ನಮ್ಮ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲಾಯಿತು. ನಮ್ಮ ಆಧಾರ್ ಕಾರ್ಡ್‌ನಲ್ಲಿ ನಮ್ಮ ಹೆಸರನ್ನು ಬದಲಾಯಿಸುವಂತೆ ಕೇಳಲಾಯಿತು. ದೀಪಾವಳಿಯ ದಿನದಂದು ನಾವು ಪೂಜೆ ಮಾಡುತ್ತಿದ್ದಾಗ, ಆರೋಪಿಗಳು ನಮ್ಮ ಮನೆಗೆ ನುಗ್ಗಿ ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ನೀವು ನಿಮ್ಮ ಧರ್ಮವನ್ನು ಪರಿವರ್ತಿಸಿದ್ದರೂ ನೀವು ಯಾಕೆ ಹೀಗೆ ಮಾಡುತ್ತಿದ್ದೀರಿ? ಎಂದು ಅವರು ಕೇಳಿದ್ದಾರೆ. ನಾವು ಇದನ್ನು ವಿರೋಧಿಸಿದಾಗ ಅವರು ನಮಗೆ ಜೀವ ಬೆದರಿಕೆ ಹಾಕಿದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಎಫ್‌ಐಆರ್‌ನಲ್ಲಿ ಆರೋಪಿಗಳನ್ನು ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರಾಣಿ ಎಂದು ಗುರುತಿಸಲಾಗಿದೆ.

ಎಸ್ಪಿ ಪಿಯೂಷ್ ಸಿಂಗ್ ಮಾತನಾಡಿ,‘‘ಶುಕ್ರವಾರ ಕೆಲವರು ನಮ್ಮ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಿದ್ದು, ಇತರೆ ಧರ್ಮದವರು ಮಾಳಿನ್ ಗ್ರಾಮದ ಜನರ ಧರ್ಮವನ್ನು ಬಲವಂತವಾಗಿ ಮತಾಂತರ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು,“ಒಂಬತ್ತು ಜನರು ತಮ್ಮದಲ್ಲದ ಊರಿಗೆ ಬಂದು, ದಾಂದಲೆ ನಡೆಸಿ 400 ಜನರನ್ನು ಬಲವಂತವಾಗಿ ಮತಾಂತರ ಮಾಡಲು ಸಾಧ್ಯವೆ” ಎಂದು ಪ್ರಶ್ನಿಸಿದ್ದಾರೆ.

“ಅಷ್ಟಕ್ಕೂ ಧರ್ಮ ಎಂಬುವುದು ಮನಸ್ಸಿನಲ್ಲಿರುವ ನಂಬಿಕೆಯ ವಿಷಯವಾಗಿದೆ, ಹೀಗಿರುವಾಗ ಒಬ್ಬ ವ್ಯಕ್ತಿಯನ್ನು ಬಲವಂತವಾಗಿ ಮತಾಂತರ ಮಾಡಲು ಹೇಗೆ ಸಾಧ್ಯವಿದೆ?. ಅದರಲ್ಲೂ ನಾಲ್ನೂರು ಜನರೊಂದಿಗೆ ಒಂಬತ್ತು ಜನರು ಬಂದು ನೀವೆಲ್ಲಾ ಮತಾಂತರವಾಗಿ ಎಂದು ಒತ್ತಾಯ ಮಾಡಲು ಸಾಧ್ಯವೆ? ಇದು ಒಂದು ಷಡ್ಯಂತ್ರ” ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...