Homeಮುಖಪುಟಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

- Advertisement -
- Advertisement -

ಪ್ರಯಾಗ್‌ರಾಜ್ ಹಿಂಸಾಚಾರದ ಪ್ರಮುಖ ಆರೋಪಿಯ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಯೋಗಿ ಆದಿತ್ಯನಾಥ್‌ ಅವರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆ) ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

“ಯುಪಿ ಮುಖ್ಯಮಂತ್ರಿ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗುತ್ತಿದ್ದಾರೆ. ಅವರು ಯಾರನ್ನಾದರೂ ಅಪರಾಧಿ ಎಂದು ಘೋಷಿಸಿ, ಅವರ ಮನೆಗಳನ್ನು ಕೆಡವುತ್ತಾರೆಯೇ?” ಎಂದು ಗುಜರಾತ್‌ನ ಕಚ್‌ನಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಓವೈಸಿ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಯಾಗ್‌ರಾಜ್‌ನಲ್ಲಿ ಜೂನ್ 10 ರಂದು ನಡೆದ ಹಿಂಸಾಚಾರದ ಆರೋಪಿ ಜಾವೇದ್ ಮೊಹಮ್ಮದ್ ಅಲಿಯಾಸ್ ಪಂಪ್ ಅವರ ಮನೆಯನ್ನು ಭಾರೀ ಪೊಲೀಸ್ ನಿಯೋಜನೆಯ ನಡುವೆ ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಭಾನುವಾರ ನೆಲಸಮಗೊಳಿಸಿದೆ.

ಆರೋಪಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಮತ್ತು ಕಾರ್ಯಕರ್ತೆ ಅಫ್ರೀನ್ ಫಾತಿಮಾ ಅವರ ತಂದೆಯೂ ಹೌದು. ಕಳೆದ ವರ್ಷ ಸಿಎಎ ವಿರುದ್ಧದ ಪ್ರತಿಭಟನೆಯ ಭಾಗವಾಗಿದ್ದವರು ಫಾತಿಮಾ. ಇತ್ತೀಚಿನ ಹಿಂಸಾಚಾರದಲ್ಲಿ ಅಫ್ರಿನ್‌ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಆಕ್ಷೇಪಾರ್ಹ ಪೋಸ್ಟರ್‌ಗಳಿವೆ. ಧ್ವಂಸಕ್ಕೂ ಮುನ್ನ ಭಾನುವಾರ ಬೆಳಗ್ಗೆ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘12 ಬೋರ್’ ಅಕ್ರಮ ಪಿಸ್ತೂಲ್, ‘315 ಬೋರ್’ ಪಿಸ್ತೂಲ್ ಹಾಗೂ ಗೌರವಾನ್ವಿತ ನ್ಯಾಯಾಲಯದ ವಿರುದ್ಧ ಆಕ್ಷೇಪಾರ್ಹ ಅಭಿಪ್ರಾಯಗಳನ್ನು ತೋರಿಸುವ ಕೆಲವು ದಾಖಲೆಗಳನ್ನು ಪತ್ತೆಹಚ್ಚಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್‌ ಕುಮಾರ್ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮವಾಗಿ ಕಟ್ಟಡ ಕಟ್ಟಲಾಗಿದೆ ಎಂದು ಆರೋಪಿಸಿ ಅವರ ಮನೆಯ ಹೊರಗೆ ನೋಟಿಸ್ ಅಂಟಿಸಿದ ಬಳಿಕ ಕಟ್ಟಡ ಕೆಡವಲಾಯಿತು. ಕಟ್ಟಡ ನೆಲಸಮಗೊಳಿಸುವ ಆದೇಶವನ್ನು ಮೇ ತಿಂಗಳಲ್ಲಿಯೇ ಕಳುಹಿಸಲಾಗಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿತ್ತು.

“ಜೂನ್ 9ರೊಳಗೆ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸುವಂತೆ ಮೊಹಮ್ಮದ್ ಅವರಿಗೆ ತಿಳಿಸಲಾಯಿತು. ವಿಫಲವಾದರೆ ಜೂನ್ 12ರಂದು ಬೆಳಿಗ್ಗೆ 11 ಗಂಟೆಯೊಳಗೆ ಮನೆಯನ್ನು ಖಾಲಿ ಮಾಡುವಂತೆ ಅವರಿಗೆ ಸೂಚಿಸಲಾಗಿದೆ” ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

ಜಾವೇದ್ ಮೊಹಮ್ಮದ್ ಅವರ ವಕೀಲರು ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದು, ಪಿಡಿಎ ಪ್ರತಿಪಾದನೆಯನ್ನು ಅಲ್ಲಗಳೆದಿದ್ದಾರೆ. ಅಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ. ಮನೆಯು ಜಾವೇದ್‌ ಅವರ ಪತ್ನಿಯ ಹೆಸರಲ್ಲಿದ್ದು, ಅಕ್ರಮ ನಿರ್ಮಾಣದ ಬಗ್ಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರವಾದಿ ಮುಹಮ್ಮದ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದವು. ಆದರೆ ಪ್ರತಿಭಟನೆಗಳು ಹಿಂಸೆಗೆ ತಿರುಗಿದವು.

ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಿಂದ 300 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಬುಲ್ಡೋಸ್‌’ ರಾಜಕೀಯ ಮಾಡುತ್ತಿದ್ದಾರೆಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. UP ಸರ್ಕಾರ ಓವೈಸಿ ಪಾಲಿನ ಯಮ ಇದ್ದಂತೆ ,ಮಾತಾಡಿದರೆ ಹೆಣಬೀಳುತ್ತೇ, ಜೈ ಹಿಂದೂ ರಾಷ್ಟ್ರ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....