Homeಮುಖಪುಟಯುಪಿ ಸಿಎಂ ಆದಿತ್ಯನಾಥ್ ಭೇಟಿಗೆ ತೆರಳಿದ್ದ ವೈದ್ಯರಿಗೆ ಅವಕಾಶ ನಿರಾಕರಣೆ!

ಯುಪಿ ಸಿಎಂ ಆದಿತ್ಯನಾಥ್ ಭೇಟಿಗೆ ತೆರಳಿದ್ದ ವೈದ್ಯರಿಗೆ ಅವಕಾಶ ನಿರಾಕರಣೆ!

- Advertisement -
- Advertisement -

ಝಾನ್ಸಿಯಲ್ಲಿ ಭಾನುವಾರ ನಡೆದ ಪರಿಶೀಲನಾ ಸಭೆ ಸಂದರ್ಭದಲ್ಲಿ ಝಾನ್ಸಿ ವೈದ್ಯಕೀಯ ಕಾಲೇಜಿನ ವೈದ್ಯರು ಮುಖ್ಯಮಂತ್ರಿಗೆ ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಲು ಬಯಸಿದ್ದರು. ಇದರಲ್ಲಿ ಸಂಸ್ಥೆಯ ಕೇಂದ್ರ ಗ್ರಂಥಾಲಯವನ್ನು 24 ಗಂಟೆಗಳ ಕಾಲ ತೆರೆದಿಡಬೇಕು ಎಂಬ ಬೇಡಿಕೆಯೊಂದಿಗೆ ಹಲವು ಮನವಿಗಳನ್ನು ಮಾಡಲಾಗಿತ್ತು. ಆದರೆ ವೈದ್ಯರು ಸಿಎಂ ಅವರನ್ನು ಭೇಟಿಯಾಗದಂತೆ ತಡೆಯಲಾಯಿತು ಎಂದು ಆರೋಪಿಸಲಾಗಿದೆ.

ಜ್ಞಾಪಕ ಪತ್ರವನ್ನು ಸಲ್ಲಿಸಲು ಬಯಸಿದ ಕಿರಿಯ ವೈದ್ಯರು, ಸಿಎಂ ಅವರನ್ನು ಭೇಟಿಯಾಗುವ ಕುರಿತು ಮೊದಲೇ ಆಡಳಿತದ ಗಮನಕ್ಕೆ ತಂದಿರಲಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅಂದ್ರಾ ವಂಸಿ ಹೇಳಿದ್ದಾರೆ.
ಮುಖ್ಯಮಂತ್ರಿಯವರ ಕಾರ್ಯಕ್ರಮದಲ್ಲಿ ಯಾವುದೇ ಅಡ್ಡಿ ಉಂಟಾಗದಂತೆ ಕ್ರಮ ಕೈಗೊಳ್ಳಲು ಹೀಗೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಕಿರಿಯ ವೈದ್ಯರಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ವಂಸಿ ಹೇಳಿದ್ದಾರೆ. ವೈದ್ಯಕೀಯ ಕಾಲೇಜಿನ ಜೂನಿಯರ್ ವೈದ್ಯರ ಸಂಘದ ಅಧ್ಯಕ್ಷ ಡಾ. ಹರ್ದೀಪ್ ತಮ್ಮ ಕೆಲವು ಸಹೋದ್ಯೋಗಿಗಳೊಂದಿಗೆ ಮೂರು ಅಂಶಗಳ ಜ್ಞಾಪಕ ಪತ್ರವನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಲು ಬಯಸಿದ್ದರು.

ತಮ್ಮ ಜ್ಞಾಪಕ ಪತ್ರದಲ್ಲಿ, ಕಾಲೇಜಿನ ಕೇಂದ್ರ ಗ್ರಂಥಾಲಯವು 24 ಗಂಟೆಗಳ ಕಾಲ ತೆರೆದಿರಬೇಕು. ಸಾಕಷ್ಟು ಔಷಧಿಗಳನ್ನು ಲಭ್ಯಗೊಳಿಸಬೇಕು ಮತ್ತು ಆಡಳಿತ ಅಧಿಕಾರಿಗಳು ಅವರೊಂದಿಗೆ ಸಭ್ಯವಾಗಿ ವರ್ತಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದರು.

ತರುವಾಯ, ಕಿರಿಯ ವೈದ್ಯರೊಂದಿಗೆ ಡಿಎಂ ಮತ್ತು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಸಭೆ ನಡೆಸಿ, ಅವರ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಝಾನ್ಸಿಯಲ್ಲಿ ನಡೆದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ಯುಪಿ ಸರ್ಕಾರದ ಮಾದರಿ ಎಂದರೆ ಅಗತ್ಯವಿದ್ದಾಗ ಗೈರುಹಾಜರಾಗಿರುವುದು. ಸುಳ್ಳು ಪ್ರಚಾರದಲ್ಲಿ ತೊಡಗುವುದು. ಸಾರ್ವಜನಿಕ ಸೇವೆಯಲ್ಲಿರುವವರನ್ನು ಬಂಧಿಸುವುದು” ಎಂದಿದ್ದಾರೆ.

“ಪೊಲೀಸರು ಕೆಲವು  ವೈದ್ಯರನ್ನು ಬಂಧಿಸಿದರು, ಯಾಕೆಂದರೆ ಅವರು ತಮ್ಮ ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಯ ಮುಂದೆ ಮಂಡಿಸಲು ಹೋಗಿದ್ದರು. ಈ ಬೇಡಿಕೆಗಳು ತಪ್ಪೇ? ಮುಖ್ಯಮಂತ್ರಿ ಅವರ ಬೇಡಿಕೆಗಳನ್ನು ಆಲಿಸಬೇಕಿತ್ತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ನಾಯಕರ ಗೃಹಬಂಧನಕ್ಕೆ ಅವಕಾಶ: ಹೈಕೋರ್ಟ್ ಆದೇಶ ವಿರೋಧಿಸಿ ಸುಪ್ರೀಂಗೆ ಹೋದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...