Homeಮುಖಪುಟಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಇಬ್ಬರು ಪ್ರಾಧ್ಯಾಪಕರು ಅಮಾನತು

ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದಿದ್ದ ವಿದ್ಯಾರ್ಥಿಗಳಿಗೆ 50% ಅಂಕ: ಇಬ್ಬರು ಪ್ರಾಧ್ಯಾಪಕರು ಅಮಾನತು

- Advertisement -
- Advertisement -

ನಾಲ್ವರು ವಿದ್ಯಾರ್ಥಿಗಳು ಡಿ ಫಾರ್ಮಾ ಕೋರ್ಸ್‌ನ ಪರೀಕ್ಷೆಯ ಉತ್ತರಪತ್ರಿಕೆಯಲ್ಲಿ ‘ಜೈ ಶ್ರೀ ರಾಮ್’ ಮತ್ತು ಭಾರತೀಯ ತಂಡದ ಕ್ರಿಕೆಟಿಗರ ಹೆಸರುಗಳನ್ನು ಬರೆದ ನಂತರ ಪರೀಕ್ಷೆಯಲ್ಲಿ ಶೇಕಡಾ 56ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ ಎಂದು RTI ಮಾಹಿತಿಯಿಂದ ಬಹಿರಂಗವಾದ ಬೆನ್ನಲ್ಲಿ ಸರ್ಕಾರಿ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.

ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ವಂದನಾ ಸಿಂಗ್ ಈ ಕುರಿತು ಮಾತನಾಡಿದ್ದು, ವಿಶ್ವವಿದ್ಯಾನಿಲಯದ ಪರೀಕ್ಷಾ ಸಮಿತಿಯು ಬುಧವಾರ ಈ ವಿಷಯದ ಬಗ್ಗೆ ಸಭೆ ನಡೆಸಿದೆ ಮತ್ತು ಇಬ್ಬರು ಶಿಕ್ಷಕರಾದ ಡಾ ಅಶುತೋಷ್ ಗುಪ್ತಾ ಮತ್ತು ಡಾ ವಿನಯ್ ವರ್ಮಾ ತಪ್ಪು ಮೌಲ್ಯಮಾಪನದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲು ಶಿಸ್ತು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದ್ದು, ಅಂತಿಮ ನಿರ್ಧಾರಕ್ಕಾಗಿ ಅದನ್ನು ಕಾರ್ಯಕಾರಿ ಮಂಡಳಿಯ ಮುಂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಡಿ ಫಾರ್ಮಾ ಕೋರ್ಸ್‌ನ ಮೊದಲ ಮತ್ತು ಎರಡನೇ ಸೆಮಿಸ್ಟರ್‌ನ ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತಪ್ಪು ಉತ್ತರಗಳನ್ನು ಬರೆದರೂ ಉತ್ತೀರ್ಣರಾದ ಬಗ್ಗೆ ತಿಳಿದ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ದಿವ್ಯಾಂಶು ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದಾಗ ವಿಷಯ ಬೆಳಕಿಗೆ ಬಂದಿದೆ.

ಡಿ.ಫಾರ್ಮಾ (ಡಿಪ್ಲೊಮಾ ಇನ್ ಫಾರ್ಮಸಿ) ಕೋರ್ಸ್‌ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳಲ್ಲಿ ಹಲವೆಡೆ ‘ಜೈ ಶ್ರೀ ರಾಮ್’ ಎಂಬ ಬರಹ ಮತ್ತು ಅನೇಕ ಪ್ರಮುಖ ಭಾರತೀಯ ಮತ್ತು ಅಂತರಾಷ್ಟ್ರೀಯ ಕ್ರಿಕೆಟಿಗರ ಹೆಸರು ಬರೆಯಲಾಗಿತ್ತು. ಈ ನಾಲ್ವರು ವಿದ್ಯಾರ್ಥಿಗಳು ಶೇಕಡಾ 50ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ. ಉತ್ತರ ಪುಸ್ತಕಗಳನ್ನು ಮರು ಮೌಲ್ಯಪನ ಮಾಡಿದಾಗ ನಾಲ್ಕು ವಿದ್ಯಾರ್ಥಿಗಳಿಗೆ ಶೂನ್ಯ ಅಂಕಗಳನ್ನು ಪಡೆದಿದ್ದಾರೆ.

ಆರ್‌ಟಿಐ ಮಾಹಿತಿ ಪಡೆದ ದಿವ್ಯಾಂಶು ಸಿಂಗ್, ವಿವಿಯ ಕುಲಪತಿಯಾಗಿರುವ ರಾಜ್ಯಪಾಲರಿಗೆ ಈ ಕುರಿತು  ವಿವರಗಳನ್ನು ಕಳುಹಿಸಿದ್ದು,  ಸಮಗ್ರ ತನಿಖೆಗೆ ಒತ್ತಾಯಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ರಾಜಭವನ ತನಿಖೆಗೆ ಆದೇಶಿಸಿತ್ತು. ತನಿಖೆಗೆ ವಿಶ್ವವಿದ್ಯಾಲಯದಿಂದ ಸಮಿತಿಯೊಂದನ್ನು ರಚಿಸಲಾಗಿತ್ತು. ಸಮಿತಿಯ ವರದಿಯನ್ನು ಆಧರಿಸಿ, ಸಂಬಂಧಪಟ್ಟ ಇಲಾಖೆಯ ಇಬ್ಬರು ಅಧ್ಯಾಪಕರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಇದನ್ನು ಓದಿ: ಹಾಸನದ ಅಶ್ಲೀಲ ವಿಡಿಯೋ ಪೆನ್‌ ಡ್ರೈವ್ ಪ್ರಕರಣ: ಎಸ್‌ಐಟಿ ತನಿಖೆಗೆ ರಾಜ್ಯ ಸರಕಾರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...