Homeಚಳವಳಿಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ...

ಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ…

- Advertisement -
- Advertisement -

ಎಲ್ಲೆಲ್ಲೂ ಸಿಎಎ ಎನ್‌ಆರ್‌ಸಿ ವಿರೋಧಿ ಹೋರಾಟಗಳು ಭುಗಿಲೆದ್ದಿವೆ. ಜನ ದಿನನಿತ್ಯ ಬೀದಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಮೇಲೆ ನೂರಾರು ಆರೋಪಗಳು ಕೇಳಿಬರುತ್ತಿವೆ. ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡುತ್ತಿದ್ದಾರೆ ಹಾಗಾಗಿ ಅವರನ್ನು ಜೈಲಿಗೆ ಹಾಕಬೇಕು, ಅವರನ್ನು ಥಳಿಸಬೇಕು, ಅವರ ಮೇಲೆ ಗುಂಡು ಹೊಡೆಯಬೇಕು, ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಆದರೆ ಉತ್ತರ ಪ್ರದೇಶದ ಪೊಲೀಸ್‌ ಅಜಯ್ ಕುಮಾರ್ ಎಂಬುವವರು ಮಾತ್ರ ಪ್ರತಿಭಟನಾನಿರತ ಈ ಮುಸ್ಲಿಂ ವ್ಯಕ್ತಿಯು ನನಗೆ ದೇವದೂತನಂತೆ ಕಂಡರು. ಹಿಂಸಾತ್ಮಕ ಗಲಭೆಯಲ್ಲಿ ಸಿಕ್ಕಿಕೊಂಡಿದ್ದ ನನ್ನನ್ನು ಅದರಿಂದ ಪಾರು ಮಾಡಿ ಬದುಕಿಸಿದರು. ಅವರಿಲ್ಲದಿದ್ದರೆ ನಾನು ಕೊಲ್ಲಲ್ಪಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದು ನಡೆದಿದ್ದು ಹೀಗೆ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 20 ರಂದು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಹಿಂಸೆಗೆ ತಿರುಗಿತು. ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿದ್ದಂತೆ ಉದ್ರಿಕ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಜಯ್ ಕುಮಾರ್ ಎಂಬ ಪೊಲೀಸ್ ಹಿಂಸಾತ್ಮಕ ಜನಸಮೂಹದಲ್ಲಿ ಸಿಲುಕಿದ್ದರು. ಅವರ ಮೇಲೆ ಕೆಲವರು ಹಲ್ಲೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಹಜ್ಜಿ ಖಾದಿರ್ ಎಂಬ ಮುಸ್ಲಿಂ ವ್ಯಕ್ತಿ ಅವರ ರಕ್ಷಣೆಗೆ ಬಂದರು. ಅವರನ್ನು ಜನಸಮೂಹದಿಂದ ಬೇರ್ಪಡಿಸಿ, ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಅವರನ್ನು ಪೊಲೀಸ್ ಠಾಣೆಗೆ ಕಳಿಸಿದರು.

“ನಾನು ಉದ್ರಿಕ್ತರ ನಡುವೆ ಸಿಲುಕೊಂಡಿದ್ದೆ. ಹಲ್ಲೆಯಿಂದ ನನ್ನ ತಲೆ ಮತ್ತು ಕೈಬೆರಳಿಗೆ ಗಾಯವಾಗಿತ್ತು. ಆಗ ಹಜ್ಜಿ ಖಾದಿರ್ ಸಾಹೆಬ್ ನನ್ನನ್ನು ಅಲ್ಲಿಂದ ಬಿಡಿಸಿಕೊಂಡು ಅವರ ಮನೆಗೆ ಕರೆದೊಯ್ದರು. ಅವರು ನನಗೆ ಕುಡಿಯಲು ನೀರು ಕೊಟ್ಟು ಬೇರೆ ಬಟ್ಟೆಗಳನ್ನು ನೀಡಿದರು. ನೀವು ಸುರಕ್ಷಿತವಾಗಿದ್ದೀರಿ ಚಿಂತಿಸಬೇಡಿ ಎಂದು ಭರವಸೆ ನೀಡಿದರು. ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಉತ್ತರ ಪ್ರದೇಶದ ಪೊಲೀಸ್‌ ಅಜಯ್‌ ಕುಮಾರ್ ಹೇಳುತ್ತಾರೆ.

“ಅವರು ನನ್ನ ಜೀವನದಲ್ಲಿ ದೇವದೂತನಂತೆ ಬಂದರು. ಅಂದು ಅವರಿಲ್ಲದಿದ್ದರೆ, ನಾನು ಕೊಲ್ಲಲ್ಪಡುತ್ತಿದ್ದೆ” ಎಂದು ಅವರು ಭಾವೋದ್ವೇಗದಿಂದ ಹೇಳಿದ್ದಾರೆ.

ಈ ಘಟನೆಯನ್ನು ನೆನಪಿಸಿಕೊಂಡ ಹಜ್ಜಿ ಖಾದಿರ್, “ಪೋಲಿಸ್ ಒಬ್ಬನನ್ನು ಜನಸಮೂಹವು ಸುತ್ತುವರೆದಿದೆ ಎಂದು ತಿಳಿದಾಗ ತಾನು ನಮಾಜ್ ಮುಗಿಸಿ ಬರುತ್ತಿದ್ದೆ. ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು ಓಡಿಹೋಗಿ ಅವರನ್ನು ಬಿಡಿಸಿದೆ. ನಾನು ಅವರನ್ನು ಉಳಿಸುತ್ತೇನೆ ಎಂದು ಭರವಸೆ ನೀಡಿದ್ದೆ. ಆ ಸಮಯದಲ್ಲಿ ಅವರ ಹೆಸರು ಸಹ ನನಗೆ ತಿಳಿದಿರಲಿಲ್ಲ. ನಾನು ಮಾಡಿದ್ದು ಮಾನವೀಯತೆಗಾಗಿ” ಎನ್ನುತ್ತಾರೆ.

ಹಜ್ಜಿ ಖಾದಿರ್‌ರವರ ಆ ಸಹಾಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ದೇಶ ಇರುವುದೆ ಹೀಗೆ ಬಹುತ್ವದ ಆಳವಾದ ಬೇರುಗಳಿಂದ ಎಂದು ಹಲವರು ಅಭಿನಂದನೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...