Homeಚಳವಳಿಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ...

ಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ…

- Advertisement -
- Advertisement -

ಎಲ್ಲೆಲ್ಲೂ ಸಿಎಎ ಎನ್‌ಆರ್‌ಸಿ ವಿರೋಧಿ ಹೋರಾಟಗಳು ಭುಗಿಲೆದ್ದಿವೆ. ಜನ ದಿನನಿತ್ಯ ಬೀದಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಮೇಲೆ ನೂರಾರು ಆರೋಪಗಳು ಕೇಳಿಬರುತ್ತಿವೆ. ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡುತ್ತಿದ್ದಾರೆ ಹಾಗಾಗಿ ಅವರನ್ನು ಜೈಲಿಗೆ ಹಾಕಬೇಕು, ಅವರನ್ನು ಥಳಿಸಬೇಕು, ಅವರ ಮೇಲೆ ಗುಂಡು ಹೊಡೆಯಬೇಕು, ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಆದರೆ ಉತ್ತರ ಪ್ರದೇಶದ ಪೊಲೀಸ್‌ ಅಜಯ್ ಕುಮಾರ್ ಎಂಬುವವರು ಮಾತ್ರ ಪ್ರತಿಭಟನಾನಿರತ ಈ ಮುಸ್ಲಿಂ ವ್ಯಕ್ತಿಯು ನನಗೆ ದೇವದೂತನಂತೆ ಕಂಡರು. ಹಿಂಸಾತ್ಮಕ ಗಲಭೆಯಲ್ಲಿ ಸಿಕ್ಕಿಕೊಂಡಿದ್ದ ನನ್ನನ್ನು ಅದರಿಂದ ಪಾರು ಮಾಡಿ ಬದುಕಿಸಿದರು. ಅವರಿಲ್ಲದಿದ್ದರೆ ನಾನು ಕೊಲ್ಲಲ್ಪಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದು ನಡೆದಿದ್ದು ಹೀಗೆ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 20 ರಂದು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಹಿಂಸೆಗೆ ತಿರುಗಿತು. ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿದ್ದಂತೆ ಉದ್ರಿಕ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಜಯ್ ಕುಮಾರ್ ಎಂಬ ಪೊಲೀಸ್ ಹಿಂಸಾತ್ಮಕ ಜನಸಮೂಹದಲ್ಲಿ ಸಿಲುಕಿದ್ದರು. ಅವರ ಮೇಲೆ ಕೆಲವರು ಹಲ್ಲೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಹಜ್ಜಿ ಖಾದಿರ್ ಎಂಬ ಮುಸ್ಲಿಂ ವ್ಯಕ್ತಿ ಅವರ ರಕ್ಷಣೆಗೆ ಬಂದರು. ಅವರನ್ನು ಜನಸಮೂಹದಿಂದ ಬೇರ್ಪಡಿಸಿ, ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಅವರನ್ನು ಪೊಲೀಸ್ ಠಾಣೆಗೆ ಕಳಿಸಿದರು.

“ನಾನು ಉದ್ರಿಕ್ತರ ನಡುವೆ ಸಿಲುಕೊಂಡಿದ್ದೆ. ಹಲ್ಲೆಯಿಂದ ನನ್ನ ತಲೆ ಮತ್ತು ಕೈಬೆರಳಿಗೆ ಗಾಯವಾಗಿತ್ತು. ಆಗ ಹಜ್ಜಿ ಖಾದಿರ್ ಸಾಹೆಬ್ ನನ್ನನ್ನು ಅಲ್ಲಿಂದ ಬಿಡಿಸಿಕೊಂಡು ಅವರ ಮನೆಗೆ ಕರೆದೊಯ್ದರು. ಅವರು ನನಗೆ ಕುಡಿಯಲು ನೀರು ಕೊಟ್ಟು ಬೇರೆ ಬಟ್ಟೆಗಳನ್ನು ನೀಡಿದರು. ನೀವು ಸುರಕ್ಷಿತವಾಗಿದ್ದೀರಿ ಚಿಂತಿಸಬೇಡಿ ಎಂದು ಭರವಸೆ ನೀಡಿದರು. ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಉತ್ತರ ಪ್ರದೇಶದ ಪೊಲೀಸ್‌ ಅಜಯ್‌ ಕುಮಾರ್ ಹೇಳುತ್ತಾರೆ.

“ಅವರು ನನ್ನ ಜೀವನದಲ್ಲಿ ದೇವದೂತನಂತೆ ಬಂದರು. ಅಂದು ಅವರಿಲ್ಲದಿದ್ದರೆ, ನಾನು ಕೊಲ್ಲಲ್ಪಡುತ್ತಿದ್ದೆ” ಎಂದು ಅವರು ಭಾವೋದ್ವೇಗದಿಂದ ಹೇಳಿದ್ದಾರೆ.

ಈ ಘಟನೆಯನ್ನು ನೆನಪಿಸಿಕೊಂಡ ಹಜ್ಜಿ ಖಾದಿರ್, “ಪೋಲಿಸ್ ಒಬ್ಬನನ್ನು ಜನಸಮೂಹವು ಸುತ್ತುವರೆದಿದೆ ಎಂದು ತಿಳಿದಾಗ ತಾನು ನಮಾಜ್ ಮುಗಿಸಿ ಬರುತ್ತಿದ್ದೆ. ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು ಓಡಿಹೋಗಿ ಅವರನ್ನು ಬಿಡಿಸಿದೆ. ನಾನು ಅವರನ್ನು ಉಳಿಸುತ್ತೇನೆ ಎಂದು ಭರವಸೆ ನೀಡಿದ್ದೆ. ಆ ಸಮಯದಲ್ಲಿ ಅವರ ಹೆಸರು ಸಹ ನನಗೆ ತಿಳಿದಿರಲಿಲ್ಲ. ನಾನು ಮಾಡಿದ್ದು ಮಾನವೀಯತೆಗಾಗಿ” ಎನ್ನುತ್ತಾರೆ.

ಹಜ್ಜಿ ಖಾದಿರ್‌ರವರ ಆ ಸಹಾಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ದೇಶ ಇರುವುದೆ ಹೀಗೆ ಬಹುತ್ವದ ಆಳವಾದ ಬೇರುಗಳಿಂದ ಎಂದು ಹಲವರು ಅಭಿನಂದನೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...